ನಿಷ್ಠೆ, ಬದ್ಧತೆಗಳಿಂದ ಮಾತ್ರ ಸಮುದಾಯ ಸಂಘಟನೆ ಸಾಧ್ಯ: ಮಟ್ಟಾರು ರತ್ನಾಕರ ಹೆಗ್ಡೆ
ಪದ್ಮಶಾಲಿ ಕ್ರೀಡೋತ್ಸವ ಉದ್ಘಾಟನೆ

ಉಡುಪಿ : ನಿಷ್ಠೆ, ಪ್ರಾಮಾಣಿಕತೆ, ಬದ್ಧತೆ ಹಾಗೂ ಇಚ್ಚಾಶಕ್ತಿಗಳಿಂದ ಮಾತ್ರ ಸಮುದಾಯ ಸಂಘಟನೆಗಳು ಸಾಧ್ಯ. ಕ್ರೀಡೆ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳಂಥ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸುವುದ ರಿಂದ ಸಾಮಾಜಿಕ ಸಂಬಂಧಗಳು ಬೆಳೆದು ಸಂಘಟನೆಗಳು ಸದೃಢಗೊಳ್ಳುತ್ತವೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಭಿಪ್ರಾಯ ಪಟ್ಟಿದ್ದಾರೆ.
ಉಡುಪಿ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಾರ ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ ಮಂಗಳೂರು ಹಾಗೂ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿ ಇವರ ಜಂಟಿ ಆತಿಥ್ಯದಲ್ಲಿ ಆಯೋಜಿಸಲಾದ ಪದ್ಮಶಾಲಿ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.
ದಕ್ಷಿಣ ಕನ್ನಡ ಮೀನುಗಾರರ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಜಿಲ್ಲೆಗೆ ಪದ್ಮಶಾಲಿ ಸಮುದಾ ಯದ ಸಾಮಾಜಿಕ ಕೊಡುಗೆಗಳನ್ನು ಸ್ಮರಿಸಿದರು. ಸ್ಥಳೀಯ ನಗರಸಭಾ ಸದಸ್ಯೆ ರಶ್ಮಿ ಸಿ ಭಟ್ ಕ್ರೀಡಾ ಜ್ಯೋತಿಯನ್ನು ಹಸ್ತಾಂತರಿಸಿದರು.
ಮಹಾಸಭಾ ಮಾಜಿ ಅಧ್ಯಕ್ಷ ಎಸ್. ಸದಾನಂದ ಶೆಟ್ಟಿಗಾರ್ ಉದ್ಯಾವರ ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಅಶೋಕ್ ಕುಮಾರ್ ಭಾವಿಕಟ್ಟಿ ಹಾಗು ಮಣಿಪಾಲ ಡಾಟ್ ನೆಟ್ ಸಂಸ್ಥೆಯ ತಾಂತ್ರಿಕ ನಿರ್ದೇಶಕ ನಾಗರಾಜ್ ಶೆಟ್ಟಿಗಾರ್ ಕಟೀಲ್ ಇವರ ನಿರ್ದೇಶನದಲ್ಲಿ ಉದ್ಯೋಗ ಮಾಹಿತಿ ಶಿಬಿರವನ್ನು ಆಯೋಜಿಸಲಾಗಿತ್ತು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಡಿ ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯ ಗಿರಿಧರ ಆಚಾರ್ಯ, ದೇವದಾಸ್ ವಿ ಶೆಟ್ಟಿಗಾರ್, ಮಂಜುನಾಥ್ ಮಣಿಪಾಲ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಪದ್ಮಶಾಲಿ ಸಮುದಾಯಕ್ಕೆ ಸಂಬಂಧ ಪಟ್ಟ ಕೂಡುಕಟ್ಟಿನ ಹದಿನಾರು ದೇವಸ್ಥಾನಗಳ ಅಧ್ಯಕ್ಷರು ಹಾಗು ಮೊಕ್ತೇಸರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಡಾ.ಜಯರಾಮ್ ಶೆಟ್ಟಿಗಾರ್, ಜ್ಯೋತಿ ಪ್ರಸಾದ್ ಶೆಟ್ಟಿಗಾರ್, ಬಾಲಕೃಷ್ಣ ಶೆಟ್ಟಿಗಾರ್, ಪ್ರಭಾಶಂಕರ್ ಶೆಟ್ಟಿಗಾರ್, ಜನಾರ್ದನ್ ಶೆಟ್ಟಿಗಾರ್, ರತ್ನಾಕರ ಕಾಂತಪ್ಪ ಗುರಿಕಾರ, ಭಾಸ್ಕರ ಶೆಟ್ಟಿಗಾರ, ಬಾಲಕೃಷ್ಣ ಕಲ್ಭಾವಿ, ಈಶ್ವರ್ ಎನ್ ಶೆಟ್ಟಿಗಾರ್, ಓಂಪ್ರಕಾಶ್ ಡಿ ಶೆಟ್ಟಿಗಾರ್, ಪುರಂದರ ಶೆಟ್ಟಿಗಾರ್, ವಿವೇಕ್ ಶೆಟ್ಟಿಗಾರ್ ಇನ್ನಾ, ಸುಂದರ ಶೆಟ್ಟಿಗಾರ್, ನಾಮದೇವ್, ಚಂದ್ರಹಾಸ ಗುರಿಕಾರ, ಐತಪ್ಪ ಶೆಟ್ಟಿಗಾರ್, ಮಹಾಸಭಾ ಮತ್ತು ಪ್ರತಿಷ್ಠಾನದ ಪ್ರಮುಖರಾದ ಡಾ.ಶಿವಪ್ರಸಾದ ಕೆ, ಸರೋಜಾ ಶೆಟ್ಟಿಗಾರ್, ನರೇಂದ್ರ ಶೆಟ್ಟಿಗಾರ್, ಸದಾಶಿವ ಗೋಳಿಜೋರ, ವಿಠ್ಠಲ್ ಶೆಟ್ಟಿಗಾರ್ ಕಾರ್ಕಳ, ರಾಮದಾಸ್ ಶೆಟ್ಟಿಗಾರ್ ಪಣಿಯಾಡಿ, ಪ್ರಭಾಕರ ಕುಕ್ಕಿಕಟ್ಟೆ, ವಿಠ್ಠಲ್ ಶೆಟ್ಟಿಗಾರ್ ಕಾಟಿಪಳ್ಳ ಭಾಗವಹಿಸಿದ್ದರು.
ಪ್ರತಿಷ್ಠಾನದ ಅಧ್ಯಕ್ಷರ ರತ್ನಾಕರ ಇಂದ್ರಾಳಿ ಸ್ವಾಗತಿಸಿದರು. ಬೆಂಗಳೂರಿನ ಉಪನ್ಯಾಸಕಿ ನವ್ಯಶ್ರೀ ಪ್ರವೀಣ್ ಕಾರ್ಯಕ್ರಮ ನಿರೂಪಿಸಿ, ಕೋಶಾಧಿಕಾರಿ ರಾಘವ ಶೆಟ್ಟಿಗಾರ್ ವಂದಿಸಿದರು.







