Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಲನಶೀಲತೆ ಕಳೆದುಕೊಂಡ ಪ್ರಜಾಪ್ರಭುತ್ವ:...

ಚಲನಶೀಲತೆ ಕಳೆದುಕೊಂಡ ಪ್ರಜಾಪ್ರಭುತ್ವ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ15 March 2022 12:00 AM IST
share
ಚಲನಶೀಲತೆ ಕಳೆದುಕೊಂಡ ಪ್ರಜಾಪ್ರಭುತ್ವ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು, ಮಾ. 14: ‘ಶಾಸನಸಭೆ ಜನರ ಆಶೋತ್ತರಗಳ ಕನ್ನಡಿ ಆಗಬೇಕು, ಸಾಮಾನ್ಯ ಜನರ ಸಮಸ್ಯೆಗಳ ಪರಿಹಾರಕ್ಕೆ ವೇದಿಕೆಯಾಗಬೇಕು. ಆದರೆ, ನಮ್ಮ ಶಾಸನಸಭೆ ಆ ನಿಟ್ಟಿನಲ್ಲಿ ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತಿದೆ ಎಂಬುದು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅಗತ್ಯವಿದೆ' ಎಂದು ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಸಲಹೆ ಮಾಡಿದ್ದಾರೆ.

ಸೋಮವಾರ ಆಯವ್ಯಯದ ಮೇಲೆ ಮಾತನಾಡಿದ ಅವರು, ‘ಪ್ರಜಾಪ್ರಭುತ್ವ ವ್ಯವಸ್ಥೆ ಜಡವಲ್ಲ, ಅದಕ್ಕೆ ನಿರಂತರ ಚಲನಶೀಲತೆ ಇರಬೇಕು. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ತನ್ನ ಚಲನಶೀಲತೆ ಕಳೆದುಕೊಂಡಿದೆ. ಚುನಾವಣೆಗೆ ಮೊದಲು ಆಸ್ತಿ ಘೋಷಣೆ ಮಾಡುತ್ತೇವೆ. ಆದರೆ, ಅವಧಿ ಮುಗಿದ ಬಳಿಕ ಅದು 50 ಪಟ್ಟು, ನೂರು ಪಟ್ಟು ಜಾಸ್ತಿ ಆಗುವುದು ಹೇಗೆ? ಅದನ್ನು ಜನರಿಗೂ ಹೇಳಿಕೊಟ್ಟರೆ ಈ ಬಜೆಟ್ ಮಂಡನೆ, ಸಮಸ್ಯೆ, ಪರಿಹಾರದ ಕೆಲಸವೇ ಇರುವುದಿಲ್ಲ' ಎಂದು ಸೂಚ್ಯವಾಗಿ ವಾಸ್ತವ ಸ್ಥಿತಿಯಲ್ಲಿ ಬಿಚ್ಚಿಟ್ಟರು.

‘ಯಹೀ ಭೂಲ್ ಬಾರ್ ಬಾರ್ ಕರ್ತಾರಹಾ ಧೂಲ್ ಚೆಹರೇಪೇ ಥೀ ಮೇ ಆಯಿನಾ ಸಾಫ್ ಕರ್ತಾರಹಾ' (ನಾನು ಪದೇ ಪದೇ ಇದೇ ತಪ್ಪನ್ನು ಮಾಡುತ್ತಿದ್ದೆ, ಧೂಳು ಮುಖದ ಮೇಲಿತ್ತು. ಆದರೆ, ಕನ್ನಡಿ ಒರೆಸುತ್ತಿದ್ದೆ) ಎಂಬ ಅಲ್ಲಮಾ ಇಕ್ಬಾಲ್ ಅವರ ಶಾಯಿರಿ ಉಲ್ಲೇಖಿಸಿದ ರಮೇಶ್ ಕುಮಾರ್, ‘ಸಾಹುಕಾರ್ ಚೆನ್ನಯ್ಯ, ಬಂಟ್ವಾಳದ ಕಕ್ಕಿಲ್ಲಾಯ, ದಾವಣಗೆರೆಯ ಪಂಪಾಪತಿ, ಶಾಂತವೇರಿ ಗೋಪಾಲಗೌಡ ಅವರಂತಹ ಮಹನೀಯರಿದ್ದ ವಿಧಾನಸಭೆ ಇಂದು ಎಲ್ಲಿಗೆ ಬಂದಿದೆ' ಎಂದು ಬೇಸರ ವ್ಯಕ್ತಪಡಿಸಿದರು.

‘ದುಡಿಯುವ ವರ್ಗದ ಜನರಿಗೆ ತಮ್ಮ ಶ್ರಮದ ಪ್ರತಿಫಲದಿಂದ ಕೊಳ್ಳುವ ಶಕ್ತಿ ಬರಬೇಕು. ಆತನ ಬಳಿ ಶ್ರಮವನ್ನು ಬಿಟ್ಟರೇ ಬೇರೆ ಏನೂ ಆಸ್ತಿ ಇಲ್ಲ. ಮಾವಿನ ಹಣ್ಣಿನ ಕಾಲ ಬರುತ್ತಿದೆ. ಮಾವಿನ ಹಣ್ಣು ಎಲ್ಲರಿಗೂ ಬಹಳ ಇಷ್ಟ. ಆದರೆ, ಬಡವನಿಗೆ ತಾನು ಬಯಸಿದ್ದನ್ನು ಕೊಳ್ಳುವ ಶಕ್ತಿ ಇಲ್ಲದೆ ಹೋದರೆ ನಮ್ಮ ಸರಕಾರಿ ಯೋಜನೆಗಳು ಆತನಿಗೆ ತಲುಪುವುದು ಬಹಳ ದೂರದ ಮಾತೇ ಆಗುತ್ತದೆ' ಎಂದು ರಮೇಶ್ ಕುಮಾರ್ ತಮ್ಮದೇ ದಾಟಿಯಲ್ಲಿ ಸರಕಾರದ ವೈಫಲ್ಯಗಳನ್ನು ಬಹಿರಂಗಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X