Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರಾಜ್ಯದಲ್ಲಿ ವೆಚ್ಚವಾಗದೆ ಕೊಳೆಯುತ್ತಿರುವ...

ರಾಜ್ಯದಲ್ಲಿ ವೆಚ್ಚವಾಗದೆ ಕೊಳೆಯುತ್ತಿರುವ 20 ಸಾವಿರ ಕೋ.ರೂ. ಅನುದಾನ!

ಪ್ರಗತಿ ಪರಿಶೀಲನೆ ಸಭೆಯಲ್ಲಿ ಬಹಿರಂಗ

ಜಿ.ಮಹಾಂತೇಶ್ಜಿ.ಮಹಾಂತೇಶ್12 March 2022 8:21 AM IST
share
ರಾಜ್ಯದಲ್ಲಿ ವೆಚ್ಚವಾಗದೆ ಕೊಳೆಯುತ್ತಿರುವ 20 ಸಾವಿರ ಕೋ.ರೂ. ಅನುದಾನ!

2021-22ನೇ ಸಾಲಿನ ಆಯವ್ಯಯದಲ್ಲಿ ಒಟ್ಟು 46 ಆಡಳಿತ ಇಲಾಖೆಗಳಿಗೆ ಒದಗಿಸಿದ್ದ 2,46,206.92 ಕೋಟಿ ರೂ.ನಲ್ಲಿ ಅಕ್ಟೋಬರ್ ಅಂತ್ಯಕ್ಕೆ 1,11,456.19 ಕೋಟಿ ರೂ. ವೆಚ್ಚವಾಗಿತ್ತು. ಖರ್ಚು ಮಾಡಲು ಇನ್ನೂ 1,34,750.73 ಕೋಟಿ ರೂ. ಉಳಿಸಿಕೊಂಡಿತ್ತು. ಇದು ಆಯವಯ್ಯದಲ್ಲಿ ಒದಗಿಸಿದ್ದ ಒಟ್ಟು ಅನುದಾನದ ಪೈಕಿ ಶೇ.45ರಷ್ಟು ಮಾತ್ರ ವೆಚ್ಚ ಮಾಡಲಾಗಿತ್ತು. ಅಕ್ಟೋಬರ್ ನಂತರದ 4 ತಿಂಗಳಲ್ಲಿ ಅಂದರೆ ಫೆಬ್ರವರಿ 2022ರ ಅಂತ್ಯಕ್ಕೆ 30,595.81 ಕೋಟಿ ರೂ. ಸೇರಿದಂತೆ ಒಟ್ಟಾರೆ 1,42,052 ಕೋಟಿ ರೂ. ವೆಚ್ಚವಾಗಿದೆ.

ಬೆಂಗಳೂರು: 2021-22ನೇ ಸಾಲಿನ ಆರ್ಥಿಕ ವರ್ಷ ಕೊನೆಗೊಳ್ಳಲು ಕೇವಲ 21 ದಿನಗಳಿದ್ದರೂ 2022ರ ಫೆಬ್ರವರಿವರೆಗೆ ರೂ. 20,000 ಕೋಟಿಯಷ್ಟು ಅನುದಾನ ವೆಚ್ಚವಾಗದೇ ಬಾಕಿ ಉಳಿದಿರುವುದು ಇದೀಗ ಬಹಿರಂಗವಾಗಿದೆ.

 ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಕುರಿತು 2022ರ ಫೆ.25ರಂದು ನಡೆದಿದ್ದ ಸಭೆಯಲ್ಲಿ ಯೋಜನಾ ಇಲಾಖೆಯ ಅಧಿಕಾರಿಗಳು ವಿವಿಧ ಯೋಜನೆಗಳಿಗೆ ಒದಗಿಸಿದ್ದ ಒಟ್ಟು ಅನುದಾನದ ಪೈಕಿ 20,000 ಕೋಟಿ ರೂ. ವೆಚ್ಚವಾಗಿಲ್ಲ ಎಂಬ ಮಾಹಿತಿಯನ್ನು ಒದಗಿಸಿದ್ದಾರೆ. ಸಭೆ ನಡಾವಳಿಗಳ ಪ್ರತಿಯು ‘the-file.in’ಗೆ ಲಭ್ಯವಾಗಿದೆ.

 ಜನವರಿ 2022ರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರ್ಥಕ 6 ತಿಂಗಳು ಎಂಬ ಕಾರ್ಯಕ್ರಮ ನಡೆಸಿದ್ದರು. ಎಲ್ಲಾ ಇಲಾಖೆಗಳು ಸಾಧನೆ ತೋರಿವೆ ಎಂಬ ಪಟ್ಟಿಯನ್ನೂ ಒದಗಿಸಿದ್ದರು. ಆದರೀಗ ಪ್ರಸ್ತುತ ಸಾಲಿನಲ್ಲಿ ಫೆಬ್ರವರಿವರೆಗೆ 20,000 ಕೋಟಿ ರೂ.ಯಷ್ಟು ಅನುದಾನವು ವೆಚ್ಚವಾಗದಿರುವ ಸಂಗತಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯೂ ಸೇರಿದಂತೆ ಒಟ್ಟು 5 ಇಲಾಖೆಗಳು ಪ್ರಗತಿಯಲ್ಲಿ ಶೇ.40ರ ಗಡಿಯನ್ನು ದಾಟದಿರುವುದು, ಬಹುತೇಕ ಇಲಾಖೆಗಳು ಆರ್ಥಿಕ ವರ್ಷ ಕೊನೆಗೊಳ್ಳುತ್ತಿದ್ದರೂ ಇನ್ನೂ ಕ್ರಿಯಾ ಯೋಜನೆಗಳಿಗೆ ಅನುಮೋದನೆ ಪಡೆದಿಲ್ಲ ಎಂಬುದು ಮುನ್ನೆಲೆಗೆ ಬಂದಿದೆ.

 2021-22ನೇ ಸಾಲಿನ ಜನವರಿ ಅಂತ್ಯದವರೆಗೆ ತೋಟಗಾರಿಕೆ, ವಾಣಿಜ್ಯ ಕೈಗಾರಿಕೆ, ಹಿಂದುಳಿದ ವರ್ಗಗಳು, ಗ್ರಾಮೀಣಾಭಿವೃದ್ಧಿ, ವಸತಿ ಇಲಾಖೆಗಳು ಶೇ.50ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿವೆ. ಅದರಲ್ಲೂ ತುಂಬಾ ಮುಖ್ಯವಾಗಿ ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮಗಳಲ್ಲಿ ಕಡಿಮೆ ಪ್ರಗತಿಯಾಗಿರುವುದು ನಡಾವಳಿಯಿಂದ ಗೊತ್ತಾಗಿದೆ.

 ವಸತಿ ಇಲಾಖೆಯಲ್ಲಿಯೂ ಶೇ.50ಕ್ಕಿಂತ ಕಡಿಮೆ ಪ್ರಗತಿಯಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ, ಗ್ರಾಮೀಣ ಅಡಿ ಹೆಚ್ಚಿನ ಪ್ರಗತಿ ಕಂಡಿಲ್ಲ. ಮಾರ್ಚ್ ತಿಂಗಳ ಅಂತ್ಯಕ್ಕೆ ಭೌತಿಕ ಪ್ರಗತಿ ಸಾಧಿಸಲು ಮುಖ್ಯ ಕಾರ್ಯದರ್ಶಿ ಸೂಚಿಸಿರುವುದು ತಿಳಿದು ಬಂದಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕೇವಲ ಶೇ.39.82ರಷ್ಟು ಕಡಿಮೆ ಪ್ರಗತಿಯಾಗಿದೆ. ಇದಕ್ಕೆ ಸಭೆಯಲ್ಲಿ ಉತ್ತರಿಸಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಇಲಾಖೆಯ ಅತ್ಯಂತ ದೊಡ್ಡ ಯೋಜನೆಯು ಹಾಸ್ಟೆಲ್‌ಗಳ ನಿರ್ವಹಣೆಯಾಗಿದೆ. ಈ ವರ್ಷ ಜಿಲ್ಲಾ ವಲಯದಿಂದ 700.00 ಕೋಟಿ ರೂ. ಮತ್ತು ರಾಜ್ಯ ವಲಯದಿಂದ 50.00 ಕೋಟಿ ರೂ. ಬಂದಿದೆ. ಕಳೆದ 5 ತಿಂಗಳುಗಳಿಂದ ಹಾಸ್ಟೆಲ್‌ಗಳು ನಡೆಯದ ಕಾರಣ ಶೇ. 39.82ರಷ್ಟು ಪ್ರಗತಿಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಇಲಾಖೆಗೆ ರಾಜ್ಯವಲಯದಿಂದ ನೀಡಲಾಗಿದ್ದ ಅನುದಾನವನ್ನು ಪದವಿ ಪೂರ್ವ ವಿದ್ಯಾರ್ಥಿ ವೇತನಕ್ಕೆ ಮರು ಹಂಚಿಕೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಶುಲ್ಕ ವಿನಾಯಿತಿಯಡಿ 400.00 ಕೋಟಿ ರೂ. ಅನುದಾನ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ 50.00 ಕೋಟಿ ರೂ.ಗಳನ್ನು ಬ್ಯಾಂಕ್‌ನಲ್ಲಿ ಇರಿಸಿರುವುದು ತಿಳಿದು ಬಂದಿದೆ.

ಅದೇ ರೀತಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಲ್ಲಿಯೂ ಶೇ.39.32ರಷ್ಟು ಕಡಿಮೆ ಪ್ರಗತಿಯಾಗಿದೆ. ಎಂಎಸ್‌ಎಂಇ ಅಡಿ ಇನ್ನು 170.00 ಕೋಟಿ ರೂ. ಆರ್ಥಿಕ ಇಲಾಖೆಯಿಂದ ಬಿಡುಗಡೆಗೆ ಬಾಕಿ ಇದೆ. ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ಘಟಕಗಳ ಸ್ಥಾಪನೆಗೆ ಸಹಾಯಾನುದಾನ ಯೋಜನೆಗೆ ಕಳೆದ ವರ್ಷ ಒದಗಿಸಿದ್ದ ಹಣವನ್ನು ಖರ್ಚು ಮಾಡದ ಅಧಿಕಾರಿಗಳು ಈ ವರ್ಷ ವೆಚ್ಚ ಮಾಡಲಿದ್ದಾರೆ.

ತೋಟಗಾರಿಕೆ ಇಲಾಖೆಯಲ್ಲಿಯೂ ಶೇ.35.89ರಷ್ಟು ಕಡಿಮೆ ಪ್ರಗತಿಯಾಗಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಕಾರ್ಯಕ್ರಮದಡಿ ಶೂನ್ಯ ಬಿಡುಗಡೆ ಮತ್ತು ಶೂನ್ಯ ವೆಚ್ಚವಾಗಿದೆ. ರೈತರು ಸಣ್ಣ ಅಥವಾ ಅತೀ ಸಣ್ಣ ರೈತರು ಎಂದು ಕಂದಾಯ ಇಲಾಖೆಯಿಂದ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಪಡೆಯಬೇಕಿದೆ. ಆದರೆ ನಾಡಕಚೇರಿ ಸಾಫ್ಟ್‌ವೇರ್‌ನಿಂದ ಇದು ಕಷ್ಟ ಸಾಧ್ಯವಾಗಿದೆ ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದ್ದಾರೆ.

ಇನ್ನು, ಕೇಂದ್ರ ಪುರಸ್ಕೃತ ಯೋಜನೆಗಳಡಿಯಲ್ಲಿ 2020-21ನೇ ಸಾಲಿನಲ್ಲಿ ಕೇಂದ್ರದ ಅನುದಾನ ರೂ. 18,091.44 ಕೋಟಿಗಳ ಪೈಕಿ 13,010.11 ಕೋಟಿ ರೂ. ಬಿಡುಗಡೆಯಾಗಿತ್ತು. 2021-22ನೇ ಸಾಲಿನಲ್ಲಿ ಕೇಂದ್ರದ ಅನುದಾನ 19,461.94 ಕೋಟಿ ರೂ. ಪೈಕಿ 16, 529.71 ಕೋಟಿ ರೂ. ಬಿಡುಗಡೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.13ರಷ್ಟು ಹೆಚ್ಚಿಗೆ ಬಿಡುಗಡೆಯಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದ್ದಾರೆ.

ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಡಿಯಲ್ಲಿ ಕೇಂದ್ರದಿಂದ ಕಡಿಮೆ ಬಿಡುಗಡೆಯಾಗಿರುವ ಕಾರ್ಯಕ್ರಮಗಳ ಪೈಕಿ ಸ್ವಚ್ಛ ಭಾರತ್, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪೋಷಣ್ ಅಭಿಯಾನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮಗಳಲ್ಲಿ ಶೂನ್ಯ ಬಿಡುಗಡೆಯಾಗಿದೆ. ಹಾಗೆಯೇ ಕೇಂದ್ರ ಪುರಸ್ಕೃತ ಯೋಜನೆಯಾದ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ಕೇಂದ್ರದಿಂದ ಬಿಡಿಗಾಸೂ ಬಿಡುಗಡೆಯಾಗಿಲ್ಲ ಎಂಬ ಸಂಗತಿ ನಡಾವಳಿಯಿಂದ ಗೊತ್ತಾಗಿದೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಮತ್ತು ರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿ ಕೇಂದ್ರದಿಂದ 86.27 ಕೋಟಿ ರೂ. ಮತ್ತು 49.26 ಕೋಟಿ ರೂ. ಬಿಡುಗಡೆಗೆ ಬಾಕಿ ಇದೆ. 2021-22ನೇ ಸಾಲಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ (ಎಸ್‌ಡಿಪಿ) ಒಟ್ಟು ಅನುದಾನಕ್ಕೆ ಶೇ.39 ರಷ್ಟು ಪ್ರಗತಿಯಾಗಿದೆ. ಪ್ರಸಕ್ತ ಸಾಲಿನಲ್ಲಿ ಕ್ರಿಯಾ ಯೋಜನೆಗಳು ವಿಳಂಬವಾಗಿ ಅನುಮೋದನೆಯಾಗಿರುವುದರಿಂದ ಕಡಿಮೆ ಪ್ರಗತಿ ಸಾಧಿಸಿದೆ ಎಂದು ಸಭೆಗೆ ವಿವರ ಒದಗಿಸಲಾಗಿದೆ. ಈ ಪಟ್ಟಿಯಲ್ಲಿ ಜಲ ಸಂಪನ್ಮೂಲ, ಪ್ರಾಥಮಿಕ, ಪ್ರೌಢಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರಿಗೆ, ಸಣ್ಣ ನೀರಾವರಿ, ಆರೋಗ್ಯ, ಉನ್ನತ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಇಲಾಖೆಗಳು ಸೇರಿವೆ.

ಬಾಹ್ಯಾನುದಾನಿತ (ಇಎಪಿ) ಕಾರ್ಯಕ್ರಮಗಳಡಿಯಲ್ಲಿ ಒಟ್ಟು 2,545.41 ಕೋಟಿ ರೂ.ಗಳಡಿಯಲ್ಲಿ 1,445.25 ಕೋಟಿ ರೂ. ವೆಚ್ಚವಾಗಿದೆ. ಒಟ್ಟು ಅನುದಾನಕ್ಕೆ ಶೇ.56.78ರಷ್ಟು ಮತ್ತು ಲಭ್ಯವಿರುವ ಅನುದಾನಕ್ಕೆ ಶೇ. 80.08ರಷ್ಟಾಗಿದೆ. ಇಂಧನ ಇಲಾಖೆಯಲ್ಲಿ ಶೂನ್ಯ ವೆಚ್ಚವಾಗಿದೆ. ಉಳಿದಂತೆ ಜಲಸಂಪನ್ಮೂಲ, ಲೋಕೋಪಯೋಗಿ ಇಲಾಖೆಗಳಲ್ಲಿ ಕಡಿಮೆ ಪ್ರಗತಿಯಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X