ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು; ಸಾಂವಿಧಾನಿಕ ಹಕ್ಕಿಗಾಗಿ ಮೇಲ್ಮನವಿ ಸಲ್ಲಿಕೆ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ
ಉಡುಪಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿರುವ ಆದೇಶವನ್ನು ನಾವು ಗೌರವಿಸುತ್ತೇವೆ. ಈ ತೀರ್ಪು ಅಸ್ಪಷ್ಟತೆಯಿಂದ ಕೂಡಿದ್ದು, ನಮ್ಮ ಸಾಂವಿಧಾನಿಕ ಹಕ್ಕಿಗಾಗಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ತಿಳಿಸಿದೆ.
ಜಿಲ್ಲಾ ಮುಸ್ಲಿಂ ಒಕ್ಕೂಟದ ಪದಾಧಿಕಾರಿ ಹುಸೇನ್ ಕೋಡಿಬೆಂಗ್ರೆ ಮಾತನಾಡಿ, ವಿದ್ಯಾರ್ಥಿಗಳು ಅಂತಿಮ ಪರೀಕ್ಷೆಗೆ ಹಾಜರಾಗುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ. ಶಿಕ್ಷಣ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಈ ತೀರ್ಪಿನಲ್ಲಿ ಸ್ಪಷ್ಟತೆ ಇಲ್ಲ. ಸಾಂವಿಧಾನಿಕ ಹಕ್ಕಿಗಾಗಿ ಮೇಲನ್ಮವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
Next Story