Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾರ್ಮಿಕರ ಮಕ್ಕಳೂ ಅಧಿಕಾರಿಗಳಾಗಲಿ,...

ಕಾರ್ಮಿಕರ ಮಕ್ಕಳೂ ಅಧಿಕಾರಿಗಳಾಗಲಿ, ಮನೆಗೆ ಬೆಳಕಾಗಲಿ: ಸಚಿವ ಶಿವರಾಂ ಹೆಬ್ಬಾರ್

ಯುಪಿಎಸ್ಸಿ-ಕೆಪಿಎಸ್ಸಿ ತರಬೇತಿ ಪ್ರವೇಶ ಪತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ16 March 2022 8:35 PM IST
share
ಕಾರ್ಮಿಕರ ಮಕ್ಕಳೂ ಅಧಿಕಾರಿಗಳಾಗಲಿ, ಮನೆಗೆ ಬೆಳಕಾಗಲಿ: ಸಚಿವ ಶಿವರಾಂ ಹೆಬ್ಬಾರ್

ಬೆಂಗಳೂರು, ಮಾರ್ಚ್ 16: ಕಾರ್ಮಿಕರ ಮಕ್ಕಳು ಕಾರ್ಮಿಕರಾಗಿಯೇ ಉಳಿಯಬಾರದು ಎಂಬ ಮಹದುದ್ದೇಶದಿಂದ ಇಲಾಖೆಯು ಪ್ರತಿಭಾವಂತ ಶ್ರಮಿಕರ ಮಕ್ಕಳಿಗೆ ಉನ್ನತ ವ್ಯಾಸಂಗದ ತರಬೇತಿ ನೀಡುವ ಸಲುವಾಗಿ ಯೋಜನೆ ರೂಪಿಸಿ ಜಾರಿ ಮಾಡಿದ್ದು, ಇದರ ಸದುಪಯೋಗ ಪಡೆದುಕೊಂಡು ಉನ್ನತ ಹುದ್ದೆಗೇರುವಂತೆ ಕಾರ್ಮಿಕ ಮಕ್ಕಳಿಗೆ ಸಚಿವ ಶಿವರಾಂ ಹೆಬ್ಬಾರ್ ಕರೆ ನೀಡಿದರು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶ್ರಮಿಕ ವರ್ಗದವರ ಮಕ್ಕಳ ಕೆಪಿಎಸ್ಸಿ ಮತ್ತು ಯುಪಿಎಸ್ಸಿ ವ್ಯಾಸಂಗಕ್ಕೆ ಅನುವಾಗುವಂತೆ ತರಬೇತಿಗಾಗಿ ಯೋಜನೆ ರೂಪಿಸಿ ಜಾರಿ ಮಾಡಲಾಗಿದೆ ಎಂದ ಸಚಿವರು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ವಿತರಿಸಿದರು.

ರಾಜ್ಯದ ಕಾರ್ಮಿಕರ ಮಕ್ಕಳು ಐಎಎಸ್, ಕೆಎಎಸ್ ಮುಂತಾದ ಪರೀಕ್ಷೆಗಳನ್ನು ಎದುರಿಸಲು ಅಗತ್ಯ ತರಬೇತಿ ಪಡೆದು ಆಯ್ಕೆಯಾಗಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದ ಅವರು, ಇದಕ್ಕಾಗಿ ನುರಿತ ತರಬೇತಿ ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. 

ಮಕ್ಕಳಿಗೆ ಸುಂದರ ಭವಿಷ್ಯ ಕಲ್ಪಿಸಿಕೊಡಬೇಕು ಎಂಬ ಸದುದ್ದೇಶದಿಂದ ಇಲಾಖೆ ಈ ತರಬೇತಿ ಆಯೋಜಿಸಿದೆ. ಇದು ಅತ್ಯಂತ ಸಂತಸದ ವಿಷಯ. ಬಡವರ ಮಕ್ಕಳಿಗೂ ತರಬೇತಿ ದೊರೆಯಬೇಕು. ಅವರೂ ಭವಿಷ್ಯ ರೂಪಿಸಿಕೊಳ್ಳಬೇಕು, ಅವರಿಗೂ ಅರ್ಹತೆ ಇದೆ, ಯೋಗ್ಯತೆ ಇದೆ. ಆದರೆ ಹಣಕಾಸಿನ ತೊಂದರೆಯಿಂದ ಅವರು ತರಬೇತಿ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಇದೆ. ಇಂತಹ ಪ್ರತಿಭಾವಂತ ಕಾರ್ಮಿಕ ಮಕ್ಕಳಿಗೆ ಅವಕಾಶ  ಎಲ್ಲ ಅವಕಾಶಗಳು ಸಿಗಬೇಕು ಎಂಬ ಉದ್ದೇಶ ಇಟ್ಟುಕೊಂಡು ಇಲಾಖೆ ಕೋಟ್ಯಂತರ ಹಣವನ್ನು ವೆಚ್ಚ ಮಾಡಿ ತರಬೇತಿ ನೀಡುತ್ತಿದೆ ಎಂದರು.

ಈ ತರಬೇತಿ ಮಕ್ಕಳನ್ನು ಸಂಸ್ಥೆ ಮೂಲಕ ಆಯ್ಕೆ ಮಾಡಿದ್ದೇವೆ. ಯಾವುದೇ ಪ್ರಭಾವದಲ್ಲಿ ಆಯ್ಕೆ ಮಾಡಿಲ್ಲ. ಮಕ್ಕಳು ತರಬೇತಿ ಪಡೆದು ಅಧಿಕಾರಿಗಳಾಗಿ ಅವರ ಮನೆಗಳಿಗೆ ಬೆಳಗಾಗಲಿ ಎಂದು ಸಚಿವರು ಹಾರೈಸಿದರು. 

ಬಡ ಮಕ್ಕಳಿಗೂ ಸಮಾಜದಲ್ಲಿ ಕಲಿಯುವ ಹಕ್ಕಿದೆ. ಆದ್ದರಿಂದ  ಶ್ರಮಿಕರ ಬೆವರನ್ನು ಶ್ರಮಿಕರ ಮಕ್ಕಳಿಗೇ ಬಳಸಬೇಕು ಎಂಬ ಕಾರಣಕ್ಕೆ ಈ ತರಬೇತಿ ಆಯೋಜಿಸಲಾಗಿದೆ. ಈ ಅವಕಾಶವನ್ನು ಎಲ್ಲಾ ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. 

ಕಾರ್ಮಿಕ ಆಯುಕ್ತ ಅಕ್ರಂ  ಪಾಷ  ಅವರು, ಸ್ಪರ್ಧಾತ್ಮಕ ಪರೀಕ್ಷೆಯ ಗಂಭೀರತೆ ಮತ್ತು ಅದನ್ನು ಹೇಗೆ ಎದುರಿಸಬೇಕು ಎಂಬುದನ್ನು ಪ್ರವೇಶ ಪತ್ರ ಪಡೆದುಕೊಂಡ ವಿದ್ಯಾರ್ಥಿಗಳಿಗೆ ವಿವರಿಸಿದರು. 

 ಸಮಾರಂಭದಲ್ಲಿ ಕಾರ್ಮಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ಜಿ. ಕಲ್ಪನ ಉಪಸ್ಥಿತರಿದ್ದರು. ಮಂಡಳಿಯ ಕಾರ್ಯದರ್ಶಿ ಗುರು ಪ್ರಸಾದ್ ಎಂ.ಪಿ ಪ್ರಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಯೋಜನೆ ರೂಪು ರೇಷೆಗಳ ಬಗ್ಗೆ ವಿವರಿಸಿ ಸವಲತ್ತನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡರು.

ಜಂಟಿ ಕಾರ್ಯದರ್ಶಿಗಳಾದ ಡಾ. ಶಿವಪುತ್ರ ಬಾಬುರಾವ್ ಹಾಗೂ ಕಾರ್ಮಿಕ ಸಚಿವರ ಆಪ್ತ ಕಾರ್ಯದರ್ಶಿ ಮಂಜುನಾಥ್ ಬಳ್ಳಾರಿ ಸೇರಿದಂತೆ ಇಲಾಖೆಯ ಇತರೆ ಅಧಿಕಾರಿಗಳು, ಪರೀಕ್ಷಾರ್ಥಿಗಳು ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ ಪರೀಕ್ಷಾರ್ಥಿಗಳಾದ ಹಂಸಶ್ರೀ, ಭವ್ಯ ಮತ್ತಿತರರು ಅಭಿಪ್ರಾಯ ಹಂಚಿಕೊಂಡು ಇಲಾಖೆ ನೀಡುತ್ತಿರುವ ಈ ತರಬೇತಿ ಬಗ್ಗೆ ಹರ್ಷ ವ್ಯಕ್ತಪಡಿಸಿ, ಸಚಿವ ಹೆಬ್ಬಾರ್ ಮತ್ತು ಇಲಾಖೆ ಅಧಿಕಾರಿಗಳಿಗೆ ಕ್ರತಜ್ನತೆ ಸಲ್ಲಿಸಿದರು.

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶ್ರಮಿಕ ವರ್ಗದ ಏಳಿಗೆಗಾಗಿ ಇಲಾಖೆ ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಉನ್ನತ ವ್ಯಾಸಂಗದ  ತರಬೇತಿ ಕಲ್ಯಾಣ ಮಂಡಳಿಯ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದೆ. ಪ್ರಸಕ್ತ ವರ್ಷ ಆರಂಭಿಸಲಾಗಿರುವ ಈ ಯೋಜನೆಯಡಿ ರಾಜ್ಯದ ವಿವಿಧೆಡೆ 750 ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ತರಬೇತಿ ನೀಡಲಾಗುತ್ತಿದೆ. 

ಶಿವರಾಂ ಹೆಬ್ಬಾರ್, ಕಾರ್ಮಿಕ ಸಚಿವ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X