Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇಕೆದಾಟು ಯೋಜನೆ: ಬಿಜೆಪಿ ಸುಳ್ಳು...

ಮೇಕೆದಾಟು ಯೋಜನೆ: ಬಿಜೆಪಿ ಸುಳ್ಳು ಹೇಳುತ್ತಿದೆ ಎಂಬ ತೀರ್ಮಾನಕ್ಕೆ ಬರಬೇಕಾಗುತ್ತದೆ; ಸಿದ್ದರಾಮಯ್ಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ21 March 2022 8:27 PM IST
share
ಮೇಕೆದಾಟು ಯೋಜನೆ: ಬಿಜೆಪಿ ಸುಳ್ಳು ಹೇಳುತ್ತಿದೆ ಎಂಬ ತೀರ್ಮಾನಕ್ಕೆ ಬರಬೇಕಾಗುತ್ತದೆ; ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು, ಮಾ. 21: ‘ಬಿಜೆಪಿಯವರು ಮತ ಕ್ರೋಡೀಕರಣಕ್ಕಾಗಿ ಪರಿಸರ ಅನುಮತಿ ನೀಡದೆ ನಾಟಕವಾಡುತ್ತಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯ ಡಬ್ಬಲ್ ಇಂಜಿನ್ ಸರಕಾರವಿದೆ. ಕೂಡಲೇ ಅನುಮತಿ ತೆಗೆದುಕೊಳ್ಳಲಿಲ್ಲವೆಂದರೆ ಉಭಯ ಸರಕಾರಗಳು ಅನ್ಯಾಯ ಮಾಡುತ್ತಿದ್ದು, ರಾಜ್ಯದ ಬಿಜೆಪಿ ಸರಕಾರ ಸುಳ್ಳು ಹೇಳುತ್ತಿದೆ ಎಂಬ ತೀರ್ಮಾನಕ್ಕೆ ನಾವು ಬರಬೇಕಾಗುತ್ತದೆ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ‘ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 2018ರ ಫೆಬ್ರವರಿ 16ಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದೆ. ಒಂದು ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ನೀರು ತಮಿಳುನಾಡಿಗೆ ಬಿಡುವಂತೆ ಆದೇಶ ಮಾಡಿದೆ. ಇದರ ನಿರ್ವಹಣೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಸ್ತಿತ್ವದಲ್ಲಿದೆ.

ಇಷ್ಟು ಪ್ರಮಾಣದ ನೀರು ಪಡೆಯುವುದು ಮಾತ್ರ ತಮಿಳುನಾಡಿಗಿರುವ ಹಕ್ಕು. ಈ ತೀರ್ಪು ಬಂದ ಮೇಲೆ ಸುಮಾರು 400 ಟಿಎಂಸಿಗೂ ಅಧಿಕ ನೀರು ಹೆಚ್ಚುವರಿಯಾಗಿ ತಮಿಳುನಾಡಿಗೆ ಹರಿದು ಹೋಗಿದೆ. ಹಾಗಾಗಿ ಕೇಂದ್ರ ಸರಕಾರ ಕೂಡಲೇ ಪರಿಸರ ಅನುಮತಿ ಕೊಡಬೇಕು. ಇದು ನಮ್ಮ ಪಾಲಿನ ನೀರು, ವ್ಯರ್ಥವಾಗಿ ತಮಿಳುನಾಡಿಗೆ ಹೋಗುತ್ತಿದೆ' ಎಂದು ಅವರು ಆಗ್ರಹಿಸಿದರು.

‘ಮೇಕೆದಾಟು ಅಣೆಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕದ ನಡುವೆ ವಿವಾದವೇ ಇಲ್ಲ. ಈ ವಿಚಾರ ಈಗಾಗಲೇ ಸುಪ್ರೀಂ ಕೋರ್ಟ್‍ನಲ್ಲಿ ಇತ್ಯರ್ಥವಾಗಿದೆ. ಕೇಂದ್ರ ಸರಕಾರ ಇಚ್ಛಾಶಕ್ತಿ ಮತ್ತು ಒಕ್ಕೂಟ ಧರ್ಮದ ಪಾಲನೆ ಮಾಡಬೇಕು. ಬಹಳ ಹಿಂದೆಯೇ ಪರಿಸರ ಅನುಮತಿ ಕೊಡಬೇಕಿತ್ತು, ಕೂಡಲೇ ಈ ಕೆಲಸ ಮಾಡಿ ಎಂದು ಮೊನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಸರ್ವಪಕ್ಷ ಸಭೆಯಲ್ಲಿ ಹೇಳಿದ್ದೇವೆ, ಅವರು ಅನುಮತಿ ಪಡೆದುಕೊಳ್ಳುತ್ತೇವೆ ಎಂಬ ಭರವಸೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

‘ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಯಾಗಬಾರದು ಎಂದು ಧರಣಿ ಕೂತಿದ್ದರು. ಹೀಗಾಗಿ ಬಿಜೆಪಿ ತಮಿಳುನಾಡಿನಲ್ಲಿ ತಮಗೆ ಮತ ಬರುತ್ತವೆ ಎಂಬ ಮನೋಭಾವದಲ್ಲಿ ವಿಳಂಬ ಧೋರಣೆ ಅನುಸರಿಸದೆ ಕೂಡಲೇ ಕೇಂದ್ರ ಪರಿಸರ ಇಲಾಖೆಯಿಂದ ಅನುಮೋದನೆ ಪಡೆದು ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X