Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕತರ್ ಇಂಡಿಯನ್‌ ಸೋಷಿಯಲ್‌ ಫೋರಂ ವತಿಯಿಂದ...

ಕತರ್ ಇಂಡಿಯನ್‌ ಸೋಷಿಯಲ್‌ ಫೋರಂ ವತಿಯಿಂದ ಕ್ರೀಡಾ ಕೂಟ

ವಾರ್ತಾಭಾರತಿವಾರ್ತಾಭಾರತಿ16 March 2022 1:05 PM IST
share
ಕತರ್ ಇಂಡಿಯನ್‌ ಸೋಷಿಯಲ್‌ ಫೋರಂ ವತಿಯಿಂದ ಕ್ರೀಡಾ ಕೂಟ

ದೋಹಾ: ಕತರ್ ರಾಷ್ಟ್ರೀಯ ಕ್ರೀಡಾ ದಿನ ಮತ್ತು ಆಜಾದಿ ಕಾ ಅಮೃತ್ ಮಹೋತ್ಸವ ಪ್ರಯುಕ್ತ ಆಯೋಜಿಸಲಾದ ಕತರ್ ಇಂಡಿಯನ್ ಸೋಶಿಯಲ್ ಫೋರಮ್‌ನ ಎಂ.  ಸಬೀಹ್ ಬುಖಾರಿ ಸ್ಮಾರಕ ಕಪ್, ಮೊದಲ ಆವೃತ್ತಿಯ ಕ್ರೀಡಾ ಪಂದ್ಯಾವಳಿ ಅಬು ಹಮೂರ್‌ನಲ್ಲಿರುವ ಅಲ್ ಜಝೀರಾ ಅಕಾಡಮಿ ಮೈದಾನದಲ್ಲಿ  ಶುಕ್ರವಾರ ಮುಕ್ತಾಯಗೊಂಡಿತು.

ಫುಟ್ಬಾಲ್, ವಾಲಿಬಾಲ್, ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ಕತರ್ ನ ವಿವಿಧ ಕ್ರೀಡಾ ಕ್ಲಬ್ ಗಳ ಐವತ್ತು ತಂಡಗಳು ಸ್ಪರ್ಧಿಸಿದ್ದವು. ಫುಟ್ ಬಾಲ್ ನಲ್ಲಿ ಸೋಶಿಯಲ್ ಫೋರಂ ಕೇರಳ ತಂಡವನ್ನು ಸೋಲಿಸಿ, ಸೋಶಿಯಲ್ ಫೋರಂ ಕರ್ನಾಟಕ ತಂಡ ಪ್ರಶಸ್ತಿ ಗೆದ್ದುಕೊಂಡಿತು.

ದೋಹಾ ತಂಡವು ವಾಲಿಬಾಲ್ ಪಂದ್ಯಾವಳಿಯಲ್ಲಿ ಇವಾಕ್ ಅನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದಿದೆ.  ಕಬಡ್ಡಿಯಲ್ಲಿ ಹಸನಾಸ್ಕೋ-ಎ ಬ್ಲಾಕ್ ತಂಡವು ಮರ್ಕಿಯ ಕ್ಯಾಟ್ಸ್ - ಎ ತಂಡವನ್ನು ಸೋಲಿಸಿ ಟ್ರೋಫಿಯನ್ನು ಗೆದ್ದುಕೊಂಡರೆ, 16 ತಂಡಗಳ ನಡುವೆ ನಡೆದ ಹಗ್ಗಜಗ್ಗಾಟದಲ್ಲಿ, ಫೈನಲ್ ತಲುಪಿದ ಝಾಕ್ ಕತರ್ ತಂಡ,  ತಿರೂರ್ ತಂಡವನ್ನು ಸೋಲಿಸಿ  ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ನಡೆದ ಸೋಶಿಯಲ್ ಫೋರಂನ  10 ತಂಡಗಳ ವರ್ಣರಂಜಿತ ಪಥ ಸಂಚಲನದಲ್ಲಿ ವಕ್ರಾ ರೆಬೆಲ್ಸ್ ತಂಡ ಪ್ರಥಮ ಸ್ಥಾನ, ರುಮೈಲಾ ತಂಡ ದ್ವಿತೀಯ ಸ್ಥಾನ ಮತ್ತು ಕರ್ನಾಟಕ ತಂಡ ಮೂರನೇ ಸ್ಥಾನ ಪಡೆಯಿತು.  ಪೆನಾಲ್ಟಿ ಶೂಟೌಟ್ ಮತ್ತು ಮಕ್ಕಳಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಸಮಾರೋಪ ಸಮಾರಂಭದಲ್ಲಿ ಅತಿಥಿಗಳು ವಿಜೇತರಿಗೆ ಟ್ರೋಫಿಗಳನ್ನು ವಿತರಿಸಿದರು.

ಭಾರತೀಯ ರಾಯಭಾರಿ ಕಚೇರಿಯ ಪ್ರಥಮ ಕಾರ್ಯದರ್ಶಿ (ಚಾನ್ಸೆರಿ ಮುಖ್ಯಸ್ಥರು) ಸುಮನ್ ಸೊಂಗರ್ ಮುಖ್ಯ ಅತಿಥಿಯಾಗಿದ್ದರು.  ಸೋಫಿಯಾ ಬುಖಾರಿ, ಸೈಮಾ ಸಬೀಹ್ ಬುಖಾರಿ, ಡಾ. ಸೈಯದ್ ಜಾಫ್ರಿ (ಅಧ್ಯಕ್ಷ AMU ಅಲುಮ್ನಿ ಕತರ್), ಅಫ್ರೋಝ್ ಅಹ್ಮದ್ ದಾವರ್ (ಅಧ್ಯಕ್ಷ IABJ), ಸಜ್ಜಾದ್ ಆಲಂ (ಉಪಾಧ್ಯಕ್ಷರು IABJ), ಫಯಾಝ್ ಅಹ್ಮದ್ (ಅಧ್ಯಕ್ಷರು KMCA), ಡಾ.  ಸಿ.ಕೆ. ಅಬ್ದುಲ್ಲಾ (ಅಧ್ಯಕ್ಷರು, ಕತರ್ ಇಂಡಿಯಾ ಫ್ರೆಟರ್ನಿಟಿ ಫೋರಂ), ಮಶ್ಹೂದ್ ತಿರುತಿಯಾಡ್ (ಜನರಲ್ ಕನ್ವೀನರ್, ಪಿಸಿಸಿ ಕತರ್), ಅಬ್ದುಲ್ಲಾ ಮೋನು (ಹಿದಾಯ ಫೌಂಡೇಶನ್), ಅಯೂಬ್ ಉಳ್ಳಾಲ್ (ಅಧ್ಯಕ್ಷರು, ಕತರ್ ಇಂಡಿಯನ್ ಸೋಷಿಯಲ್ ಫೋರಂ), ಸಕೀನಾ ರಝಾಕ್ (ಉಪಾಧ್ಯಕ್ಷರು, ಮಹಿಳಾ ಬಂಧುತ್ವ), ಮುಮ್ತಾಝ್ ಹುಸೇನ್ (ಖ್ಯಾತ ಉದ್ಯಮಿಗಳು), ಶಾನಿಬ್ (ಆಪರೇಷನ್ಸ್ ಮ್ಯಾನೇಜರ್, ಸಿಟಿ ಎಕ್ಸ್ಚೇಂಜ್), ಶಮೀರ್ (ಜನರಲ್ ಮ್ಯಾನೇಜರ್, ಆಗ್ಬಿಸ್), ನಿಶಾಸ್ (ಬೀಕನ್) ಮತ್ತಿತರರು ಉಪಸ್ಥಿತರಿದ್ದರು.

ಕತರ್ ಇಂಡಿಯನ್ ಸೋಶಿಯಲ್ ಫೋರಂನ ಪ್ರಧಾನ ಕಾರ್ಯದರ್ಶಿ ಸಯೀದ್ ಕೊಮಾಚಿ ಕೃತಜ್ಞತೆ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X