ಚಿಕ್ಕಮಗಳೂರು; ಕಾರು - ಬೈಕ್ ಢಿಕ್ಕಿ: ದಂಪತಿ ಮೃತ್ಯು

ಚಿಕ್ಕಮಗಳೂರು : ಕಾರು ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ದಂಟರಮಕ್ಕಿ ಬಳಿ ನಡೆದಿದೆ.
ಬೀರೂರು ಕಾರೇಹಳ್ಳಿ ಮೂಲದ ಆನಂದ್ (35) ಮತ್ತು ಲಕ್ಷ್ಮೀ (33) ಮೃತ ದಂಪತಿ ಎಂದು ಗುರುತಿಸಲಾಗಿದೆ.
ಕಾರು ಢಿಕ್ಕಿಯಾಗುತ್ತಿದ್ದಂತೆ ಬೈಕ್ ಕಂದಕಕ್ಕೆ ಬಿದ್ದಿದೆ. ಇದರಿಂದ ಬೈಕ್ ಹೊತ್ತಿ ಉರಿದಿದೆ. ದಂಪತಿ ಬೈಕಿನಲ್ಲಿ ಧರ್ಮಸ್ಥಳಕ್ಕೆ ಹೋಗುವಾಗ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇಲ್ಲಿನ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Next Story





