Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏಳು ವರ್ಷಗಳಲ್ಲಿ ಕಾಶ್ಮೀರಿ ಪಂಡಿತರಿಗೆ...

ಏಳು ವರ್ಷಗಳಲ್ಲಿ ಕಾಶ್ಮೀರಿ ಪಂಡಿತರಿಗೆ 6,000 ಮನೆಗಳಲ್ಲಿ ಕೇವಲ 17% ಮನೆಗಳ ನಿರ್ಮಾಣ: ಕೇಂದ್ರ ಅಂಕಿಅಂಶಗಳು

ವಾರ್ತಾಭಾರತಿವಾರ್ತಾಭಾರತಿ20 March 2022 7:55 PM IST
share
ಏಳು ವರ್ಷಗಳಲ್ಲಿ ಕಾಶ್ಮೀರಿ ಪಂಡಿತರಿಗೆ 6,000 ಮನೆಗಳಲ್ಲಿ ಕೇವಲ 17% ಮನೆಗಳ ನಿರ್ಮಾಣ: ಕೇಂದ್ರ ಅಂಕಿಅಂಶಗಳು

ಹೊಸದಿಲ್ಲಿ,ಮಾ.20: 2022ರ ಫೆಬ್ರವರಿ ತಿಂಗಳವರೆಗೆ ಕಳೆದ ಏಳು ವರ್ಷಗಳಲ್ಲಿ ನಿರಾಶ್ರಿತ ಕಾಶ್ಮೀರಿ ಪಂಡಿತರ ವಾಸ್ತವ್ಯಕ್ಕಾಗಿ ನಿರ್ಮಿಸಲು ಉದ್ದೇಶಿಸಲಾದ ಮನೆಗಳ ಪೈಕಿ ಕೇವಲ ಶೇ.17ರಷ್ಟು ಅಂದರೆ ಸುಮಾರು 1025 ಮನೆಗಳ ನಿರ್ಮಾಣ ಮಾತ್ರ ಪೂರ್ಣಗೊಂಡಿದೆ ಎಂದು ‘ದಿ ಹಿಂದೂ’ ಆಂಗ್ಲ ದೈನಿಕವು, ಕೇಂದ್ರ ಗೃಹ ಸಚಿವಾಲಯದ ದತ್ತಾಂಶಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.
     
1990ರ ದಶಕದಲ್ಲಿ ತಮ್ಮ ಸಮುದಾಯದ ಪ್ರಮುಖ ಸದಸ್ಯರನ್ನು ಉಗ್ರರು ಗುರಿಯಿರಿಸಿ, ಹತ್ಯೆಗೈದ ಬಳಿಕ ಅಂದಾಜು 83 ಸಾವಿರ ಕಾಶ್ಮೀರಿ ಪಂಡಿತರು ಕಾಶ್ಮೀರ ಕಣಿವೆ ತೊರೆದಿದ್ದಾರೆಂದು ಕೇಂದ್ರಾಡಳಿತ ಜಮ್ಮುಕಾಶ್ಮೀರದ ಅಧಿಕೃತ ವೆಬ್ಸೈಟ್ ವರದಿ ಮಾಡಿದೆ.
    
ನಿರಾಶ್ರಿತ ಕಾಶ್ಮೀರಿ ಪಂಡಿತರಿಗಾಗಿ ನಿರ್ಮಿಸಲಾಗುತ್ತಿರುವ ವಸತಿಗಳ ಕಾಮಗಾರಿ ನಿಧಾನವಾಗಿ ಸಾಗುತ್ತಿದೆಯೆಂದು ಕಳೆದ ವರ್ಷದ ಡಿಸೆಂಬರ್ನಲ್ಲಿ ಗೃಹ ವ್ಯವಹಾರಗಳ ಸ್ಥಾಯಿ ಸಮಿತಿ ಗಮನಸೆಳೆದಿದೆ. ಆವರೆಗೆ ಕಾಶ್ಮೀರಿ ಪಂಡಿತರಿಗಾಗಿ 849 ವಸತಿ ಘಟಕಗಳನ್ನು ನಿರ್ಮಿಸಲಾಗುತ್ತಿದ್ದು, ಅವುಗಳಲ್ಲಿ 176 ವಸತಿ ಘಟಕಗಳು ಮಾತ್ರವೇ ಪೂರ್ಣಗೊಂಡಿವೆ ಎಂದರು. ಆದಾಗ್ಯೂ ಶೇ.50ರಷ್ಟು ಮನೆಗಳ ನಿರ್ಮಾಣ ಕಾಮಗಾರಿ ಇನ್ನಷ್ಟೇ ಆರಂಭಗೊಳ್ಳಬೇಕಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ದತ್ತಾಂಶಗಳು ತೋರಿಸುತ್ತವೆ. ಮಾರ್ಚ್ 9ರಂದು ಕೇಂದ್ರ ಸಹಾಯಕ ಗೃಹ ಸಚಿವ ನಿತ್ಯಾನಂದ ರಾಯ್ ಅವರು ಶಿವಸೇನಾ ಸಂಸದ ಪ್ರಿಯಾಂಕಾ ಚತುರ್ವೇದಿ ಅವರಿಗೆ ಪತ್ರ ಬರೆದು, 2023ರಂಒಳಗೆ ಎಲ್ಲಾ ವಸತಿ ಘಟಕಗಳ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆಯೆಂದು ತಿಳಿಸಿದರು.
   
 1488 ವಸತಿ ಘಟಕಗಳು ನಿರ್ಮಾಣದ ವಿವಿಧ ಹಂತಗಳಲ್ಲಿರುವುದಾಗಿ ರಾಯ್ ತಿಳಿಸಿದರು. 2,744 ಘಟಕಗಳ ಟೆಂಡರ್ಗಳನ್ನು ಅಂತಿಮಗೊಳಿಸಲಾಗಿದೆ ಹಾಗೂ ಉಳಿದ ಘಟಕಗಳ ಟೆಂಡರ್ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದರು. ಖಾಸಗಿ ಜಮೀನುಗಳ ಸ್ವಾಧೀನಪಡಿಸಿಕೊಳ್ಳುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ವಸತಿಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತಗೊಳಿಸಲು 2019ರಲ್ಲಿ ಜಮ್ಮುಕಾಶ್ಮೀರ ಕೇಂದ್ರಾಡಳಿತವು ಸರಕಾರಿ ಜಮೀನನ್ನು ಖರೀದಿಸುವ ಪ್ರಕ್ರಿಯೆಯನ್ನು ಆರಂಭಿಸಿತು ಎಂದರು.
 
ಈ ವಸತಿ ಘಟಕಗಳ ಸ್ಥಾಪನೆಯ ಜೊತೆಗೆ ಕೇಂದ್ರ ಸರಕಾರವು ಜಮ್ಮಕಾಶ್ಮೀರ ವಲಸಿಗರಿಗಾಗಿ 3 ಸಾವಿರ ಸರಕಾರಿ ಉದ್ಯೋಗಗಳನ್ನು ಸೃಷ್ಟಿಸಿತು. ಆದರೆ ಈವರೆಗೆ ಕೇವಲ 1739 ವಲಸಿಗರ ನೇಮಕಾತಿಯಾಗಿದೆ. ಇತರ 1098 ಮಂದಿಯನ್ನು ಉದ್ಯೋಗಕ್ಕಾಗಿ ಆಯ್ಕೆ ಮಾಡಲಾಗಿದ್ದರೂ, ಅವರ ನೇಮಕಾತಿ ಆಗಿಲ್ಲ.
       
2008ರಲ್ಲಿ ಆಗಿನ ಕಾಂಗ್ರೆಸ್ ಸರಕಾರವು ಕಾಶ್ಮೀರಿ ವಲಸಿಗರಿಗಾಗಿ ಉದ್ಯೋಗ ಪ್ಯಾಕೇಜ್ ಘೋಷಿಸಿದ್ದು, ಅದರಡಿಯಲ್ಲಿ ಅನುಮೋದಿಸಲಾದ 3 ಸಾವಿರ ಉದ್ಯೋಗಳ ಪೈಕಿ 2905 ಉದ್ಯೋಗಳನ್ನು ಭರ್ತಿ ಮಾಡಲಾಗಿದೆ. ಹಲವಾರು ಕಾಶ್ಮೀರಿ ವಲಸಿಗರು ಪ್ರಸಕ್ತ ಜಮ್ಮು ಹಾಗೂ ಹೊಸದಿಲ್ಲಿಯಲ್ಲಿರುವ ಶಿಬಿರಗಳಲ್ಲದೆ, ಕಾಶ್ಮೀರಿ ಕಣಿವೆಯಲ್ಲಿರುವ ಕುಲಗಾಮ್ ಜಿಲ್ಲೆಯ ವೆಸ್ಸು, ಆನಂತನಾಗ್ ಜಿಲ್ಲೆಯ ಮಟ್ಟಾನ್, ಪುಲ್ವಾಮಾದ ಹಾವಲ್, ಕುಪ್ವಾರದ ನಟ್ನುಸಾ, ಬಡಗಾಮ್ನ ಶೇಖ್ಪೊರಾ ಹಾಗೂ ಬಾರಾಮಲ್ಲಾ ವಿರ್ವಾನ್ನಲ್ಲಿರುವ ವರ್ಗಾವಣೆ (ಟ್ರಾನ್ಸಿಟ್)ಶಿಬಿರಗಳಲ್ಲಿ ನೆಲೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X