Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕ್ಯಾಂಪಸ್ ಬಳಿ ಅಕ್ರಮ ಗಣಿಗಾರಿಕೆ, ಪರಿಸರ...

ಕ್ಯಾಂಪಸ್ ಬಳಿ ಅಕ್ರಮ ಗಣಿಗಾರಿಕೆ, ಪರಿಸರ ಮಾಲಿನ್ಯ ಆರೋಪ: ಬಿಐಟಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ18 March 2022 12:36 PM IST
share
ಕ್ಯಾಂಪಸ್ ಬಳಿ ಅಕ್ರಮ ಗಣಿಗಾರಿಕೆ, ಪರಿಸರ ಮಾಲಿನ್ಯ ಆರೋಪ: ಬಿಐಟಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕೊಣಾಜೆ, ಮಾ.18: ಇನೋಳಿಯ ಬ್ಯಾರೀಸ್ ಇನ್ ಸ್ಟಿಟ್ಯೂಟ್ ಆಫ್‍ ಟೆಕ್ನಾಲಜಿ (ಬಿಐಟಿ) ಬಳಿ ಅಕ್ರಮ ಗಣಿಗಾರಿಕೆ ಹಾಗೂ ಪರಿಸರ ಮಾಲಿನ್ಯ ಚಟುವಟಿಕೆಗಳು ನಡೆಯುತ್ತಿದೆ ಎಂದು ಆರೋಪಿಸಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಶುಕ್ರವಾರ ಕ್ಯಾಂಪಸ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.

    ಬ್ಯಾರೀಸ್ ಕ್ಯಾಂಪಸ್ ಒಳಗಿಂದ ಮುಖ್ಯದ್ವಾರದ ವರೆಗೆ ಪ್ರತಿಭಟನಾ‌ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ  ಪರಿಸರ ಮಾಲಿನ್ಯದ ವಿರುದ್ದ ಘೋಷಣೆಗಳನ್ನು ಕೂಗಿದರು.

 ಪ್ರತಿಭಟನೆಯ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬ್ಯಾರೀಸ್ ಎನ್ವಿರೋ ಆರ್ಕಿಟಕ್ಚರ್ ಡಿಸೈನ್ ಸ್ಕೂಲ್ ಪ್ರಾಂಶುಪಾಲ ಎ.ಆರ್.ಅಶೋಕ್ ಮೆಂಡೋನ್ಸಾ, ಪರಿಸರ ಸಂರಕ್ಷಣೆ ನಮ್ಮ ಆದ್ಯತೆಯಾಗಿದೆ. ನಾವು ಗಣಿಗಾರಿಕೆ ವಿರೋಧಿಗಳಲ್ಲ. ಆದರೆ ಜವಾಬ್ದಾರಿಯುತವಾಗಿ ನಡೆಯಬೇಕು. ಇಲ್ಲಿ ಬ್ಯಾರೀಸ್ ಕಾಲೇಜಿನ ಬಳಿ ಕೃಷಿಗೆಂದು ಪರವಾನಿಗೆ ಪಡೆದು ಮೂವತ್ತು ಅಡಿ ಆಳದಲ್ಲಿ ಅನಧಿಕೃತವಾಗಿ ಗಣಿಗಾರಿಕೆ ಮಾಡುತ್ತಿದ್ದಾರೆ. ಇದರಿಂದ ಕ್ಯಾಂಪಸ್ ನ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಹೊಂಡದಲ್ಲಿ ನೀರು ತುಂಬಿ ಹಲವಾರು ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಅದಕ್ಕೂ ಮುನ್ನ ನಾವು ಎಚ್ಚೆತ್ತುಕೊಳ್ಳಬೇಕಿದೆ ಎಂದರು.

ಬಿಐಟಿ ಪ್ರಾಂಶುಪಾಲ ಡಾ.ಎಸ್.ಐ.ಮಂಜೂರ್ ಬಾಷಾ ಮಾತನಾಡಿ, ಬಿಐಟಿ ಬಳಿ ನಡೆಯುತ್ತಿರುವ ಗಣಿಗಾರಿಕೆಯಿಂದಾಗಿ ಪರಿಸರ ಮಾಲಿನ್ಯ, ಶಬ್ದ ಮಾಲಿನ್ಯಗಳು ಉಂಟಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗುತ್ತಿವೆ. ಅಲ್ಲದೆ ಸುಮಾರು ರಾತ್ರಿ ಏಳು ಗಂಟೆಯವರೆಗೂ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಹಾಸ್ಟೆಲ್ ವಿದ್ಯಾರ್ಥಿಗಳಿಗೂ ತೊಂದರೆಯಾಗುತ್ತಿದೆ. ಈ ಪರಿಸರ ಮಾಲಿನ್ಯದ ಬಗ್ಗೆ ಜಿಲ್ಲಾಡಳಿತಕ್ಕೂ ಮನವಿ ನೀಡಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಬಿಐಟಿ ಪಾಲಿಟೆಕ್ನಿಕ್ ನಿರ್ದೇಶಕ ಡಾ.ಅಝೀಝ್ ಮುಸ್ತಫ, ಬಿಐಟಿ ಪ್ರಾಧ್ಯಾಪಕ ಅಬ್ದುಲ್ಲಾ ಗುಬ್ಬಿ ಮೊದಲಾದವರು ಉಪಸ್ಥಿತರಿದ್ದರು.


ಮೊದಲು ಕೋವಿಡ್ ನಿಂದಾಗಿ ನಮ್ಮ ವಿದ್ಯಾಭ್ಯಾಸಕ್ಕೆ ಸಮಸ್ಯೆ ಆಗಿತ್ತು. ಇದೀಗ ಕ್ಯಾಂಪಸ್ ಬಳಿ ಗಣಿಗಾರಿಕೆಯಿಂದ  ನಮಗೆ ತೊಂದರೆಯಾಗುತ್ತಿದೆ. ನಮಗೆ ಆರೋಗ್ಯಕ್ಕೂ ಸಮಸ್ಯೆ ಆಗುತ್ತಿದ್ದು, ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಸಂಬಂಧಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳಬೇಕು.

-ಮುಹಮ್ಮದ್ ರಾಝಿಕ್

ಬಿಐಟಿ ವಿದ್ಯಾರ್ಥಿ


ಗಣಿಗಾರಿಕೆಯಿಂದ ಶಬ್ದಮಾಲಿನ್ಯ ಉಂಟಾಗಿ ಪಾಠ ಕೇಳುವುದಕ್ಕೂ ಆಗ್ತಾ ಇಲ್ಲ. ನಾವು ಶಾಂತ ರೀತಿಯಲ್ಲಿ ಮನವಿ ಮಾಡಿದರೂ ಅದಕ್ಕೆ ಬೆಲೆ ಸಿಕ್ಕಿಲ್ಲ. ದಯವಿಟ್ಟು ನಮ್ಮ ಶಿಕ್ಷಣವನ್ನು ಸರಿಯಾಗಿ ನಡೆಸಲು ಅವಕಾಶ ಕೊಡಿ. ಗಣಿಗಾರಿಕೆಯಿಂದ ಕೆಲವರಿಗೆ ಉದ್ಯೋಗ ಸಿಗುತ್ತದೇನೋ ನಿಜ. ಆದರೆ ಈ ಸಂಸ್ಥೆ ಸಾವಿರಾರು ಉದ್ಯೋಗಿಗಳನ್ನು ಸೃಷ್ಟಿಸುತ್ತಿದೆ.

-ಯಾಸೀನ್, ಬಿಐಟಿ ವಿದ್ಯಾರ್ಥಿ


ಪರಿಸರ ಮಾಲಿನ್ಯ ದೂರಗೊಳಿಸಲು ಏನಾದರೂ ಕ್ರಮ ತೆಗೆದುಕೊಳ್ಳುವ ಅಗತ್ಯ ಇದೆ. ಇಂತಹ ಶಬ್ದಮಾಲಿನ್ಯ ದಂತಹ ಸಮಸ್ಯೆಯಿಂದ ಓದಿಗೆ ತೊಂದರೆ ಆಗುತ್ತಿದೆ.

-ಗೀತಾ, ಬಿಐಟಿ ವಿದ್ಯಾರ್ಥಿನಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X