Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು:...

ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು: ಕಾನೂನು ತಜ್ಞರ ಜೊತೆ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಸಭೆ

ವಾರ್ತಾಭಾರತಿವಾರ್ತಾಭಾರತಿ15 March 2022 9:05 PM IST
share
ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು: ಕಾನೂನು ತಜ್ಞರ ಜೊತೆ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಸಭೆ

ಬೆಂಗಳೂರು, ಮಾ.15: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ ಹಿಜಾಬ್ ಕುರಿತು ಇಂದು ತೀರ್ಪು ನೀಡಿದ ಹಿನ್ನೆಲೆಯಲ್ಲಿ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ನೇತೃತ್ವದಲ್ಲಿ ಕಾನೂನು ತಜ್ಞರ ಜೊತೆ ಸಭೆ ನಡೆಯಿತು.

ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್ ಕೇಂದ್ರ ಕಚೇರಿಯಲ್ಲಿ ನಡೆಸಿದ ಸಭೆಯಲ್ಲಿ ಹೈಕೋರ್ಟ್ ತೀರ್ಪಿನ ಪೂರ್ಣ ಪ್ರತಿಯಲ್ಲಿನ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸಂವಿಧಾನದಲ್ಲಿ ಕಲ್ಪಿಸಿಕೊಟ್ಟಿರುವ ಧಾರ್ಮಿಕ ಸ್ವಾತಂತ್ರ್ಯದ ಅಂಶಗಳು, ಜೊತೆಗೆ, ಹೆಣ್ಣು ಮಕ್ಕಳ ಶಿಕ್ಷಣದ ಕುರಿತು ಚರ್ಚೆ ನಡೆಸಲಾಯಿತು. ನಾಳೆ ಉಲಮಾಗಳ ಸಭೆಯನ್ನು ಕರೆಯಲಾಗಿದ್ದು, ಅಲ್ಲಿಯೂ ಈ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ಹೈಕೋರ್ಟ್ ತೀರ್ಪು ಬರುವ ಮುನ್ನವೆ ನಮ್ಮ ಉಲಮಾಗಳು, ವಕ್ಫ್ ಬೋರ್ಡ್ ಹಾಗೂ ಸಮುದಾಯದ ಹಿತೈಷಿಗಳು ಚರ್ಚೆ ಮಾಡಿದ್ದೇವೆ. ಶರೀಅತ್ ಅನ್ನು ಕಾಪಾಡಲು ಕಾನೂನು ರೀತಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಚರ್ಚೆ ಮಾಡಿದ್ದೇವೆ. ಹೈಕೋರ್ಟ್ ತನ್ನ ಆದೇಶದಲ್ಲಿ ಸುಪ್ರೀಂಕೋರ್ಟ್‍ಗೆ ಹೋಗಲು ಅವಕಾಶವಿದೆ ಎಂದು ತಿಳಿಸಿದೆ. ಅದರಂತೆ, ನಾವು ಸುಪ್ರೀಂಕೋರ್ಟ್ ಕದ ತಟ್ಟಿದ್ದೇವೆ. ಅಲ್ಲದೆ, ನಮ್ಮ ಕಾನೂನು ತಜ್ಞರು ಪುನರ್ ಪರಿಶೀಲನಾ ಅರ್ಜಿಯನ್ನು ಯಾಕೆ ಹಾಕಬಾರದು ಎಂದು ಚಿಂತನೆ ನಡೆಸಿದ್ದಾರೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಾಫಿ ಸಅದಿ ತಿಳಿಸಿದ್ದಾರೆ.

‘ವಾರ್ತಾಭಾರತಿ’ಯೊಂದಿಗೆ ಮಾತನಾಡಿದ ಅವರು, ‘ಹಿಜಾಬ್’ ಇಸ್ಲಾಮ್ ಧರ್ಮದ ಅವಿಭಾಜ್ಯ ಅಂಗ ಅಲ್ಲ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಆದರೆ, ಪವಿತ್ರ ಕುರ್‍ಆನ್‍ನಲ್ಲಿ ಹಿಜಾಬ್ ಧರಿಸುವುದು ಒಬ್ಬ ಮಹಿಳೆಯ ಕಡ್ಡಾಯ ಕ್ರಮ ಎಂದು ಹೇಳಿದೆ. ಇಸ್ಲಾಮ್‍ನಲ್ಲಿ ಆಧಾರ ಸ್ತಂಭಗಳಿವೆ ಅವುಗಳೆಂದರೆ ಕುರ್‍ಆನ್, ಹದೀಸ್, ಇಜ್‍ಮಾಅï, ಖಿಯಾಸ್. ಕುರ್‍ಆನ್‍ನಲ್ಲಿ ಸ್ಪಷ್ಟವಾಗಿ ಹಿಜಾಬ್ ಧರಿಸಲು ಹೇಳಲಾಗಿದೆ. ಆದರೆ, ತ್ರಿಸದಸ್ಯ ಪೀಠ ಹಿಜಾಬ್ ಇಸ್ಲಾಮ್‍ನ ಅವಿಭಾಜ್ಯ ಅಂಗ ಅಲ್ಲ ಎಂದು ಹೇಳಿರುವುದು ಆತಂಕ ಹಾಗೂ ಆಶ್ಚರ್ಯ ತಂದಿದೆ ಎಂದರು.

ನಮ್ಮ ಉಲಮಾಗಳು, ಧಾರ್ಮಿಕ ನಾಯಕರು ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದನ್ನು ಯಾವ ರೀತಿಯಲ್ಲಿ ಪರಿಹಾರ ಮಾಡಬೇಕು ಎಂದು ನಿರ್ಧರಿಸುತ್ತೇವೆ. ಇದು ಹಿಂದೂ ಮುಸ್ಲಿಮರ ನಡುವಿನ ಸಮಸ್ಯೆ ಅಲ್ಲ. ಕೆಲವು ಮಾಧ್ಯಮಗಳು, ಸಂಘಟನೆಗಳು ಇದನ್ನು ಹಿಂದೂ, ಮುಸ್ಲಿಮರ ನಡುವಿನ ಸಮಸ್ಯೆಯ ರೀತಿಯಲ್ಲಿ ಬಿಂಬಿಸುತ್ತಿರುವುದು ಅಪರಾಧ ಹಾಗೂ ದುರಂತ ಎಂದು ಅವರು ಹೇಳಿದರು.

ಸಹಭಾಳ್ವೆ, ಸೌಹಾರ್ದತೆಗೆ ಧಕ್ಕೆ ಬರುವ ರೀತಿಯಲ್ಲಿ ಈ ತೀರ್ಪುನ್ನು ತೆಗೆದುಕೊಳ್ಳಬಾರದು ಎಂದು ಸಮುದಾಯಕ್ಕೆ ಮನವಿ ಮಾಡಿದ್ದೇವೆ. ಮುಂದೆ ಪರೀಕ್ಷೆಯಿದೆ, ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ವಿದ್ಯಾರ್ಥಿನಿಯರು, ಪೋಷಕರಿಗೂ ಇವತ್ತಿನ ತೀರ್ಪಿನಿಂದ ಬೇಜಾರಿನಲ್ಲಿದ್ದಾರೆ. ಶರೀಅತ್ ನಮ್ಮ ಜೀವ ಅದನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಜೊತೆಗೆ ಶಿಕ್ಷಣವೂ ಇಸ್ಲಾಮಿನ ಜೀವವಾಗಿದೆ ಎಂದು ಪ್ರವಾದಿ ಹೇಳಿದ್ದಾರೆ. ಇಸ್ಲಾಮ್ ಯಾರಿಗೂ ಬಲವಂತಪಡಿಸುವುದಿಲ್ಲ. ಹಿಜಾಬ್, ವಿದ್ಯಾಭ್ಯಾಸ, ಪರೀಕ್ಷೆ, ಶರೀಅತ್ ಎಲ್ಲವನ್ನು ಮುಂದಿಟ್ಟುಕೊಂಡು ಉಲಮಾಗಳು ಚರ್ಚಿಸಿ ನಿರ್ದೇಶನ ನೀಡಲಿದ್ದಾರೆ ಎಂದು ಶಾಫಿ ಸಅದಿ ಹೇಳಿದರು.

ರಾಜಕಾರಣಿಗಳ ಪಿತೂರಿ, ಷಡ್ಯಂತ್ರಗಳಿಗೆ ಬಲಿಯಾಗಬೇಡಿ. ಉಲಮಾಗಳ ನಿರ್ದೇಶನ ಪಾಲಿಸಲು ವಿದ್ಯಾರ್ಥಿಗಳು, ಪೋಷಕರು ಮಾನಸಿಕವಾಗಿ ಸಿದ್ಧವಾಗಬೇಕು. ಸಣ್ಣ ಪ್ರಮಾಣದಲ್ಲಿ ಮುಗಿಯಬೇಕಾದ ಸಮಸ್ಯೆಯನ್ನು ಇಷ್ಟು ದೊಡ್ಡಮಟ್ಟಕ್ಕೆ ಬೆಳೆಸಿದವರ ಬಗ್ಗೆ ಸಮುದಾಯಕ್ಕೆ ಗೊತ್ತಿದೆ, ಅಲ್ಲಾಹ್‍ನಿಗೆ ಗೊತ್ತಿದೆ. ಅದಕ್ಕೆ ಅವರಿಗೆ ತಕ್ಕ ಶಾಸ್ತಿಯಾಗುತ್ತದೆ. ಉಡುಪಿಯ ಒಂದು ಮಹಿಳಾ ಕಾಲೇಜಿನಲ್ಲಿ ನಡೆದ ಘಟನೆಯನ್ನು ಇಷ್ಟು ವೈಭವೀಕರಿಸುವ ಅಗತ್ಯವಿತ್ತೆ? ಎಂದು ಅವರು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X