ಯುವ ಜನಾಂಗದಲ್ಲಿ ಕೃಷಿ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ : ನಳಿನ್ ಕುಮಾರ್ ಕಟೀಲ್

ಮುಲ್ಕಿ: "ಯುವ ಜನಾಂಗದಲ್ಲಿ ಕೃಷಿ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದ್ದು ಯುವಕರು ಮುಂದೆ ಬಂದು ಕೃಷಿಮೇಳವನ್ನು ಪ್ರೋತ್ಸಾಹಿಸಬೇಕು" ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಮುಲ್ಕಿ ಸಮೀಪದ ಕೊಲ್ನಾಡು ಕೃಷಿ ಮೇಳದ ಕೃಷಿಸಿರಿ 2022 ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೃಷಿ ಸವಲತ್ತುಗಳನ್ನು ಒದಗಿಸುತ್ತಿದ್ದು ಕೃಷಿಕರು ಪ್ರಯೋಜನಗಳನ್ನು ಪಡೆದು ಕೃಷಿಗೆ ಪ್ರೋತ್ಸಾಹ ನೀಡಬೇಕು ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರು ಬಳಿಕ ಕೃಷಿ ಮೇಳ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ವೇದಿಕೆಯಲ್ಲಿ ಕೃಷಿಮೇಳದ ವತಿಯಿಂದ ಅಧ್ಯಕ್ಷ ವಿಜಯ ಶೆಟ್ಟಿ ಸಂಸದರನ್ನು ನೆನಪಿನ ಕಾಣಿಕೆ ನೀಡಿ ಗೌರವಿಸಿದರು
ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ, ಮಂಡಲಾಧ್ಯಕ್ಷ ಸುನಿಲ್ ಆಳ್ವ, ಕೃಷಿ ಮೇಳದ ಅಧ್ಯಕ್ಷ ವಿಜಯ ಶೆಟ್ಟಿ, ವಿನೋದ್ ಸಾಲ್ಯಾನ್ ಬೆಳ್ಳಾಯರು ಮತ್ತಿತರರು ಉಪಸ್ಥಿತರಿದ್ದರು.