Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇಸ್ಲಾಮಿಕ್ ಕಾನೂನನ್ನು ತಪ್ಪಾಗಿ...

ಇಸ್ಲಾಮಿಕ್ ಕಾನೂನನ್ನು ತಪ್ಪಾಗಿ ವ್ಯಾಖ್ಯಾನಿಸುವ ಹೈಕೋರ್ಟ್ ತೀರ್ಪು ಒಪ್ಪಲು ಅಸಾಧ್ಯ: ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್

ವಾರ್ತಾಭಾರತಿವಾರ್ತಾಭಾರತಿ16 March 2022 8:46 PM IST
share
ಇಸ್ಲಾಮಿಕ್ ಕಾನೂನನ್ನು ತಪ್ಪಾಗಿ ವ್ಯಾಖ್ಯಾನಿಸುವ ಹೈಕೋರ್ಟ್ ತೀರ್ಪು ಒಪ್ಪಲು ಅಸಾಧ್ಯ: ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್

ಮಂಗಳೂರು : ಇಸ್ಲಾಮಿಕ್ ಕಾನೂನನ್ನು ತಪ್ಪಾಗಿ ವ್ಯಾಖ್ಯಾನಿಸುವ ರಾಜ್ಯ ಹೈಕೋರ್ಟ್‌ನ ತೀರ್ಪನ್ನು ಒಪ್ಪಲು ಸಾಧ್ಯವಿಲ್ಲ ಎಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್‌ನ ರಾಷ್ಟ್ರೀಯ ಸಮಿತಿಯ ಸದಸ್ಯ ಜಾಫರ್ ಸಾದಿಕ್ ಫೈಝಿ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಜಾಬ್‌ಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಈ ತೀರ್ಪು ಅಸಂವಿಧಾನಿಕ. ಸಂವಿಧಾನವು ಖಾತ್ರಿಪಡಿಸಿರುವ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕಾದ ನ್ಯಾಯಾಲಯವು ಧಾರ್ಮಿಕ ಹಕ್ಕುಗಳ ಉಲ್ಲಂಘನೆಯ ತೀರ್ಪು ನೀಡುವಂತಹ ಪರಿಸ್ಥಿತಿಗೆ ಬಂದು ಮುಟ್ಟಿರುವುದು ಜಾತ್ಯತೀತ ಆತ್ಮಸಾಕ್ಷಿಗೆ ನೋವು ನೀಡುವ ಆಘಾತಕಾರಿ ವಿಷಯವಾಗಿದೆ ಎಂದರು.

ಹಿಜಾಬ್ ಅಥವಾ ಶಿರವಸ್ತ್ರವು ದೇಶದ ಎಲ್ಲಾ ಧರ್ಮೀಯರಲ್ಲಿ ಕಂಡು ಬರುವ ಧಾರ್ಮಿಕ ಸಂಪ್ರದಾಯವಾಗಿದೆ. ಅದನ್ನು ಮುಸ್ಲಿಮರಿಗೆ ಮಾತ್ರ ತಡೆ ಹಿಡಿಯುವುದು ವಿಚಾರಧಾರೆಯ ಮನೋಸ್ಥಿತಿಯಾಗಿದೆ. ತನಗೆ ಬೇಕಾದಂತೆ ವಸ್ತ್ರ ಧರಿಸುವ ಹಕ್ಕನ್ನು ಸಂವಿಧಾನ ನೀಡಿದೆ.  ಮಹಿಳೆಯರು ಹಿಜಾಬ್ ಧರಿಸುವುದು ಕಡ್ಡಾಯ ಎಂದು ಕುರಾನ್‌ನಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದರೆ ಹಿಜಾಬ್‌ಗೆ ಸಂಬಂಧಿಸಿದಂತೆ ಮಂಗಳವಾರ ನೀಡಿದ ತೀರ್ಪಿನ ಮೂಲಕ ನ್ಯಾಯಾಲಯವು ಅನಗತ್ಯವಾಗಿ ಕುರಾನ್ ಮತ್ತು ಸಂವಿಧಾನವನ್ನು ತಪ್ಪಾಗಿ ನಿರೂಪಿಸಿದೆ ಎಂದು ಜಾಫರ್ ಸಾದಿಕ್ ಫೈಝಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಶಿಕ್ಷಣದಿಂದ ದೂರವಿಡಲು ನಡೆಸಿದ ಷಡ್ಯಂತ್ರವಾಗಿದೆ, ಧಾರ್ಮಿಕ ಸ್ವಾತಂತ್ರ್ಯದ ಜೊತೆಗೆ ಶಿಕ್ಷಣ ಪಡೆಯುವ ಹಕ್ಕು ವಿದ್ಯಾರ್ಥಿನಿಯರಿಗಿದೆ. ಹೈಕೋರ್ಟ್ ತೀರ್ಪು ಧರ್ಮಾಧರಿತ ಮತ್ತು ತಾರತಮ್ಯದಿಂದ ಕೂಡಿದೆ. ಈ ತೀರ್ಪು ಸಂಘ ಪರಿವಾರದ ಸಿವಿಲ್ ಕೋಡ್‌ನ ಒಂದು ಭಾಗವಾಗಿದೆ. ಹಾಗಾಗಿ ಈ ತೀರ್ಪಿನ ಬಗ್ಗೆ ಮರು ಪರಿಶೀಲಿಸಬೇಕು ಎಂದರು.

ಬಾಬರಿ ಮಸೀದಿಗೆ ಸಂಬಂಧಿಸಿದ ತೀರ್ಪು ಸತ್ಯಾಸತ್ಯತೆಗಳನ್ನು ಮೀರಿ ಇತರರ ನಂಬಿಕೆಗಳು ಮತ್ತು ಭಾವನೆಗಳನ್ನು ಆಧರಿಸಿದೆ. ಆದರೆ ಹಿಜಾಬ್‌ಗೆ ಸಂಬಂಧಿದಂತೆ ರಾಜ್ಯ ಹೈಕೋರ್ಟ್‌ನ ತೀರ್ಪು ಕಾನೂನು ಮತ್ತು ಸತ್ಯಗಳನ್ನು ಬದಲಿಸಿದೆ. ಅಲ್ಲದೆ ನಿರ್ದಿಷ್ಟ ವಿಭಾಗದ ಭಾವನೆಗಳಿಗೆ ಮಹತ್ವ ನೀಡಿದೆ. ಈ ಪ್ರವೃತ್ತಿಯು ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ. ದೇಶದಲ್ಲಿ ಸಂಘ ಪರಿವಾರದ ಫ್ಯಾಶಿಸಂ ಅಲ್ಪಸಂಖ್ಯಾತರ ಹಕ್ಕುಗಳನ್ನು ಮತ್ತು ಸಂವಿಧಾನಾತ್ಮಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿ ಸಂವಿಧಾನಿಕವಾದ ಹಕ್ಕನ್ನು ಕಸಿಯುತ್ತಿರುವಾಗ ಈ ದುಷ್ಕೃತ್ಯವನ್ನು ಖಂಡಿಸಲೇಬೇಕಾಗಿದೆ ಎಂದು  ಜಾಫರ್ ಸಾದಿಕ್ ಫೈಝಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಇಮಾಮ್ಸ್ ಕೌನ್ಸಿಲ್‌ನ ರಾಜ್ಯ ಸಮಿತಿಯ ಸದಸ್ಯ ಅಬ್ದುಲ್ ಹಮೀದ್ ಮುಸ್ಲಿಯಾರ್, ದ.ಕ.ಜಿಲ್ಲಾ ಸಮಿತಿಯ ಕಾರ್ಯದರ್ಶಿ ಮುಹಮ್ಮದ್ ಹಾರಿಸ್ ಹನೀಫಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X