Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂರು ರೈತ ವಿರೋಧಿ ಕಾಯ್ದೆಗಳನ್ನು...

ಮೂರು ರೈತ ವಿರೋಧಿ ಕಾಯ್ದೆಗಳನ್ನು ಶಾಸನಬದ್ಧವಾಗಿ ಹಿಂಪಡೆಯಿರಿ: ಕೋಡಿಹಳ್ಳಿ ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ19 March 2022 8:45 PM IST
share
ಮೂರು ರೈತ ವಿರೋಧಿ ಕಾಯ್ದೆಗಳನ್ನು ಶಾಸನಬದ್ಧವಾಗಿ ಹಿಂಪಡೆಯಿರಿ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು, ಮಾ.19: ರೈತರ ಅಸ್ತಿತ್ವವನ್ನು ಕಸಿದುಕೊಳ್ಳಲು ಪೂರಕವಾಗಿ ರೂಪಿಸಿ, ಜಾರಿಗೊಳಿಸಿದ ಮೂರು ರೈತ ವಿರೋಧಿ ಕಾಯ್ದೆಗಳನ್ನು ಶಾಸನಬದ್ಧವಾಗಿ ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ್ಯ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದ್ದಾರೆ. 

ಶನಿವಾರ ಪ್ರೆಸ್‍ಕ್ಲಬ್‍ನಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರವು ಕೃಷಿ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿತ್ತು. ಆದರೆ ರೈತರ ನ್ಯಾಯಬದ್ಧ ಹೋರಾಟಗಳಿಗೆ ಮಣಿದ ಕೇಂದ್ರ ಸರಕಾರವು ಕಾಯ್ದೆಗಳನ್ನು ಹಿಂಪಡೆದಿದೆ. ಆದರೆ ರಾಜ್ಯದಲ್ಲಿ ರೈತರನ್ನು ಕೃಷಿಯಿಂದ ದೂರವಿರಿಸಲು ಜಾರಿಗೊಳಿಸಿದ ಕರ್ನಾಟಕ ಭೂ ಸುಧಾರಣಾ (ತಿದ್ದುಪಡಿ) ಕಾಯಿದೆ 2020, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ನಿಯಂತ್ರಣ ಅಭಿವೃದ್ಧಿ) ಕಾಯಿದೆ 2020 ಹಾಗೂ ಕರ್ನಾಟಕ ಜಾನುವಾರು ಹತ್ಯಾ (ನಿಷೇಧ ಮತ್ತು ಸಂರಕ್ಷಣೆ) ಕಾಯ್ದೆ 2020 ಕಾಯ್ದೆಗಳನ್ನು ಹಿಂಪಡೆಯುವ ನೈತಿಕ ಜವಾಬ್ದಾರಿ ರಾಜ್ಯ ಸರಕಾರದ ಮೇಲಿದೆ. ರೈತರು ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಮಾ.21ರಂದು ರೈತರ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು.

ರಾಜ್ಯ ಸರಕಾರವು ರೈತರಿಂದ ಭೂಮಿ ಹಾಗೂ ಕೃಷಿ ಮಾರುಕಟ್ಟೆಗಳನ್ನು ಕಾರ್ಪೊರೆಟ್ ಕಂಪನಿಗಳಿಗೆ ನೀಡುತ್ತಿದೆ.  ಗೋ ಹತ್ಯೆ ನಿಷೇಧದ ಬಗ್ಗೆ ಭಾವನಾತ್ಮಕ ಮಾತು ಹೇಳುತ್ತಾ  ಹೈನುಗಾರಿಕೆಯನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ನೀಡುತ್ತಿದೆ. 2013ರ ಭೂಸ್ವಾಧೀನ ಕಾಯ್ದೆಯ ತಿದ್ದುಪಡಿಯಲ್ಲಿ ರೈತರ ಭೂಮಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವ ಹುನ್ನಾರ ಅಡಗಿದೆ ಎಂದು ಅವರು ಹೇಳಿದರು.

ದೇಶದ ಸಂಪತ್ತಿನ ಸೃಷ್ಟಿಗೆ ಸರಿಯಾಗಿ ಯೋಜನೆಗಳನ್ನು ರೂಪಿಸದ ಸರಕಾರಗಳು ದೇಶದ ಎಲ್ಲಾ ಸಂಪತ್ತನ್ನು ಎಂಎನ್‍ಸಿಗಳಿಗೆ ನೀಡುತ್ತಿವೆ. ತೆರಿಗೆ ಪದ್ಧತಿಯಲ್ಲಿ ಜನಸಾಮಾನ್ಯರಿಗೆ ಹೆಚ್ಚು ಹೊರೆ ನೀಡಿದ್ದು, ಕಂಪನಿಗಳಿಗೆ ತೆರಿಗೆಯಲ್ಲಿ ಹೆಚ್ಚು ರಿಯಾಯಿತಿ ನೀಡಲಾಗುತ್ತಿದೆ. ಆಡಳಿತ ಕ್ರಮ ನಿಯಂತ್ರಣ ತಪ್ಪಿದ್ದು, ಭ್ರಷ್ಟಾಚಾರ ಮುಕ್ತ ಸರಕಾರಗಳು ಇಂದು ಅಸ್ತಿತ್ವದಲ್ಲಿಲ್ಲ. 

-ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯಾಧ್ಯಕ್ಷ್ಯ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X