Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ...

ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ; ಸಿಟ್ ತನಿಖೆಗೆ ಆಗ್ರಹಿಸಿ ಪ್ರತಿಭಟನಾ ಜಾಥಾ

ವಾರ್ತಾಭಾರತಿವಾರ್ತಾಭಾರತಿ21 March 2022 8:25 PM IST
share
ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ; ಸಿಟ್ ತನಿಖೆಗೆ ಆಗ್ರಹಿಸಿ ಪ್ರತಿಭಟನಾ ಜಾಥಾ

ಮಂಗಳೂರು : ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆ ಪ್ರಕರಣದ ಆರೋಪಿಗಳಾದ ನಮೋ ಬ್ರಿಗೇಡ್ ಸಂಸ್ಥಾಪಕ ನರೇಶ್ ಶೆಣೈ ಮತ್ತಿತರರಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಬಾಳಿಗಾ ಕುಟುಂಬಕ್ಕೆ ಪರಿಹಾರ ಧನ ನೀಡಬೇಕು. ಪ್ರಕರಣದ ಸತ್ಯಾಸತ್ಯತೆ ಬಯಲಿಗೆಳೆಯುವ ಸಲುವಾಗಿ ಸಿಟ್‌ನಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ದೇಶಪ್ರೇಮಿ ಸಂಘಟನೆಗಳ ಒಕ್ಕೂಟ ಮಂಗಳೂರು ಇದರ ವತಿಯಿಂದ ಸೋಮವಾರ ನಗರದ ಕಾರ್‌ಸ್ಟ್ರೀಟ್‌ನ ಶ್ರೀವೆಂಕಟರಮಣ ದೇವಸ್ಥಾನದಿಂದ ವಿನಾಯಕ  ಬಾಳಿಗಾರ ಮನೆಗೆ ಪ್ರತಿಭಟನಾ ಜಾಥಾ ನಡೆಯಿತು.

ತನಿಖೆಯು ಮಂದಗತಿಯಲ್ಲಿ ಸಾಗುತ್ತಿದೆ, ಆರೋಪಿಗಳನ್ನು ರಕ್ಷಿಸುತ್ತಿದೆ, ಪರಿಹಾರ ಧನ ವಿತರಣೆಯಲ್ಲಿ ತಾರತಮ್ಯ ಎಸಗುತ್ತಿದೆ ಎಂದ ಪ್ರತಿಭಟನಾಕಾರರು ಸ್ಥಳೀಯ ಶಾಸಕ, ಸಂಸದರು ಇನ್ನೂ ಯಾಕೆ ವಿನಾಯಕ ಬಾಳಿಗಾ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿಲ್ಲ ಎಂದು ಪ್ರಶ್ನಿಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ವಿಚಾರವಾದಿಗಳ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಪ್ರೊ. ನರೇಂದ್ರ ನಾಯಕ್ ʼವಿನಾಯಕ ಬಾಳಿಗಾರ ಕೊಲೆಯಾಗಿ ಇಂದಿಗೆ 6 ವರ್ಷವಾಗಿದೆ. ನ್ಯಾಯಕ್ಕಾಗಿ ನಾವು ಹೋರಾಟ ಮಾಡುತ್ತಲೇ ಬಂದಿದ್ದೇವೆ. ಆದರೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಿಲ್ಲ. ಅದಕ್ಕಾಗಿ ಸಿಟ್ ತನಿಖೆಯಾಗಬೇಕು. ಆರೋಪಿಗಳನ್ನು ಮಂಪರು ಪರೀಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದರು.

ನನಗೂ ವಿನಾಯಕ ಬಾಳಿಗಾರಿಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯವಿದೆ. ನಾನೊಬ್ಬ ಜಾತ್ಯತೀತನಾಗಿದ್ದರೆ, ವಿನಾಯಕ ಬಾಳಿಗಾ ಹಿಂದುತ್ವವಾದಿ. ಆದರೆ ಆರ್‌ಟಿಐ ಕಾರ್ಯಕರ್ತವಾಗಿದ್ದ ವಿನಾಯಕ ಬಾಳಿಗಾ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದ ಪ್ರಾಮಾಣಿಕ. ಭಾರತ ಮಾತೆ, ಗೋರಕ್ಷಕರು ಎಂದು ಹೇಳಿಕೊಳ್ಳುವ ಸಂಘಟನೆಯಲ್ಲೇ ಸಕ್ರಿಯನಾಗಿದ್ದ ವಿನಾಯಕ ಬಾಳಿಗಾರನ್ನು ಬರ್ಬರವಾಗಿ ಕೊಂದರೂ ಕೂಡ ಆ ಸಂಘಟನೆಯವರು ಮೌನ ತಾಳಿರುವುದು ವಿಪರ್ಯಾಸ. ಹಾಗಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗದಿದ್ದರೆ ಇಂತಹ ಕೊಲೆಗಳು ಮರುಕಳಿಸಬಹುದು ಎಂದು ಎಚ್ಚರಿಸಿದರು.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿ ವಿನಾಯಕ ಬಾಳಿಗಾರ ಕುಟುಂಬಕ್ಕೆ ಇನ್ನೂ ನೆರವು ಸಿಕ್ಕಿಲ್ಲ.  ಪರಿಹಾರ ಧನವೂ ಸಿಕ್ಕಿಲ್ಲ. ಹಾಗಾಗಿ ಅವರ ಕುಟುಂಬದ ಜೊತೆ ಸಮಾಜ ನಿಲ್ಲಬೇಕಿದೆ, ನ್ಯಾಯ ಒದಗಿಸಿಕೊಡಬೇಕಿದೆ ಎಂದರು.

ಮನೋವೈದ್ಯ ಡಾ.ಪಿ.ವಿ.ಭಂಡಾರಿ ಮಾತನಾಡಿ ವಿನಾಯಕ ಬಾಳಿಗಾರ ಕೊಲೆಯಾದಾಗ ಕಾಂಗ್ರೆಸ್ ಸರಕಾರವಿತ್ತು. ಬಳಿಕ ತನಿಖಾ ಹಂತದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರವಿತ್ತು. ಇದೀಗ ಬಿಜೆಪಿ ಸರಕಾರವೇ ಇದೆ. ಆದರೆ, ಸೂಕ್ತ ರೀತಿಯಲ್ಲಿ ತನಿಖೆಯಾಗಿಲ್ಲ. ನ್ಯಾಯ ಮರೀಚಿಕೆಯಾಗಿದೆ. ಇದೀಗ ಕೆಲವರು ಱಕಾಶ್ಮೀರಿ ಫೈಲ್ಸ್ ಚಲನಚಿತ್ರ ನೋಡಿ ಕಣ್ಣೀರಿಳಿಸುತ್ತಿದ್ದಾರೆ. ಇಲ್ಲೇ ನಮ್ಮೂರಲ್ಲೇ ವಿನಾಯಕ ಬಾಳಿಗಾರ ಕೊಲೆಯನ್ನು ನೋಡಿ, ಕೇಳಿದ ಅವರು ಯಾಕೆ ಕಣ್ಣೀರು ಸುರಿಸಿಲ್ಲ? ಜಿಎಸ್‌ಬಿ ಸಮುದಾಯ ಯಾಕೆ ಮೌನ ವಹಿಸಿದೆ ಎಂದು ಪ್ರಶ್ನಿಸಿದರು.

ಈ ಸಂದರ್ಭ ವಿನಾಯಕ ಬಾಳಿಗಾರ ಸಹೋದರಿ ಅನುರಾಧಾ ಬಾಳಿಗಾ, ವಿವಿಧ ಸಂಘಟನೆಗಳ ಮುಖಂಡರಾದ ಎಂ.ದೇವದಾಸ್, ಮುನೀರ್ ಕಾಟಿಪಳ್ಳ, ವಿ.ಕುಕ್ಯಾನ್, ವಾಸುದೇವ ಉಚ್ಚಿಲ್. ಸುನೀಲ್ ಬಜಿಲಕೇರಿ, ಶಾಲೆಟ್ ಪಿಂಟೋ, ಅಮೃತ ಶೆಣೈ ಉಡುಪಿ, ಡಾ. ಕೃಷ್ಣಪ್ಪ ಕೊಂಚಾಡಿ, ಸುರಯ್ಯಾ ಅಂಜುಮ್, ಮಾಜಿ ಕಾರ್ಪೊರೇಟರ್‌ಗಳಾದ ಮುಹಮ್ಮದ್ ಕುಂಜತ್ತಬೈಲ್, ಅಪ್ಪಿ, ಪ್ರಕಾಶ್ ಸಾಲ್ಯಾನ್, ರಘು ಎಕ್ಕಾರು, ಸಮರ್ಥ್ ಭಟ್, ಲಾರೆನ್ಸ್ ಡಿಸೋಜ, ಟಿ.ಕೆ. ಸುಧೀರ್, ಅಸುಂತ ಡಿಸೋಜ, ಮೈಕಲ್ ಡಿಸೋಜ, ಕುರಣಾಕರ್, ರಾಕೇಶ್ ದೇವಾಡಿಗ, ಮಂಜುಳಾ ನಾಯಕ್, ಹರ್ಷ ಬಾಳಿಗಾ, ಕದ್ರಿ ಟವರ್ಸ್‌, ಚಂದ್ರಕಲಾ, ವೀಣಾ ಭಟ್, ಶ್ಯಾಮಸುಂದರ್, ನವೀನ್ ಕೊಂಚಾಡಿ  ಮತ್ತಿತರರು ಪಾಲ್ಗೊಂಡಿದ್ದರು.

ಡಿವೈಎಫ್‌ಐ ದ.ಕ.ಜಿಲ್ಲಾ ಕಾರ್ಯದರ್ಶಿ ಸಂತೋಷ್ ಕುಮಾರ್ ಬಜಾಲ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X