Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭೂಸ್ವಾಧೀನ ಸಂತ್ರಸ್ತರಿಗೆ...

ಭೂಸ್ವಾಧೀನ ಸಂತ್ರಸ್ತರಿಗೆ ವಂಚನೆಯಾಗಿದ್ದು, ಪ್ರಕರಣ ಸಿಬಿಐಗೆ ವಹಿಸಬೇಕು : ಹೋರಾಟ ಸಮಿತಿ

ಮಂಗಳೂರು- ಕಾರ್ಕಳ ರಸ್ತೆ ವಿಸ್ತರಣೆ ಅಭಿವೃದ್ದಿ

ವಾರ್ತಾಭಾರತಿವಾರ್ತಾಭಾರತಿ15 March 2022 3:17 PM IST
share

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 169ರ ಮಂಗಳೂರು-ಕಾರ್ಕಳದ ವರೆಗಿನ ವಿಸ್ತರಣೆ ಮತ್ತು ಅಭಿವೃದ್ಧಿ ಕಾಮಗಾರಿಗೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಾಗಿರುವ ಭೂ ಮಾಲೀಕರಿಗೆ ಸಾಕಷ್ಟು ವಂಚನೆ ಮಾಡಲಾಗಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸಂತ್ರಸ್ತರಿಗೆ ಆಗುತ್ತಿರುವ ಅನ್ಯಾಯವನ್ನು ತನಿಖೆ ಮಾಡಿದರೆ ಎಲ್ಲ ರೀತಿಯ ವಂಚನೆಗಳು ಹೊರ ಬರಲಿದೆ ಎಂದು ಹೋರಾಟ ಸಮಿತಿ ಮುಖಂಡರು ಆಗ್ರಹಿಸಿದ್ದಾರೆ.

ಭೂ ಮಾಲೀಕರು ಈಗಾಗಲೇ ನ್ಯಾಯಾಲಯದ ಮೊರೆ ಹೋಗಿರುವುದರಿಂದ ಶೇ.60ರಷ್ಟು ಕೃಷಿ ಭೂಮಿಗೆ ಸಂಬಂಧಿಸಿಂತೆ ಭೂ ಸ್ವಾಧೀನಕ್ಕೆ ತಡೆಯಾಜ್ಞೆ ಇದೆ. ಇದರಿಂದಾಗಿ ಕಾಮಗಾರಿ ಪ್ರಾರಂಭಿಸಲು ಸಾಧ್ಯವಾಗುವುದಿಲ್ಲ. ಶೇ.80-90ರಷ್ಟು ಭೂಸ್ವಾಧಿನ ಆಗದೆ ಕೆಲಸ ಆರಂಭಿಸುವುದಿಲ್ಲ ಎಂದು ಟೆಂಡರ್ ಪಡೆದುಕೊಂಡಿರುವ ಸಂಸ್ಥೆ ತಿಳಿಸಿದ್ದು, ಆ ಕಾರಣ ಇನ್ನೂ ವರ್ಕ್ ಆರ್ಡರ್ ತೆಗೆದುಕೊಂಡಿಲ್ಲ. ಒಂದು ವೇಳೆ ಭೂ ಸ್ವಾಧೀನ ಸಮರ್ಪಕವಾಗಿ ನಡೆಯದೆ, ಸಂಸ್ಥೆ ಕೆಲಸ ಬಿಟ್ಟು ಹೋದರೆ, ಡೆವಲಪ್‌ಮೆಂಟ್ ಫೀಸ್ ಎಂದು ಒಂದಷ್ಟು ಮೊತ್ತವನ್ನು ಪಾವತಿಸಬೇಕಾಗುತ್ತದೆ. ಈ ನಡುವೆ ಕಳೆದ ಒಂದು ವರ್ಷದಿಂದ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದರೂ, ರಾಷ್ಟ್ರೀಯ ಹೆದ್ದಾರಿ ಪರ ವಕೀಲರು ಕೋರ್ಟ್‌ಗೆ ಬಂದು ಆಕ್ಷೇಪಣೆ ಸಲ್ಲಿಸುವ ಕೆಲಸವನ್ನೂ ಮಾಡಿಲ್ಲ. ಹೀಗಾದರೆ ಹೆದ್ದಾರಿ ಅಭಿವೃದ್ಧಿ ಕೆಲಸ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಹೆದ್ದಾರಿ 169ರ ಭೂ ಮಾಲಕರ ಹೋರಾಟ ಸಮಿತಿ ಮುಖಂಡ ಬ್ರಿಜೇಶ್ ಶೆಟ್ಟಿ ಮಿಜಾರ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರ್ ಕೆಲ ದಿನಗಳ ಹಿಂದೆ ಮಂಗಳೂರಿಗೆ ಆಗಮಿಸಿದ್ದು, ಈ ವೇಳೆ ಅವರನ್ನು ಭೇಟಿಯಾಗಲು ಸುಮಾರು 3 ಗಂಟೆಗಳ ಕಾಲ ಕಾದಿದ್ದೆವು. ಆದರೆ ನಮಗೆ ಅವರು ನೀಡಿದ್ದು, ಕೇವಲ 1 ನಿಮಿಷ ಮಾತ್ರ. ಈ ಕಡಿಮೆ ಅವಧಿಯಲ್ಲಿ ಅವರು ನಮ್ಮ ಮನವಿ ಸ್ವೀಕರಿಸಿ, ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದರು. ಆದರೆ ಇನ್ನೂ ಯಾವುದೇ ಉತ್ತರ ಬಂದಿಲ್ಲ ಎಂದರು.

ಭೂ ಸ್ವಾಧಿನ ಮಾರ್ಗಸೂಚಿಯಲ್ಲಿ ಯಾವುದೇ ಉಲ್ಲೇಖವಿಲ್ಲದ ಕೃಷಿ ಮತ್ತು ಪರಿವರ್ತಿತ ಭೂಮಿ ಎಂದು ವಿಂಗಡಣೆ ಮಾಡಲಾಗಿದೆ. ಕೃಷಿ ಭೂಮಿಗೆ ಮಾರುಕಟ್ಟೆ ದರಕ್ಕಿಂತ 8-12 ಪಟ್ಟು ಕಡಿಮೆ ದರ ನಿಗದಿಪಡಿಸುವ ಮೂಲಕ ಮೊದಲ ವಂಚನೆ ಮಾಡಲಾಗಿದೆ. ಕೆಡವಲ್ಪಡುವ ಕಟ್ಟಡಗಳಿಗೆ ಜಿಎಸ್‌ಟಿ ಅನ್ವಯಿಸಲಾಗಿದ್ದು, ಅದರಲ್ಲಿಯೂ ಕೆಲವು ಗ್ರಾಮಗಳಲ್ಲಿ ಶೇ.12 ಕೆಲವು ಗ್ರಾಮಗಳಲ್ಲಿ ಶೇ.24ರಷ್ಟು ಕಡಿತ ಮಾಡಲಾಗುತ್ತಿದೆ. ಇದು ಜಿಎಸ್‌ಟಿ ಇತಿಹಾಸದಲ್ಲಿಯೇ ವಿಚಿತ್ರ ಕ್ರಮವಾಗಿದೆ. 20ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ 169ರ ಅಕ್ಕಪಕ್ಕದ ಜಮೀನಿಗೆ ಹೆದ್ದಾರಿ ಅಭಿವೃದ್ಧಿ ಹೆಸರಿನಲ್ಲಿ ಭೂ ಪರಿವರ್ತನೆಗೆ ಅವಕಾಶ ಇರಲಿಲ್ಲ. ಆದರೆ 2016ರ 3ಎ ಅಧಿಸೂಚನೆ ನಂತರ ಕೆಲವು ಪ್ರಭಾವಿ ವ್ಯಕ್ತಿಗಳ ಭೂಮಿಯನ್ನು ಪರಿವರ್ತಿಸಲು ಅನುಮತಿ ನೀಡಲಾಗಿದೆ. ಈ ಮೂಲಕ ಸಾಮಾನ್ಯ ಭೂ ಮಾಲೀಕರಿಗೆ ವಂಚನೆ ಮಾಡಲಾಗುತ್ತಿದೆ ಎಂದರು.

ಅಧಿಕಾರಿಯಿಂದ ೫ ಲಕ್ಷ ರೂ ಬೇಡಿಕೆ

ಹೆದ್ದಾರಿಯ ಅಲೈನ್ಮೆಂಟ್ ಆಗಾಗ ಬದಲಾವಣೆಯಾಗುತ್ತಿದ್ದು, ಇದರಲ್ಲಿ ಪ್ರಭಾವಿ ವ್ಯಕ್ತಿಗಳ ಹಾಗೂ ಭೂ ಮಾಫಿಯಾಗಳ ಕೈವಾಡವೂ ಇದೆ. ರಾಷ್ಟ್ರೀಯ ಹೆದ್ದಾರಿಯ ಸರ್ವೇ ವಿಭಾಗದ ವ್ಯಕ್ತಿಯೊಬ್ಬರು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಹಣ ಪಾವತಿಸಿದರೆ ನಿಮ್ಮ ಜಮೀನು ಹೊರತುಪಡಿಸಿದಂತೆ ಹೆದ್ದಾರಿ ಪಥವನ್ನು ಬದಲಾಯಿಸುವುದಾಗಿ ತಿಳಿಸಿದ್ದಾರೆ. ಈ ಕುರಿತ ಆಡಿಯೋ ದಾಖಲೆ ತನ್ನ ಬಳಿಯಿದೆ. ಈಗಾಗಲೇ ಹಣ ನೀಡಿದ ಭೂ ಮಾಲೀಕರಿಗೆ ಹೆದ್ದಾರಿಯಿಂದ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಂಡಿದ್ದಾರೆ ಎಂದು ಭೂ ಮಾಲೀಕರಾದ ಮೊಹಮ್ಮದ್ ನಝೀಮ್ ತಿಳಿಸಿದರು.

ಮುಖಂಡರಾದ ರತ್ನಾಕರ ಶೆಟ್ಟಿ, ಜಯರಾಮ ಪೂಜಾರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X