Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೊಡ್ಡಡ್ಕ ಭಜನಾ ಮಂದಿರದಲ್ಲಿ ವಿವಾದ;...

ದೊಡ್ಡಡ್ಕ ಭಜನಾ ಮಂದಿರದಲ್ಲಿ ವಿವಾದ; ಮಂದಿರದ ಅಧ್ಯಕ್ಷರಿಂದ ಸ್ಪಷ್ಠನೆ

ವಾರ್ತಾಭಾರತಿವಾರ್ತಾಭಾರತಿ15 March 2022 3:34 PM IST
share

ಪುತ್ತೂರು: ದೊಡ್ಡಡ್ಕ ಭಜನಾ ಮಂದಿರದಲ್ಲಿ ನಡೆದ ಹಲ್ಲೆ ಪ್ರಕರಣವು ವಿಷಾದನೀಯ ವಿಚಾರವಾಗಿದ್ದು, ಭಜನಾ ಮಂದಿರದ ವಿಚಾರದಲ್ಲಿ ಸ್ಥಳೀಯರಾದ ಸರೋಜಿನಿ ಆಚಾರ್ಯ ಮತ್ತು ಅವರ ಮಕ್ಕಳು ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ದೊಡ್ಡಡ್ಕ ಶ್ರೀ ವರಮಹಾಲಕ್ಷೀ ಭಜನಾ ಮಂದಿರದ ಅಧ್ಯಕ್ಷ ಜಗದೀಶ ಭಂಡಾರಿ ತಿಳಿಸಿದ್ದಾರೆ. 

ಅವರು ಮಂಗಳವಾರ ಪುತ್ತೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಭಜನಾ ಮಂದಿರದ ಸ್ಥಳವು 1991ರಲ್ಲಿ ನಮಗೆ ಮಂಜೂರುಗೊಂಡಿದೆ ಎಂದು ಹೇಳಿದ್ದಾರೆ. ಆದರೆ ಈ ಜಾಗವು ಅವರಿಗೆ ಮಂಜೂರುಗೊಂಡಿರುವುದು 1996ರಲ್ಲಿ. ಆದರೆ 1992ರಿಂದಲೇ ಸಾರ್ವಜನಿಕರ ದೇಣಿಗೆ ಸಂಗ್ರಹಿಸಿ 1994ರಲ್ಲಿ  ಇಲ್ಲಿ ಭಜನಾ ಮಂದಿರವನ್ನು ನಿರ್ಮಿಸಿ ಲೋಕಾರ್ಪಣೆ ಮಾಡಲಾಗಿದೆ. ಆದರೆ ಬಳಿಕ ಸಮಿತಿಯ ಗಮನಕ್ಕೆ ಬಾರದೆ ಅವರು ಈ ಜಾಗವನ್ನು ಅಕ್ರಮ ಸಕ್ರಮದಡಿಯಲ್ಲಿ ಮಂಜೂರು ಮಾಡಿಕೊಂಡಿದ್ದಾರೆ. ಭಜನಾ ಮಂದಿರ ಸಮಿತಿಯಲ್ಲಿ ಅವರ ಜಾತಿಯವರಾಗಲಿ, ಕುಂಟುಂಬಸ್ಥರಾಗಲೀ ಸದಸ್ಯರಾಗಿರುವುದಿಲ್ಲ. ಆರಂಭದಲ್ಲಿ ಸರೋಜಿನಿ ಅವರ ಪತಿ ದಿವಂಗತ ಕೊರಗಪ್ಪ ಆಚಾರ್ಯ ಅವರು ಸದಸ್ಯರಾಗಿದ್ದರೂ ಬಳಿಕ ಬಿಟ್ಟು ಹೋಗಿದ್ದರು. ಇದೀಗ ಮಂದಿರದಲಿರುವುದು ನಮ್ಮ ಮನೆ ದೇವರು ಎಂದು ಹೇಳಿಕೆ ನೀಡಿರುವುದು ಸಂಪೂರ್ಣ ಸುಳ್ಳಾಗಿದೆ. 

ದಿ. ಕೊರಗಪ್ಪ ಆಚಾರ್ಯ ಅವರಿಗೆ ಅಕ್ರಮ ಸಕ್ರಮದಲ್ಲಿ ಮಂಜೂರಾಗಿರುವ ಸ್ಥಳವು ಡಿಸಿ ಮನ್ನಾ ಮತ್ತು ಗೋಚರ ಪ್ರದೇಶವಾಗಿದೆ. ಅದನ್ನು ಮಂಜೂರು ಮಾಡಿವುದು ಅಸಿಂಧು ಎಂಬ ಅಪೀಲು ಸಹಾಯಕ ದಂಡಾಧಿಕಾರಿಗಳಿಗೆ ಸಲ್ಲಿಸಲಾಗಿತ್ತು. ಸಹಾಯಕ ದಂಡಾಧಿಕಾರಿಗಳು ಈ ಸ್ಥಳಕ್ಕೆ ತಡೆಯಾಜ್ಞೆ ನೀಡಿರುತ್ತಾರೆ. ಆದರೆ ಭಜನಾ ಮಂದಿರದ ದಿನನಿತ್ಯದ ಪೂಜಾ ವಿಧಿ ವಿಧಾನ ಆಥವಾ ಇತರ ಕಾರ್ಯಕ್ರಮಗಳಿಗೆ ತಡೆಯಾಜ್ಞೆ ನೀಡಿರುವುದಿಲ್ಲ. ಭಜನಾ ಮಂದಿರಕ್ಕೆ ತಡೆಯಾಜ್ಞೆ ನೀಡಿದ್ದಾರೆ ಎಂಬ ಹೇಳಿಕೆಯೂ ಸುಳ್ಳಾಗಿದೆ. 

ಸಿವಿಲ್ ನ್ಯಾಯಾಲಯದಲ್ಲಿನ ದಾವೆಯಲ್ಲಿಯೂ ಭಜನಾ ಮಂದಿರದ ಕಾರ್ಯಚಟುವಟಿಕೆ ಹಾಗೂ ರಸ್ತೆಗೆ ಅಡ್ಡಿಪಡಿಸದಂತೆ ಅವರಿಗೆ ನ್ಯಾಯಾಲಯ ಅದೇಶ ನೀಡಿದೆ. ಹೀಗಿದ್ದರೂ ಅವರು ಮಾ. 13ರಂದು ಭಜನಾ ಮಂದಿರದ ವಠಾರದಲ್ಲಿ ಸ್ವಚ್ಚತಾ ಕಾರ್ಯ ನಡೆಸುತ್ತಿರುವ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಪೂವಪ್ಪ ನಾಯ್ಕ ಮತ್ತು ಅವರ ಪತ್ನಿಯ ಮೇಲೆ ಸರೋಜಿನಿ ಆಚಾರ್ಯ ಮತ್ತು ಅವರ ಮಕ್ಕಳಾದ ನಾಗರಾಜ ಆಚಾರ್ಯ, ನಾರಾಯಣ ಆಚಾರ್ಯ ಸೊಸೆಯಂದಿರಾರ ದೀಪಾ ಮತ್ತು ಪೂಜಾ ಅವರು ಜಾತಿ ನಿಂದನೆ ಮಾಡಿ ಕತ್ತಿ ಮತ್ತು ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶ್ರೀ ಮಹಾಲಕ್ಷ್ಮೀ ಭಜನಾ ಮಂದಿರ ಸೇವಾ ಟ್ರಸ್ಟ್‌ ಅಧ್ಯಕ್ಷ ಸೇಸಪ್ಪ ನಾಯ್ಕ, ಸದಸ್ಯರಾದ ನಾರಾಯಣ, ಸತೀಶ್ ಕುಮಾರ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X