Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಾಲೆಗಳಲ್ಲಿ ಭಗವದ್ಗೀತೆ, ಬೈಬಲ್, ಕುರ್‌...

ಶಾಲೆಗಳಲ್ಲಿ ಭಗವದ್ಗೀತೆ, ಬೈಬಲ್, ಕುರ್‌ ಆನ್ ಕಲಿಕೆಗೆ ವಿರೋಧವಿಲ್ಲ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ19 March 2022 8:25 PM IST
share
ಶಾಲೆಗಳಲ್ಲಿ ಭಗವದ್ಗೀತೆ, ಬೈಬಲ್, ಕುರ್‌ ಆನ್ ಕಲಿಕೆಗೆ ವಿರೋಧವಿಲ್ಲ: ಸಿದ್ದರಾಮಯ್ಯ

ಮಂಗಳೂರು : ಶಾಲೆಗಳಲ್ಲಿ ಭಗವದ್ಗೀತೆ, ಬೈಬಲ್, ಕುರ್‌ ಆನ್ ಕಲಿಸುವ ವಿಚಾರದಲ್ಲಿ ನಮ್ಮದೇನೂ ವಿರೋಧವಿಲ್ಲ. ಆದರೆ ಮಕ್ಕಳಿಗೆ ಅಗತ್ಯವಾಗಿ ಬೇಕಾಗಿರುವ ಗುಣಮಟ್ಟದ ನೈತಿಕ ಶಿಕ್ಷಣ ಕಲಿಸುವುದು ಮುಖ್ಯ ಎಂದು ಮಾಜಿ ಸಿಎಂ, ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ದ.ಕ.ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಭಗವದ್ಗೀತೆಯ ಬಗ್ಗೆ ರಾಜ್ಯ ಸರಕಾರ ಇನ್ನೂ ತೀರ್ಮಾನ ಮಾಡಿಲ್ಲ. ಭಗವದ್ಗೀತೆ, ರಾಮಾಯಣ, ಮಹಾಭಾರತ ಸಹಿತ ದೇವರ ಬಗ್ಗೆಯೂ ಮನೆಯಲ್ಲಿ ಹೇಳಿ ಕೊಡ್ತಾರೆ. ಆದರೆ ಸಂವಿಧಾನಕ್ಕೆ ವಿರುದ್ಧವಾಗಿ ಯಾವುದೂ ಮಾಡಬಾರದು ಎಂದ ಸಿದ್ದರಾಮಯ್ಯ, ನಮ್ಮದು ಬಹುಸಂಸ್ಕೃತಿಯ ರಾಷ್ಟ್ರ, ನಮ್ಮಲ್ಲಿ ಸಹಬಾಳ್ವೆ ಮುಖ್ಯ. ಸಹಿಷ್ಣುತೆ ಮತ್ತು ಸಹಬಾಳ್ವೆಯಲ್ಲಿ ನಂಬಿಕೆ ಇರುವ ನಾನು ಎಂದು ಹೇಳಿದರು.

ಪಂಚ ರಾಜ್ಯ ಚುನಾವಣೆ ಬಳಿಕ ಕಾಂಗ್ರೆಸ್‌ನ ಮೃದು ಹಿಂದುತ್ವದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಕಾಂಗ್ರೆಸ್‌ನದ್ದು ಸಾಫ್ಟ್ ಅಥವಾ ಹಾರ್ಡ್ ಹಿಂದುತ್ವ ಅಂತ ಇಲ್ಲ. ನಾವು ಹಿಂದೂ ಧರ್ಮದ ಮೇಲೆ ನಂಬಿಕೆ ಇಟ್ಟವರು. ಎಲ್ಲ ಧರ್ಮಗಳಿಗೂ ಸಮಾನ ಗೌರವ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕೋರ್ಟ್ ನಿರ್ಧಾರ ವಿರೋಧ ಸರಿಯಲ್ಲು: ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ಇರುವವರು ಬಂದ್ ಮಾಡಿದ್ದಾರೆ. ಆದರೆ ಕೋರ್ಟ್ ನಿರ್ಧಾರವನ್ನು ವಿರೋಧಿಸಬಾರದು. ಹೈಕೋರ್ಟ್, ಸುಪ್ರೀಂ ಕೋರ್ಟ್ ಯಾವುದರ ನಿರ್ಧಾರವನ್ನೂ ವಿರೋಧ ಮಾಡಬಾರದು. ಅದೇ ರೀತಿ ಯಾವ ಧರ್ಮದವರೂ ಕೋಮುವಾದ ಮಾಡಬಾರದು. ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುವ ಕೆಲಸ ಆಗಲಿ ಎಂದು ಹೇಳಿದರು.

ಕಾಶ್ಮೀರ್ ಫೈಲ್ಸ್ ನೋಡಲ್ಲ: ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸಿನಿಮಾ ಮಾಡಿ ತೋರಿಸೋದನ್ನು ಬೇಡ ಅನ್ನಲ್ಲ, ಆದರೆ ಸತ್ಯ ತೋರಿಸಲಿ. ಕಾಶ್ಮೀರದ ಉಗ್ರರ ಕೃತ್ಯದಿಂದ ಪಂಡಿತರ ಜತೆಗೆ ಬೇರೆ ಯಾರಿಗೆ ಸಮಸ್ಯೆ ಆಗಿತ್ತು ಎಂಬುದನ್ನೂ ಹೇಳಬೇಕು. ಆಗ ಯಾರ ಸರಕಾರ ಇತ್ತು? ಅವರೇನು ಮಾಡಿದ್ದರು ಎನ್ನುವುದನ್ನೂ ತೋರಿಸಬೇಕು. ಸಾಮಾನ್ಯವಾಗಿ ನಾನು ಥಿಯೇಟರ್‌ಗೆ ಹೋಗಿ ಸಿನೆಮಾ ನೋಡಲ್ಲ. ಹಾಗೇನೇ ಕಾಶ್ಮೀರ್ ಫೈಲ್ ಕೂಡ ನೋಡಲ್ಲ. ಕಾಶ್ಮೀರ್ ಫೈಲ್ ಚಿತ್ರ ತೋರಿಸಿದಂತೆ ಗುಜರಾತ್ ಘಟನೆಯನ್ನೂ ಆಧರಿಸಿದ ಚಿತ್ರವನ್ನೂ ತೋರಿಸಲಿ ಎಂದರು.

ಈ ಸಂದರ್ಭ ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿಸೋಜ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X