Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಂದಿನ ವಿಶ್ವಯುದ್ಧ ನಡೆದರೆ ಅದು...

ಮುಂದಿನ ವಿಶ್ವಯುದ್ಧ ನಡೆದರೆ ಅದು ನೀರಿಗಾಗಿ ನಡೆದೀತು: ಡಾ. ಜಗದೀಶ್ ಬಾಳ

ಕೃಷಿ ಮೇಳದಲ್ಲಿ "ಜಲ ಸಂರಕ್ಷಣೆ" ವಿಚಾರಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ13 March 2022 12:41 PM IST
share
ಮುಂದಿನ ವಿಶ್ವಯುದ್ಧ ನಡೆದರೆ ಅದು ನೀರಿಗಾಗಿ ನಡೆದೀತು: ಡಾ. ಜಗದೀಶ್ ಬಾಳ

ಮಂಗಳೂರು, (ಕೊಲ್ನಾಡು) : ರಾಜ್ಯಮಟ್ಟದ ಕೃಷಿ ಮೇಳದ ಕೊನೆಯ ದಿನವಾದ ರವಿವಾರ ಬೆಳಗ್ಗೆ ಶ್ರೀ ರಾಮಕೃಷ್ಣ ಪೂಂಜಾ ವೇದಿಕೆಯಲ್ಲಿ 'ಅದಾನಿ' ಪ್ರಾಯೋಜಿತ "ಜಲಸಂರಕ್ಷಣೆ" ವಿಚಾರಗೋಷ್ಠಿ ನಡೆಯಿತು. ಬಲ್ಮಠ ಸರಕಾರಿ ಮಹಿಳಾ ಕಾಲೇಜ್ ಇದರ ಪ್ರಾಂಶುಪಾಲರಾದ ಜಗದೀಶ್ ಬಾಳ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.

ಗೋಷ್ಠಿಯಲ್ಲಿ ಮಾತಾಡುತ್ತಾ, "ಮುಂದಿನ ದಿನಗಳಲ್ಲಿ ವಿಶ್ವಯುದ್ಧ ನಡೆದರೆ ಅದು ನೀರಿಗಾಗಿಯೇ ನಡೆದೀತು. ಯಾಕೆಂದರೆ ಬ್ಲೂ ಪ್ಲಾನೆಟ್ ಎಂದು ಕರೆಯಲ್ಪಡುವ ಭೂಮಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇಲ್ಲ. ಉಪ್ಪುನೀರಿನ ಪ್ರಮಾಣ ಹೆಚ್ಚಿದ್ದು ಅದನ್ನು ಬಳಸಲು ಸಾಧ್ಯವಿಲ್ಲ. 2.5% ಮಾತ್ರ ಸಿಹಿನೀರು ಇದ್ದು ಇದನ್ನು ಮನುಷ್ಯ ಮಾತ್ರವಲ್ಲ ಎಲ್ಲಾ ಪ್ರಾಣಿ ಪಕ್ಷಿಗಳು ಬಳಸಬೇಕು. ಹೀಗಾಗಿ ನೀರನ್ನು ಮಿತಿ ಮೀರಿ ಬಳಸಬಾರದು. ನೀರಿಗಾಗಿ ಈಗಾಗಲೇ ಗಲಾಟೆ ನಡೆಯುತ್ತಿದ್ದು ಗೋಧಿ, ಭತ್ತ ಬೆಳೆಯುವ ಭೂಮಿಯಲ್ಲಿ ನೀರಿನ ಅಭಾವ ಕಾಡುತ್ತಿದೆ. ಭೂಮಿ ಕೇವಲ ನೀರನ್ನು ಹಿಡಿದಿಡುವ ಪಾತ್ರೆ ಮಾತ್ರ. ಭೂಮಿಯ ಅಡಿಯಲ್ಲಿ ನೀರು ಉತ್ಪತ್ತಿಯಾಗುವುದಿಲ್ಲ. ಬೋರ್ ವೆಲ್ ನೀರು ಕುಡಿಯಲು ಯೋಗ್ಯವಲ್ಲ. ಯಾಕೆಂದರೆ ಭೂಮಿಯ ಅಡಿಯಲ್ಲಿ ಸಾವಿರಾರು ವರ್ಷಗಳ ಕಾಲ ಹಿಡಿದಿಟ್ಟ ನೀರು ಬೇಡವಾದ ಖನಿಜಗಳಿಂದ ಯುಕ್ತವಾಗಿದ್ದು ಅರೋಗ್ಯಕ್ಕೆ ಹಾನಿಕರವಾಗಿದೆ. ಬೆಂಗಳೂರಲ್ಲಿ ಕೆರೆ ಒತ್ತುವರಿ ಮಾಡಿ ಮೆಜೆಸ್ಟಿಕ್ ಬಸ್ ನಿಲ್ದಾಣ, ಸ್ಟೇಡಿಯಂ, ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಲಾಗಿದ್ದು ಅದರ ಪರಿಣಾಮ ಈಗಾಗಲೇ ನೋಡುತ್ತಿದ್ದೇವೆ. ಮುಲ್ಕಿ, ಸುರತ್ಕಲ್, ಮಂಗಳೂರಿನಲ್ಲಿ ಹಿಂದೆ ಸಾಕಷ್ಟು ಸಂಖ್ಯೆಯ ಕೆರೆಗಳಿತ್ತು ಆದರೆ ಈಗ ಕೆರೆಗಳು ಮಾಯವಾಗಿವೆ. ಅಸುಪಾಸಿನ ಕೈಗಾರಿಕೆಗಳು ನೀರಿಲ್ಲದೆ ಬೇಸಿಗೆಯಲ್ಲಿ ಬಂದ್ ಆಗುತ್ತಿವೆ. ಎಂ ಸಿ ಎಫ್, ಎಂ ಆರ್ ಪಿ ಎಲ್ ನಲ್ಲೂ ಇದೇ ಪರಿಸ್ಥಿತಿ. ಆದರೆ ಇದು ದೊಡ್ಡ ಸುದ್ದಿಯಾಗುವುದಿಲ್ಲ. ನೀರಿನ ಮೂಲ ಮರಗಳು. ಮಳೆ ಬರುವಾಗ ನಾವು ಮರದಡಿ ನಿಲ್ಲುತ್ತೇವೆ ಆದರೆ ಮಳೆ ನಿಂತ ಬಳಿಕ ಅದರಡಿ ನಿಂತರೆ ಹನಿಗಳಿಂದ ಒದ್ದೆಯಾಗುತ್ತೇವೆ. ಹಿಂದೆ ಮರ ಕಡಿಯಲು ಭಯ ಪಡುತ್ತಿದ್ದರು. ಭಟ್ರ ಬಳಿ ಕೇಳಿ ಅನುಮತಿ ಸಿಕ್ಕ ಮೇಲಷ್ಟೇ ಕಡಿಯುತ್ತಿದ್ದರು. ಆದರೆ ಈಗ ಪರಿಸ್ಥಿತಿ ಹಾಗಿಲ್ಲ ಬೇಕಾಬಿಟ್ಟಿ ಮರ ಕಡಿಯಲಾಗುತ್ತದೆ. ನದಿಗಳು ಬರಿದಾಗುತ್ತಿವೆ. ಮಂಗಳೂರಿನಲ್ಲಿ ತ್ಯಾಜ್ಯ ನೀರು ಮರುಬಳಕೆ ಬಗ್ಗೆ ಭಾಷಣ ಬಿಗಿಯುತ್ತಾರೆ. ಆದರೆ ಅದು ಕೇವಲ ಬಾಯಿಮಾತಿಗೆ ಮಾತ್ರ ಸೀಮಿತವಾಗಿದೆ ಎಂದು ಹೇಳಿದರು.

ಎಕ್ಕಾರ್ ಸದಾಶಿವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದಯಾಸಾಗರ್ ಪೂಂಜಾ, ಪುಷ್ಪ, ಪಿಡಿಒ ರಮೇಶ್ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X