Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪೆಲೆಸ್ತೀನಿಯನ್ ಸಂಗಾತಿಗಳಿಗೆ...

ಪೆಲೆಸ್ತೀನಿಯನ್ ಸಂಗಾತಿಗಳಿಗೆ ಪ್ರಜಾಹಕ್ಕು ನಿಷೇಧಿಸುವ ʼಪೌರತ್ವ ಕಾಯ್ದೆʼಗೆ ಇಸ್ರೇಲ್ ಸಂಸತ್ತು ಅನುಮೋದನೆ‌

ವಾರ್ತಾಭಾರತಿವಾರ್ತಾಭಾರತಿ12 March 2022 12:04 AM IST
share

 ಜೆರುಸಲೇಂ, ಮಾ.11: ಆಕ್ರಮಿತ ಪಶ್ಚಿಮದಂಡೆ ಅಥವಾ ಗಾಝಾ ಪಟ್ಟಿಯಲ್ಲಿನ ಪೆಲೆಸ್ತೀನಿಯರು ಇಸ್ರೇಲ್ ಪ್ರಜೆಗಳನ್ನು ವಿವಾಹವಾಗಿ ಪ್ರಜಾಹಕ್ಕುಗಳನ್ನು ಪಡೆಯುವುದನ್ನು ನಿಷೇಧಿಸುವ ಕಾನೂನಿಗೆ ಇಸ್ರೇಲ್ ಸಂಸತ್ತು ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಇದರಿಂದ ಸಾವಿರಾರು ಪೆಲೆಸ್ತೀನ್ ಕುಟುಂಬಗಳು ವಲಸೆ ಹೋಗುವ ಅಥವಾ ಪ್ರತ್ಯೇಕವಾಗಿ ಜೀವಿಸುವ ಅನಿವಾರ್ಯತೆ ಎದುರಾಗಿದೆ. ‌

ʼಪೌರತ್ವ ಕಾಯ್ದೆʼ ಎಂಬ ಹೆಸರಿನ ಕಾನೂನಿಗೆ ಇಸ್ರೇಲ್ ಸಂಸತ್ತಿನಲ್ಲಿ 45-15 ಮತಗಳಿಂದ ಅನುಮೋದನೆ ದೊರಕಿದೆ. ಇದುವರೆಗೆ ಚಾಲ್ತಿಯಲ್ಲಿದ್ದ, ಇದೇ ಉದ್ದೇಶದ ತಾತ್ಕಾಲಿಕ ಕಾಯ್ದೆಯ ಸ್ಥಾನದಲ್ಲಿ ಈ ಕಾಯ್ದೆ ಜಾರಿಯಾಗಲಿದೆ. 2003ರಲ್ಲಿ ಅಂಗೀಕಾರಗೊಂಡಿದ್ದ ತಾತ್ಕಾಲಿಕ ಕಾಯ್ದೆಯನ್ನು ಪ್ರತೀ ವರ್ಷ ನವೀಕರಿಸಲಾಗುತ್ತಿತ್ತು. ಆದರೆ ಬಹುಮತದ ಕೊರತೆಯಿಂದ ಕಳೆದ ಜುಲೈಯಲ್ಲಿ ತಾತ್ಕಾಲಿಕ ಮಸೂದೆಯ ನವೀಕರಣ ಸಾಧ್ಯವಾಗಿಲ್ಲ. 

ಇಸ್ರೇಲ್ ದೇಶದ ಭದ್ರತೆ ಮತ್ತು ಯೆಹೂದಿ ದೇಶವಾಗಿ ಅದರ ಬಲವರ್ಧನೆಗೆ ಪೂರಕವಾದ ಕಾಯ್ದೆಗೆ ಅನುಮೋದನೆ ಪಡೆಯಲು ಸಮ್ಮಿಶ್ರ ಸರಕಾರ ಮತ್ತು ವಿಪಕ್ಷಗಳ ಶಕ್ತಿಗಳು ಯಶಸ್ವಿಯಾಗಿವೆ ಎಂದು ಇಸ್ರೇಲ್ ನ ಆಂತರಿಕ ಸಚಿವಾಲಯ ಹೇಳಿದೆ. 120 ಸದಸ್ಯ ಬಲದ ಸಂಸತ್ತಿನಲ್ಲಿ ಹಲವು ಸದಸ್ಯರು ಮತದಾನದಲ್ಲಿ ಭಾಗವಹಿಸಲಿಲ್ಲ. ನೂತನ ಕಾಯ್ದೆ ಒಂದು ವರ್ಷದ ವಾಯಿದೆ ಹೊಂದಿದ್ದು ಇದರ ಪ್ರಕಾರ, ಇಸ್ರೇಲ್ ಪ್ರಜೆಗಳ ಪೆಲೆಸ್ತೀನ್ ಸಂಗಾತಿ(ಪತಿ/ಪತ್ನಿ) 2 ವರ್ಷದ ತಾತ್ಕಾಲಿಕ ನಿವಾಸ ಪರವಾನಿಗೆ(ರೆಸಿಡೆನ್ಸಿ ಪರ್ಮಿಟ್) ಪಡೆಯಬಹುದು. ಆದರೆ ಭದ್ರತೆಯ ಕಾರಣಕ್ಕೆ ಇದನ್ನು ಯಾವಾಗ ಬೇಕಾದರೂ ರದ್ದುಗೊಳಿಸಬಹುದಾಗಿದೆ. 

1948ರ ಇಸ್ರೇಲ್-ಪೆಲೆಸ್ತೀನ್ ಯುದ್ಧದ ಸಂದರ್ಭ ಮನೆಬಿಟ್ಟು ಪಲಾಯನ ಮಾಡಿರುವ ಸಾವಿರಾರು ಪೆಲೆಸ್ತೀನೀಯರು ಮತ್ತೆ ತಮ್ಮ ಮನೆಗೆ ಮರಳುವ ಹಕ್ಕನ್ನು ಪ್ರತಿಪಾದಿಸುವುದನ್ನು ತಡೆಯುವ ಉದ್ದೇಶದ ಕಾಯ್ದೆ ಇದಾಗಿದೆ ಎಂದು ಸಂಸತ್ತಿನ ಸದಸ್ಯರು ಹೇಳಿದ್ದಾರೆ. ಇಸ್ರೇಲ್ ದೇಶವು ಯಹೂದಿ ಸ್ವರೂಪವನ್ನು ಹೊಂದಿದೆ ಮತ್ತು ಹೀಗೆಯೇ ಮುಂದುವರಿಯಲಿದೆ ಎಂದು ಕಟ್ಟಾ ಬಲಪಂಥೀಯ ಪಕ್ಷ ಝಿಯೊನಿಸ್ಟ್ ಪಕ್ಷದ ಸದಸ್ಯ ಸಿಮ್ಚ ರಾಥ್ಮನ್ ಪ್ರತಿಕ್ರಿಯಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X