ರವಿರಾಜ ಹೆಗ್ಡೆಗೆ ಸಹಕಾರ ರತ್ನ ಪ್ರಶಸ್ತಿ
![ರವಿರಾಜ ಹೆಗ್ಡೆಗೆ ಸಹಕಾರ ರತ್ನ ಪ್ರಶಸ್ತಿ ರವಿರಾಜ ಹೆಗ್ಡೆಗೆ ಸಹಕಾರ ರತ್ನ ಪ್ರಶಸ್ತಿ](https://www.varthabharati.in/sites/default/files/images/articles/2022/03/18/328531-1647610701.jpg)
ಉಡುಪಿ : ಸಹಕಾರ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನೀಡುವ ‘ಸಹಕಾರ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಆಯ್ಕೆಯಾಗಿದ್ದಾರೆ.
ಮಾ.20ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಉಡುಪಿ ತಾಲೂಕು ಮಲ್ಪೆ ಸಮೀಪದ ಕೊಡವೂರಿನವರಾದ ರವಿರಾಜ ಹೆಗ್ಡೆ, ಕೊಡವೂರು ಹಾಲು ಉತ್ಪಾದಕರ ಸಹಕಾರಿ ಸೊಸೈಟಿಯ ಅಧ್ಯಕ್ಷ, ನಿರ್ದೇಶಕರಾಗಿ ಸಹಕಾರಿ ಬದುಕು ಪ್ರಾರಂಭಿಸಿದ್ದು, ಅವಿಭಜಿತ ದಕ ಜಿಲ್ಲೆಯ ಹಲವು ಸಂಘಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತಿದ್ದಾರೆ.
ಇವರ ಸಾಧನೆಗೆ ಎಸ್ಸಿಡಿಸಿಸಿ ಬ್ಯಾಂಕ್, ಕ್ಯಾಂಪ್ಕೋ ಸೇರಿದಂತೆ ಹಲವು ಸಂಘಟನೆಗಳು ಪ್ರಶಸ್ತಿ ನೀಡಿ ಗೌರವಿಸಿವೆ.
Next Story