Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿನಿಯರಿಗೆ ಹಿಜಾಬ್‌ ನಿರಾಕರಣೆ:...

ವಿದ್ಯಾರ್ಥಿನಿಯರಿಗೆ ಹಿಜಾಬ್‌ ನಿರಾಕರಣೆ: ತ್ರಿಸದಸ್ಯ ಪೀಠದ ಪ್ರಮುಖ ಐದು ಅವಲೋಕನಗಳು ಇಲ್ಲಿವೆ

ವಾರ್ತಾಭಾರತಿವಾರ್ತಾಭಾರತಿ15 March 2022 8:29 PM IST
share
ವಿದ್ಯಾರ್ಥಿನಿಯರಿಗೆ ಹಿಜಾಬ್‌ ನಿರಾಕರಣೆ: ತ್ರಿಸದಸ್ಯ ಪೀಠದ ಪ್ರಮುಖ ಐದು ಅವಲೋಕನಗಳು ಇಲ್ಲಿವೆ

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರದ ವಿರುದ್ಧ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆಎಂ ಖಾಜಿ ಅವರ ತ್ರಿಸದಸ್ಯ ಪೀಠವು ನೀಡಿರುವ ತೀರ್ಪಿನ ಐದು ಪ್ರಮುಖ ಅವಲೋಕನಗಳು ಇಲ್ಲಿವೆ:

ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ

ಅರ್ಜಿದಾರರು ಮತ್ತು ರಾಜ್ಯ ಸರ್ಕಾರವು ವಿಚಾರಣೆಯ ಸಮಯದಲ್ಲಿ ವಾದಿಸಿದ ಮೂರು ಕೇಂದ್ರ ಪ್ರಶ್ನೆಗಳಿಗೆ ಅವರು ರೂಪಿಸಿದ ಉತ್ತರಗಳನ್ನು ಆಧರಿಸಿ ತಮ್ಮ ತೀರ್ಪು ಆಧರಿಸಿದೆ ಎಂದು ಮಂಗಳವಾರ ನ್ಯಾಯಾಧೀಶರು ಹೇಳಿದ್ದಾರೆ.
 

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಶಿಕ್ಷಣ ಸಂಸ್ಥೆಗಳಲ್ಲಿ ಸ್ಕಾರ್ಫ್‌ಗೆ ಅವಕಾಶ ನೀಡದಿರುವುದು ಸಂವಿಧಾನದ 25 ನೇ ವಿಧಿಯಡಿಯಲ್ಲಿ ನೀಡಿರುವ ʼಧರ್ಮವನ್ನು ಆಚರಿಸುವ ಮತ್ತು ಪ್ರತಿಪಾದಿಸುವ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆʼ ಎಂದು ಅರ್ಜಿದಾರರು ಹೇಳಿದ್ದರು.
 

ಆದರೆ, ಹಿಜಾಬ್ ಧರಿಸುವುದು ಮುಸ್ಲಿಂ ಮಹಿಳೆಯರಿಗೆ ಅನಿವಾರ್ಯವಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. ಕೇರಳ ಹೈಕೋರ್ಟಿನ 2018 ರ ತೀರ್ಪನ್ನು ಉಲ್ಲೇಖಿಸಿದ ನ್ಯಾಯಾಧೀಶರು, ಧರ್ಮವನ್ನು ಆಚರಿಸುವ ಮೂಲಭೂತ ಹಕ್ಕುಗಳ ರಕ್ಷಣೆಯು ʼಘನತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸುವ "ಸಾಂವಿಧಾನಿಕ ಮೌಲ್ಯಗಳಿಗೆ" ಅನುಗುಣವಾಗಿರಬೇಕುʼ ಎಂದು ಹೇಳಿದ್ದಾರೆ.
 

ನ್ಯಾಯಪೀಠವು ನೀಡಿರುವ ಆದೇಶದಲ್ಲಿ, ಕುರಾನ್ ಮತ್ತು ಇತರ ಇಸ್ಲಾಮಿಕ್ ಪಠ್ಯದ ಹಲವಾರು ಭಾಗಗಳನ್ನು ಉಲ್ಲೇಖಿಸಿ ಮುಸ್ಲಿಮ್ ಮಹಿಳೆಯರಿಗೆ ಹಿಜಾಬ್ ಕಡ್ಡಾಯವಲ್ಲ ಎಂದು ತೀರ್ಮಾನಿಸಿದೆ.
 

"ಹಿಜಾಬ್ ಧರಿಸದಿದ್ದರೆ, ಅಂತಹವರು ಪಾಪಿಗಳಾಗುತ್ತಾರೆ, ಅಥವಾ ಇಸ್ಲಾಂ ತನ್ನ ವೈಭವವನ್ನು ಕಳೆದುಕೊಳ್ಳುತ್ತದೆ ಯಾ ಅದು ಧರ್ಮದ ಸ್ವರೂಪವನ್ನು ಕಳೆದುಕೊಳ್ಳುತ್ತದೆ ಎಂದು (ಕುರಾನ್‌ ನಲ್ಲಿ) ಇಲ್ಲ" ಎಂದು ನ್ಯಾಯಾಧೀಶರು ತೀರ್ಮಾನಿಸಿದ್ದಾರೆ.
 

ಹಿಜಾಬ್ ಧರಿಸದ ಮಹಿಳೆಗೆ ಕುರಾನ್‌ನಲ್ಲಿ ಯಾವುದೇ ದಂಡ ಅಥವಾ ಪ್ರಾಯಶ್ಚಿತ್ತವನ್ನು ಸೂಚಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ. ಧಾರ್ಮಿಕ ಗ್ರಂಥದ ಶ್ಲೋಕಗಳ ಭಾಷಾ ರಚನೆಯು ಮಹಿಳೆಯರಿಗೆ ಶಿರೋವಸ್ತ್ರಗಳು ಕಡ್ಡಾಯವಲ್ಲ ಎಂಬ ದೃಷ್ಟಿಕೋನವನ್ನು ಬೆಂಬಲಿಸುತ್ತದೆ ಎಂದು ನ್ಯಾಯಪೀಠ ಹೇಳಿದೆ.
 

ಪ್ರಾಚೀನ ಕಾಲದಲ್ಲಿ ಮಹಿಳೆಯರಿಗೆ ಸಾಮಾಜಿಕ ಭದ್ರತೆಯ ಮಾನದಂಡವಾಗಿ ಹಿಜಾಬ್ ಧರಿಸುವುದನ್ನು ಶಿಫಾರಸು ಮಾಡಲಾಗಿತ್ತು ಎಂದು ಪೀಠ ಹೇಳಿದೆ.
 

"ಈ ಉಡುಪನ್ನು ಧರಿಸುವ ಅಭ್ಯಾಸವು ಸಂಸ್ಕೃತಿಯ ಭಾಗವಾಗಿರಬಹುದು, ಆದರೆ ಖಂಡಿತವಾಗಿಯೂ ಧರ್ಮದ ಭಾಗವಲ್ಲ" ಎಂದು ನ್ಯಾಯಪೀಠ ಹೇಳಿದೆ.

ಶಾಲಾ ಸಮವಸ್ತ್ರವನ್ನು ಶಿಫಾರಸು ಮಾಡುವುದು ನಾಗರಿಕ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ

ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ಅನ್ನು ಸೂಚಿಸುವುದು 'ಧರ್ಮ-ತಟಸ್ಥವಾಗಿ' ಮತ್ತು 'ಸಾರ್ವತ್ರಿಕವಾಗಿ ಅನ್ವಯಿಸುವಾಗ' ಸಾಂವಿಧಾನಿಕವಾಗಿ ಸಂರಕ್ಷಿತ ಹಕ್ಕುಗಳನ್ನು ಉಲ್ಲಂಘನೆಯಾಗುವುದಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.
 

ಮಹಿಳಾ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರದ ಜೊತೆಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು. ಇದಕ್ಕೆ ಅವಕಾಶ ನೀಡದಿರುವುದು ಸಂವಿಧಾನದಲ್ಲಿ ಖಾತರಿಪಡಿಸಿರುವ ವಿದ್ಯಾರ್ಥಿಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಎಂದು ವಕೀಲರು ವಾದಿಸಿದ್ದರು.
 

ಆದಾಗ್ಯೂ, ಡ್ರೆಸ್ ಕೋಡ್ ವಿದ್ಯಾರ್ಥಿಗಳ ಅಭಿವ್ಯಕ್ತಿಯ ಮೂಲಭೂತ ಹಕ್ಕನ್ನು ಅಥವಾ ಅವರ ಸ್ವಾಯತ್ತತೆಗೆ ಧಕ್ಕೆ ತರುವುದಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.
 

ಶಾಲೆಗಳು ಶಿಕ್ಷಣವನ್ನು ನೀಡಲು ʼಅರ್ಹ ಸಾರ್ವಜನಿಕ ಸ್ಥಳಗಳುʼ ಎಂದು ನ್ಯಾಯಾಧೀಶರು ಹೇಳಿದ್ದಾರೆ.
 

"ಅಂತಹ 'ಅರ್ಹತೆಯ ಸ್ಥಳಗಳು'  ಸಾಮಾನ್ಯ ಶಿಸ್ತು ಮತ್ತು ಶಿಷ್ಟಾಚಾರಕ್ಕೆ ಹಾನಿಯಾಗುವಂತ ವೈಯಕ್ತಿಕ ಹಕ್ಕುಗಳ ಪ್ರತಿಪಾದನೆಯನ್ನು ಹಿಮ್ಮೆಟ್ಟಿಸುತ್ತದೆ" ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.
 

ಅರ್ಜಿದಾರರು ಸಾಂಸ್ಥಿಕ ಡ್ರೆಸ್ ಕೋಡ್‌ಗೆ ಸರಿಹೊಂದುವಂತೆ ಬಣ್ಣದಲ್ಲಿ ಹಿಜಾಬ್ ಧರಿಸಲು ಅನುಮತಿಸಬೇಕು ಎಂದು ಹೇಳುವ ಮೂಲಕ ʼಸಮಂಜಸವಾದ ಅನುಕೂಲತೆʼ ಕೇಳಿದ್ದರು. ಆದರೆ ನ್ಯಾಯಾಲಯವು ಹಿಜಾಬ್‌ಗೆ ಯಾವುದೇ ʼಸಮಂಜಸವಾದ ಅನುಕೂಲತೆʼ  ನೀಡಲಾಗುವುದಿಲ್ಲ ಮತ್ತು ಅದನ್ನು ಅನುಮತಿಸುವುದು ʼಸಾಮಾಜಿಕ-ಬೇರ್ಪಡಿಸುವಿಕೆʼ ಗೆ ಕಾರಣವಾಗಬಹುದು ಹಾಗೂ ಏಕರೂಪತೆಯ ಭಾವನೆಯನ್ನು ಕೆರಳಿಸಬಹುದು ಎಂದು ಹೇಳಿದೆ.
 


“ಅಂತಹ ಪ್ರಸ್ತಾಪವನ್ನು ಅಂಗೀಕರಿಸಿದರೆ, ಶಾಲಾ ಸಮವಸ್ತ್ರವು ಏಕರೂಪವಾಗಿರುವುದನ್ನು ತಡೆಯುತ್ತದೆ. ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರು ಮತ್ತು ಧರಿಸದ ವಿದ್ಯಾರ್ಥಿನಿಯರು ಎಂಬ ಎರಡು ವರ್ಗದ ವಿದ್ಯಾರ್ಥಿನಿಯರನ್ನು ಸೃಷ್ಟಿಸುತ್ತದೆ. ಇದು ʼಸಾಮಾಜಿಕ ಪ್ರತ್ಯೇಕತೆʼಗೆ ಕಾರಣವಾಗಬಹುದು. ಧರ್ಮ ಮತ್ತು ನಂಬಿಕೆಯನ್ನು ಲೆಕ್ಕಿಸದೆ ಎಲ್ಲಾ ವಿದ್ಯಾರ್ಥಿಗಳಲ್ಲಿ ತರಲು ವಿನ್ಯಾಸಗೊಳಿಸಲಾದ ಏಕರೂಪತೆಯ ಭಾವನೆಯನ್ನು ಇದು ಹಾಳುಗೆಡವಬಹುದು ಎಂದು ಹೈಕೋರ್ಟ್‌ ಹೇಳಿದೆ.

ಶಾಲಾ ಸಮವಸ್ತ್ರಗಳು ಧಾರ್ಮಿಕ ವೈವಿಧ್ಯಗಳನ್ನು ಮೀರಿದ "ಸಾಮರಸ್ಯ ಮತ್ತು ಸಾಮಾನ್ಯ ಸಹೋದರತ್ವದ ಮನೋಭಾವವನ್ನು ಉತ್ತೇಜಿಸುತ್ತದೆ" ಎಂದು ನ್ಯಾಯಾಲಯ ಹೇಳಿದೆ.
 

“ಹಿಜಾಬ್ ಅಥವಾ ಭಗ್ವಾವನ್ನು ಧರಿಸುವಂತಹ ಯಾವುದೇ ಪ್ರತಿಪಾದನೆಗಳನ್ನು ಧಾರ್ಮಿಕವಾಗಿ ಪವಿತ್ರವೆಂದು ಪರಿಗಣಿಸುವವರೆಗೆ ನಮ್ಮ ಸಂವಿಧಾನವು 51A (h) ವಿಧಿಯ ಮೂಲಕ ಮೂಲಭೂತ ಕರ್ತವ್ಯವಾಗಿ ಸೂಚಿಸುವ ವೈಜ್ಞಾನಿಕ ಮನೋಧರ್ಮವನ್ನು ಯುವ ಮನಸ್ಸಿನಲ್ಲಿ ತುಂಬುವುದು ಅಸಾಧ್ಯವಾಗಬಹುದು" ಎಂದು ಆದೇಶದಲ್ಲಿ ಹೇಳಲಾಗಿದೆ.
 

ಹಿಜಾಬ್ ನಿಷೇಧದ ಕುರಿತು ಸರ್ಕಾರದ ಆದೇಶವನ್ನು ಅಮಾನ್ಯಗೊಳಿಸಲಾಗುವುದಿಲ್ಲ

ಫೆಬ್ರವರಿ 5 ರಂದು, ಕರ್ನಾಟಕ ಸರ್ಕಾರವು "ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ" ಬಟ್ಟೆಗಳನ್ನು ನಿಷೇಧಿಸುವ ಆದೇಶವನ್ನು ಜಾರಿಗೊಳಿಸಿತ್ತು. ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಅಡಿಯಲ್ಲಿ ಇಂತಹ ಆದೇಶ ಹೊರಡಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲ ಎಂದು ಅರ್ಜಿದಾರರು ವಾದಿಸಿದ್ದರು.
 

ಆದರೆ, ಸೆಕ್ಷನ್ 133(2) ಕಾಯ್ದೆಯು ನಿಬಂಧನೆಗಳನ್ನು ಜಾರಿಗೊಳಿಸಲು ಯಾವುದೇ ನಿರ್ದೇಶನಗಳನ್ನು ನೀಡಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.
 

ಸರ್ಕಾರದ ಆದೇಶವು "ಪ್ರತಿಯಾಗಿ ಯಾವುದೇ ಸಮವಸ್ತ್ರವನ್ನು ಸೂಚಿಸುವುದಿಲ್ಲ. ಆದರೆ ರಚನಾತ್ಮಕ ರೀತಿಯಲ್ಲಿ ಪ್ರಿಸ್ಕ್ರಿಪ್ಷನ್ ಅನ್ನು ಮಾತ್ರ ಒದಗಿಸುತ್ತದೆ" ಎಂದು ನ್ಯಾಯಾಧೀಶರು ಹೇಳಿದ್ದಾರೆ.
 

ಹಿಜಾಬ್ ಧರಿಸುವುದು ಇಸ್ಲಾಮಿನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ತನ್ನ ಆದೇಶವು ಈಗಾಗಲೇ ಹೇಳಿರುವುದರಿಂದ, "ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ" ಬಟ್ಟೆಗಳನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ಅಮಾನ್ಯಗೊಳಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
 

ಎಷ್ಟು ಸಮಯದಿಂದ ಹಿಜಾಬ್ ಧರಿಸಿದ್ದರು ಎಂಬುದನ್ನು ಅರ್ಜಿದಾರರು ನಿರ್ದಿಷ್ಟವಾಗಿ ಹೇಳಿಲ್ಲ. ಅರ್ಜಿದಾರರು ಆರಂಭದಿಂದಲೂ ಹಿಜಾಬ್‌ಗಳನ್ನು ಧರಿಸಿದ್ದರು ಎಂದು ತೋರಿಸಲು ಯಾವುದೇ ದಾಖಲೆಗಳಿಲ್ಲ ಎಂದು ತೀರ್ಪಿನಲ್ಲಿ ಹೇಳಲಾಗಿದೆ.
 

ಕಾಲೇಜು ಅಭಿವೃದ್ಧಿ ಸಮಿತಿಗಳಲ್ಲಿ..

ಸರ್ಕಾರಿ ಆದೇಶದ ವಿರುದ್ಧ ಅರ್ಜಿದಾರರ ಮತ್ತೊಂದು ವಾದವೆಂದರೆ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ಸಮವಸ್ತ್ರವನ್ನು ಸೂಚಿಸಲು ಅವಕಾಶ ನೀಡುತ್ತದೆ. ಈ ಸಮಿತಿಗಳು ಶಾಸನಬದ್ಧವಲ್ಲದ ಸಂಸ್ಥೆಗಳಾಗಿದ್ದು, ಈ ಅಧಿಕಾರವನ್ನು ನೀಡಲು ಸಾಧ್ಯವಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು.
 

ಉಡುಪಿ ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಸ್ಥಳೀಯ ಭಾರತೀಯ ಜನತಾ ಪಕ್ಷದ ಶಾಸಕರಾಗಿದ್ದರು ಎಂದು ಅರ್ಜಿದಾರರು ಸೂಚಿಸಿದ್ದರು.
 

 "ಈ ಸಮಿತಿಗಳು ಸ್ಥಳೀಯ ಶಾಸಕಾಂಗ ಸಭೆಯ ಸದಸ್ಯರ ನೇತೃತ್ವದಲ್ಲಿರುವುದರಿಂದ, ಅವುಗಳ ರಚನೆಯು ಕೆಟ್ಟದಾಗಿದೆ ಎಂಬ ತೀರ್ಮಾನಕ್ಕೆ ನಾವು ಆತುರದಿಂದ ನೆಗೆಯುವುದಿಲ್ಲ." ಎಂದು ಕೋರ್ಟ್‌ ಹೇಳಿದೆ.
 

ಸಮಿತಿಗಳ ರಚನೆಗೆ ಸೂಚಿಸಿರುವ 2014 ರ ಸರ್ಕಾರದ ಸುತ್ತೋಲೆಯನ್ನು ಯಾವುದೇ ಅರ್ಜಿಗಳು ಪ್ರಶ್ನಿಸದ ಕಾರಣ ಈ ಸಮಿತಿಗಳ ಕಾರ್ಯನಿರ್ವಹಣೆಯ ಕುರಿತು "ಗಹನವಾದ ಚರ್ಚೆಯನ್ನು ಕೈಗೊಳ್ಳಲು ಒಲವು ತೋರುತ್ತಿಲ್ಲ" ಎಂದು ನ್ಯಾಯಾಧೀಶರು ಹೇಳಿದ್ದಾರೆ.
 

ಜಾತ್ಯತೀತತೆಯ ಬಗ್ಗೆ..
 

"ಶಾಲಾ ನಿಯಮಗಳು ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಏಕರೂಪದ ವರ್ಗವಾಗಿ ವಸ್ತ್ರಸಂಹಿತೆಯನ್ನು ಸೂಚಿಸುತ್ತವೆ, ಸಾಂವಿಧಾನಿಕ ಜಾತ್ಯತೀತತೆಯನ್ನು ಪೂರೈಸುತ್ತವೆ" ಎಂದು ನ್ಯಾಯಾಲಯವು ಗಮನಿಸಿದೆ.
 

ಭಾರತೀಯ ಜಾತ್ಯತೀತತೆಯ ತತ್ವಗಳು ಅಮೆರಿಕನ್ ಸಂವಿಧಾನದ ಅಡಿಯಲ್ಲಿ ಕಲ್ಪಿಸಿದಂತೆ ಚರ್ಚ್ ಮತ್ತು ರಾಜ್ಯಗಳ ನಡುವಿನ ಪ್ರತ್ಯೇಕತೆಯ ಕಲ್ಪನೆ ಯಂತೆಯೇ ಅಲ್ಲ ಎಂದು ನ್ಯಾಯಾಧೀಶರು ಗಮನಿಸಿದ್ದಾರೆ.
 

ಭಾರತೀಯ ಸಂವಿಧಾನವು ಪ್ರತಿಪಾದಿಸಿದ ಸಕಾರಾತ್ಮಕ ಜಾತ್ಯತೀತತೆ ಧಾರ್ಮಿಕ ಶ್ರದ್ಧೆಯ ವಿರೋಧಿಯಲ್ಲ. ಆದರೆ ಧಾರ್ಮಿಕ ಸಹಿಷ್ಣುತೆಯನ್ನು ಒಳಗೊಂಡಿದೆ ಎಂದು ನ್ಯಾಯಾಲಯ ಹೇಳಿದೆ.
 

ಸಂವಿಧಾನದ ಪರಿಚ್ಛೇದ 51ಎ (ಇ) ಅಡಿಯಲ್ಲಿ ಸೂಚಿಸಲಾದ ಮೂಲಭೂತ ಕರ್ತವ್ಯದ ಅರ್ಥವನ್ನು ಕಲಿಸುವ ಪಠ್ಯಕ್ರಮವನ್ನು ರೂಪಿಸುವಂತೆ ನ್ಯಾಯಾಲಯವು ಸರ್ಕಾರಗಳಿಗೆ ನಿರ್ದೇಶನ ನೀಡಿದೆ.
 

 “ಧಾರ್ಮಿಕ, ಭಾಷಿಕ ಮತ್ತು ಪ್ರಾದೇಶಿಕ ಅಥವಾ ವಿಭಾಗೀಯ ವೈವಿಧ್ಯತೆಗಳನ್ನು ಮೀರಿ ಭಾರತದ ಎಲ್ಲ ಜನರ ನಡುವೆ ಸಾಮರಸ್ಯ ಮತ್ತು ಸಾಮಾನ್ಯ ಸಹೋದರತ್ವದ ಮನೋಭಾವವನ್ನು ಉತ್ತೇಜಿಸುವುದು ನಾಗರಿಕರ ಮೂಲಭೂತ ಕರ್ತವ್ಯವಾಗಿದೆ; ಮಹಿಳೆಯರ ಘನತೆಗೆ ಚ್ಯುತಿ ತರುವ ಆಚರಣೆಗಳನ್ನು ತ್ಯಜಿಸಬೇಕು”ಎಂದು ಆರ್ಟಿಕಲ್ 51A(e) ಹೇಳುತ್ತದೆ.
 

ಬಿಆರ್ ಅಂಬೇಡ್ಕರ್ ಅವರು ಬರೆದ ಪಠ್ಯದ ಒಂದು ಭಾಗವನ್ನು ಉಲ್ಲೇಖಿಸಿದ ನ್ಯಾಯಾಲಯ, ಅದರಲ್ಲಿ ಪರ್ದಾ ವ್ಯವಸ್ಥೆಯು ಮುಸ್ಲಿಂ ಮಹಿಳೆಯರ ಸಾಮಾಜಿಕ ಪ್ರತ್ಯೇಕತೆಗೆ ಕಾರಣವಾಗುತ್ತಿದೆ ಎಂದು ಹೇಳಿದೆ. "...ಯಾವುದೇ ಸಮುದಾಯದಲ್ಲಿ ಪರ್ದಾ, ಮುಸುಕು ಅಥವಾ ಶಿರಸ್ತ್ರಾಣವನ್ನು ಧರಿಸಬೇಕೆಂಬ ಒತ್ತಾಯವು ಸಾಮಾನ್ಯವಾಗಿ ಮಹಿಳೆಯರ ಮತ್ತು ನಿರ್ದಿಷ್ಟವಾಗಿ ಮುಸ್ಲಿಂ ಮಹಿಳೆಯರ ವಿಮೋಚನೆಯ ಪ್ರಕ್ರಿಯೆಗೆ ಅಡ್ಡಿಯಾಗಬಹುದು ಎಂಬ ವಾದಕ್ಕೆ ಸಾಕಷ್ಟು ಅವಕಾಶವಿದೆ" ಎಂದು ನ್ಯಾಯಾಲಯ ಹೇಳಿದೆ.
 

ಇದು ಸಾರ್ವಜನಿಕ ಸಹಭಾಗಿತ್ವದ ಸಮಾನ ಅವಕಾಶ ಮತ್ತು "ಸಕಾರಾತ್ಮಕ ಜಾತ್ಯತೀತತೆ" ಎಂಬ ಸಾಂವಿಧಾನಿಕ ಮನೋಭಾವಕ್ಕೆ ವಿರುದ್ಧವಾಗಿದೆ ಎಂದು ಪೀಠ ಹೇಳಿದೆ.
 

"ಇದು ಮಹಿಳೆಯರ ಸ್ವಾಯತ್ತತೆಯನ್ನು ಅಥವಾ ಅವರ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುತ್ತದೆ ಎಂದು ಹೇಳಬೇಕಾಗಿಲ್ಲ, ಏಕೆಂದರೆ ಅವರು ತರಗತಿಯ ಹೊರಗೆ ತಮ್ಮ ಆಯ್ಕೆಯ ಯಾವುದೇ ಉಡುಪುಗಳನ್ನು ಧರಿಸಬಹುದು" ಎಂದು ಅದು ತೀರ್ಪಿನಲ್ಲಿ ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X