Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಜಾಪ್ರಭುತ್ವದಲ್ಲಿ ಫೇಸ್ಬುಕ್,‌...

ಪ್ರಜಾಪ್ರಭುತ್ವದಲ್ಲಿ ಫೇಸ್ಬುಕ್,‌ ಟ್ವಿಟರ್ ನ ಹಸ್ತಕ್ಷೇಪಕ್ಕೆ ಅಂತ್ಯ ಹಾಡಲು ಸರಕಾರಕ್ಕೆ ಸೋನಿಯಾ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 March 2022 10:48 PM IST
share
ಪ್ರಜಾಪ್ರಭುತ್ವದಲ್ಲಿ ಫೇಸ್ಬುಕ್,‌ ಟ್ವಿಟರ್ ನ ಹಸ್ತಕ್ಷೇಪಕ್ಕೆ ಅಂತ್ಯ ಹಾಡಲು ಸರಕಾರಕ್ಕೆ ಸೋನಿಯಾ ಆಗ್ರಹ

ಹೊಸದಿಲ್ಲಿ, ಮಾ.16: ಪ್ರಜಾಪ್ರಭುತ್ವವನ್ನು ಅತಿಕ್ರಮಿಸಲು ಸಾಮಾಜಿಕ ಮಾಧ್ಯಮಗಳ ದುರುಪಯೋಗದ ಹೆಚ್ಚುತ್ತಿರುವ ಅಪಾಯದ ಬಗ್ಗೆ ಬುಧವಾರ ಲೋಕಸಭೆಯಲ್ಲಿ ಕಳವಳವನ್ನು ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು,ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವದ ಚುನಾವಣಾ ರಾಜಕೀಯದಲ್ಲಿ ಫೇಸ್ಬುಕ್ ಮತ್ತು ಇತರ ದೈತ್ಯ ಸಾಮಾಜಿಕ ಮಾಧ್ಯಮಗಳ ವ್ಯವಸ್ಥಿತ ಹಸ್ತಕ್ಷೇಪಕ್ಕೆ ಅಂತ್ಯ ಹಾಡುವಂತೆ ಸರಕಾರವನ್ನು ಆಗ್ರಹಿಸಿದರು.

ಶೂನ್ಯವೇಳೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಅವರು,ಫೇಸ್ಬುಕ್ ಮತ್ತು ಟ್ವಿಟರ್ನಂತಹ ಜಾಗತಿಕ ಕಂಪನಿಗಳನ್ನು ರಾಜಕೀಯ ಪಕ್ಷಗಳ ನಾಯಕರು ಮತ್ತು ಅವರ ಬದಲಿ ಪ್ರತಿನಿಧಿಗಳಿಂದ ರಾಜಕೀಯ ನಿರೂಪಣೆಯನ್ನು ರೂಪಿಸಲು ಬಳಸಲಾಗುತ್ತಿದೆ ಎಂದು ಬೆಟ್ಟು ಮಾಡಿದರು.

ಜಾಗತಿಕ ಸಾಮಾಜಿಕ ಮಾಧ್ಯಮ ಕಂಪನಿಗಳು ಎಲ್ಲ ರಾಜಕೀಯ ಪಕ್ಷಗಳಿಗೆ ಸಮಾನ ವೇದಿಕೆಯನ್ನು ಒದಗಿಸುತ್ತಿಲ್ಲ ಎನ್ನುವುದು ಪದೇಪದೇ ಸಾರ್ವಜನಿಕ ಗಮನಕ್ಕೆ ಬಂದಿದೆ ಎಂದರು.
ಇತರ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ ಫೇಸ್ಬುಕ್ ಚುನಾವಣಾ ಜಾಹೀರಾತುಗಳಿಗಾಗಿ ‘ತನ್ನದೇ ದ್ವೇಷ ಭಾಷಣ ನಿಯಮಗಳನ್ನು ಬಗ್ಗಿಸಿ’ ಆಡಳಿತಾರೂಢ ಬಿಜೆಪಿಯ ಮುಂದೆ ಅಗ್ಗದ ಕೊಡುಗೆಗಳನ್ನು ಇರಿಸಿತ್ತು ಮತ್ತು ಸರಕಾರದ ವಿರುದ್ಧ ಮಾತನಾಡುತ್ತಿದ್ದ ಎಲ್ಲರ ಧ್ವನಿಯನ್ನು ದಮನಿಸಿತ್ತು ಎಂದು ಪ್ರತಿಪಾದಿಸಿರುವ ಅಲ್ಝಝೀರಾ ಮತ್ತು ದಿ ರಿಪೋರ್ಟ್ರ್ಸ್ ಕಲೆಕ್ಟಿವ್ ಪ್ರಕಟಿಸಿರುವ ವರದಿಯನ್ನು ಸೋನಿಯಾ ಪ್ರಸ್ತಾಪಿಸಿದರು.

ಈ ವಿಷಯವು ಅತ್ಯಂತ ಮಹತ್ವದ್ದಾಗಿದೆ ಎಂದು ಒತ್ತಿ ಹೇಳಿದ ಅವರು,‘ಆಡಳಿತ ವ್ಯವಸ್ಥೆಯ ಶಾಮೀಲಾತಿಯೊಂದಿಗೆ ಫೇಸ್ಬುಕ್ ಸಾಮಾಜಿಕ ಸೌಹಾರ್ದವನ್ನು ಕದಡುತ್ತಿರುವ ಅಬ್ಬರದ ರೀತಿಯು ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ. ಭಾವನಾತ್ಮಕವಾಗಿ ಉದ್ರೇಕಿಸುವ ತಪ್ಪು ಮಾಹಿತಿಗಳು ಮತ್ತು ಪ್ರಾಕ್ಸಿ ಜಾಹೀರಾತುಗಳ ಮೂಲಕ ಯುವಜನರು ಮತ್ತು ಹಿರಿಯರ ಮನಸ್ಸುಗಳಲ್ಲಿ ಸಮಾನವಾಗಿ ದ್ವೇಷವನ್ನು ಬಿತ್ತಲಾಗುತ್ತಿದೆ. ಫೇಸ್ಬುಕ್ನಂತಹ ಕಂಪನಿಗಳಿಗೆ ಇದರ ಅರಿವಿದೆ ಮತ್ತು ಇದರಿಂದ ಅವು ಲಾಭ ಮಾಡಿಕೊಳ್ಳುತ್ತಿವೆ. ದೊಡ್ಡ ಕಾರ್ಪೊರೇಟ್ಗಳು,ಆಡಳಿತ ವ್ಯವಸ್ಥೆ ಮತ್ತು ಫೇಸ್ಬುಕ್ನಂತಹ ಜಾಗತಿಕ ದೈತ್ಯ ಸಾಮಾಜಿಕ ಮಾಧ್ಯಮಗಳ ನಡುವೆ ಹೆಚ್ಚುತ್ತಿರುವ ಸಂಬಂಧವನ್ನು ಈ ವರದಿಗಳು ತೋರಿಸಿವೆ. ಇದು ಪಕ್ಷಪಾತದ ರಾಜಕೀಯವನ್ನು ಮೀರಿದೆ. ಯಾರೇ ಅಧಿಕಾರದಲ್ಲಿದ್ದರೂ ನಾವು ನಮ್ಮ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ರಕ್ಷಿಸುವ ಅಗತ್ಯವಿದೆ ’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X