Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೀಟ್ ಕಟ್-ಆಫ್ ವಿವಾದ: ಸರಕಾರದ...

ನೀಟ್ ಕಟ್-ಆಫ್ ವಿವಾದ: ಸರಕಾರದ ನಿರ್ಧಾರದಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಸಮಸ್ಯೆ; ಟಿ.ಎ.ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ20 March 2022 7:53 PM IST
share
ನೀಟ್ ಕಟ್-ಆಫ್ ವಿವಾದ: ಸರಕಾರದ ನಿರ್ಧಾರದಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಸಮಸ್ಯೆ; ಟಿ.ಎ.ನಾರಾಯಣಗೌಡ

ಬೆಂಗಳೂರು, ಮಾ. 20: ವೈದ್ಯಕೀಯ ಸ್ನಾತಕೋತ್ತರ ಸೀಟುಗಳು ಕರ್ನಾಟಕದ ಕಿರಿಯ ವೈದ್ಯರು ಪಡೆಯಲು ಅನುಕೂಲವಾಗುವಂತೆ ಮಾ.12ರಂದು ಕಟ್-ಆಫ್ ಅಂಕಗಳನ್ನು ಕಡಿಮೆ ಮಾಡಲಾಗಿತ್ತು. ಇದರಿಂದಾಗಿ ರಾಜ್ಯದ ಸೇವಾನಿರತ ವೈದ್ಯರು ಕೌನ್ಸಿಲಿಂಗ್‍ಗೆ ಅರ್ಹರಾಗಿದ್ದರು. ಆದರೆ ಸರಕಾರದ ಕೊನೆ ಘಳಿಗೆಯಲ್ಲಿ ಕೈಗೊಂಡ ನಿರ್ಧಾರದಿಂದ ರಾಜ್ಯದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆರೋಪಿಸಿದ್ದಾರೆ.

ಈ ಕುರಿತು ಪ್ರಕಟನೆ ನೀಡಿರುವ ಅವರು, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರ ಪ್ರಯತ್ನದಿಂದಲೇ  ಕಟ್-ಆಫ್ ಕಡಿತವಾಗಿತ್ತು. ಆದರೆ ಕರ್ನಾಟಕ ಸರಕಾರವು ಸೇವಾನಿರತ ವೈದ್ಯರಿಗೆ ಕಾಯ್ದಿರಿಸಿದ್ದ ಸೀಟುಗಳನ್ನು ಕೇಂದ್ರ ಸರಕಾರಕ್ಕೆ ಮಾ.16ರಂದು ವಾಪಸ್ ನೀಡಿದೆ. ಸಚಿವರ ಪ್ರಯತ್ನವನ್ನು ವಿಫಲಗೊಳಿಸಿದ ಕಾಣದ ಶಕ್ತಿಗಳು ಯಾವುವು? ಎಂದು ಪ್ರಶ್ನಿಸಿದ್ದಾರೆ. 

ನೀಟ್ ಪಿಜಿ ಕರ್ನಾಟಕದ ಪಾಲಿನ ಶೇ.50 ಸೀಟುಗಳಲ್ಲಿ ಕೌನ್ಸಲಿಂಗ್ ನಂತರದ ಉಳಿದ ಸೀಟುಗಳನ್ನು ಕೇಂದ್ರಕ್ಕೆ ಕೊಡಲು ಹೊರಟಿರುವುದು ಸರಿಯಲ್ಲ. ಸಚಿವರು ಈ ಕೂಡಲೇ ಈ ಪ್ರಕ್ರಿಯೆಯನ್ನು ಕೈಬಿಟ್ಟು ರಾಜ್ಯದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಎಲ್ಲ ಪ್ರಯತ್ನ ಮಾಡಬೇಕು ಎಂದು ನಾರಾಯಣಗೌಡ ಆಗ್ರಹಿಸಿದ್ದಾರೆ.

ತಮಿಳುನಾಡು ಸರಕಾರದಿಂದ ನಮ್ಮ ನಾಡ ಸರಕಾರ ಕಲಿಯುವುದು ತುಂಬಾ ಇದೆ. ಅಲ್ಲಿನ ಕೌನ್ಸಿಲಿಂಗ್ ನಂತರ ಉಳಿದ ಸೀಟುಗಳನ್ನು ಕಟ್ ಆಫ್ ಕಡಿಮೆ ಮಾಡಿ, ಉಳಿದ ಅಭ್ಯರ್ಥಿಗಳಿಗೆ ಆ ಸೀಟುಗಳನ್ನು ಮರು ಹಂಚಿಕೆ ಮಾಡಿ ತಮ್ಮ ನಾಡಿನ ಹಕ್ಕುಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ನಮ್ಮ ಸೀಟುಗಳನ್ನು ಕೇಂದ್ರಕ್ಕೆ ಹಿಂದಿರುಗಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮೊದಲೇ ನೀಟ್ ಎಂಬ ಎನ್‍ಸಿಆರ್‍ಟಿ ಸಿಲಬಸ್‍ನಲ್ಲಿ ನಡೆಯುವ ಪರೀಕ್ಷೆಯಾಗಿದ್ದು, ಕಬ್ಬಿಣ ಕಡಲೆಯಾಗಿ ನಮ್ಮ ಮಕ್ಕಳ ಎಂಬಿಬಿಎಸ್ ಎಂಡಿ ಸೀಟುಗಳು ಪರಭಾಷಿಕರ ಪಾಲಾಗುತ್ತಿವೆ. ಈಗ ರಾಜ್ಯದ ಪಟ್ಟಿಯಲ್ಲಿ ಉಳಿದಿರುವ ಸೀಟುಗಳನ್ನ ಮತ್ತೆ ಕೇಂದ್ರಕ್ಕೆ ಕೊಡಲು ಹೊರಟಿರುವುದರಿಂದ ಕನ್ನಡಿಗರನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಸ್ಪಷ್ಟವಾಗುತ್ತದೆ ಎಂದು ದೂರಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಕರ್ನಾಟಕದ ಕಿರಿಯ ವೈದ್ಯರು ಪ್ರಾಣದ ಹಂಗು ತೊರೆದು ಸರಕಾರಿ ಆಸ್ಪತ್ರೆಗಳಲ್ಲಿ ದುಡಿದಿದ್ದರು. ಈ ಕರೋನಾ ವಾರಿಯರ್‍ಗಳಿಗೆ ಪ್ರಶಂಸೆ ನೀಡದಿದ್ದರೂ ಪರವಾಗಿಲ್ಲ, ಆದರೆ ಸ್ನಾತಕೋತ್ತರ ಪದವಿ ಓದುವ ಹಕ್ಕುಗಳನ್ನು ಕಸಿಯುವುದು ಎಷ್ಟು ಸರಿ? ಇದು ಅನ್ಯಾಯದ ಪರಮಾವಧಿ ಎಂದು ತಿಳಿಸಿದ್ದಾರೆ. 

ಕರ್ನಾಟಕ ಸರಕಾರವು ಕೂಡಲೇ ಎಚ್ಚೆತ್ತುಕೊಂಡು ಆ ಸೀಟುಗಳನ್ನು ವಾಪಾಸ್ ಪಡೆಯಬೇಕು. ಕರ್ನಾಟಕದ ಅಭ್ಯರ್ಥಿಗಳ ಹಕ್ಕುಗಳನ್ನು ರಕ್ಷಣೆ ಮಾಡಬೇಕು. ಕರ್ನಾಟಕ ಸರಕಾರ ಇರುವುದು ಕನ್ನಡಿಗರ ರಕ್ಷಣೆಗೆ ಎಂದು ಮರೆಯಬಾರದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಮಧ್ಯಪ್ರವೇಶಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X