Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೃಷಿ ಕಾಯ್ದೆ ವಾಪಸ್ ಸಣ್ಣ ಸಾಧನೆಯಷ್ಟೆ,...

ಕೃಷಿ ಕಾಯ್ದೆ ವಾಪಸ್ ಸಣ್ಣ ಸಾಧನೆಯಷ್ಟೆ, ಹಿಂಬಾಗಿಲಿನಿಂದ ಅದನ್ನು ಜಾರಿಗೊಳಿಸದಂತೆ ಎಚ್ಚರವಹಿಸಿ: ಯೋಗೇಂದ್ರ ಯಾದವ್

''ಬಿಜೆಪಿಯಿಂದ ದೇಶವನ್ನು ರಕ್ಷಿಸಬೇಕಿದೆ'' ► ಬೆಂಗಳೂರಿನಲ್ಲಿ ಜನಪರ್ಯಾಯ ಬಜೆಟ್ ಅಧಿವೇಶನ

ವಾರ್ತಾಭಾರತಿವಾರ್ತಾಭಾರತಿ21 March 2022 8:36 PM IST
share
ಕೃಷಿ ಕಾಯ್ದೆ ವಾಪಸ್ ಸಣ್ಣ ಸಾಧನೆಯಷ್ಟೆ, ಹಿಂಬಾಗಿಲಿನಿಂದ ಅದನ್ನು ಜಾರಿಗೊಳಿಸದಂತೆ ಎಚ್ಚರವಹಿಸಿ: ಯೋಗೇಂದ್ರ ಯಾದವ್

ಬೆಂಗಳೂರು, ಮಾ.21: ರೈತರು ಒಗ್ಗಾಟ್ಟಾಗಿ ಮುಂದಡಿ ಇಡುವುದನ್ನು ತಿಳಿಯದಿದ್ದ ಕೇಂದ್ರ ಸರಕಾರವು ಕೃಷಿ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮಾಡಿರುವುದು ಸಣ್ಣ ಸಾಧನೆ ಅಷ್ಟೇ. ಮೋದಿ ಸರಕಾರ ಕೃಷಿ ಕಾಯ್ದೆಯನ್ನು ಹಿಂಪಡೆದಿರಬಹುದು. ಆದರೆ ಹಿಂಬಾಗಿಲ ಮೂಲಕ ಅದನ್ನು ಜಾರಿ ಮಾಡಲು ಅವರು ಯತ್ನಿಸುತ್ತಾರೆ. ನಾವು ಎಚ್ಚರಿಕೆಯಿಂದಿರಬೇಕು ಎಂದು ಸಂಯುಕ್ತ ಹೋರಾಟ ಕಿಸಾನ್ ಮೋರ್ಚಾದ ಮುಖಂಡ ಯೋಗೇಂದ್ರ ಯಾದವ್ ಕಿವಿಮಾತು ಹೇಳಿದ್ದಾರೆ. 

ಸೋಮವಾರ ಫ್ರೀಡಂಪಾರ್ಕ್‍ನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಆಯೋಜಿಸಿದ್ದ ಜನಪರ್ಯಾಯ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರವು ಜಾರಿಗೊಳಿಸಿದ್ದ ಕೃಷಿ ವಿರೋಧಿ ಕಾಯ್ದೆಗಳು ನಮ್ಮೆದುರಿಗಿದ್ದ ಹೆಚ್ಚುವರಿ ಸಮಸ್ಯೆಯಷ್ಟೆ ಆಗಿದ್ದವು. ಅವನ್ನು ಹಿಂಪಡೆದರೂ, ಕಾನೂನುಗಳು ಮಾತ್ರವಲ್ಲ, ಅವರು ಫ್ರೀ ಟ್ರೇಡ್ ಅಗ್ರಿಮೆಂಟ್ (ಎಫ್‍ಟಿಎ) ಅನ್ನು ಜಾರಿಗೆ ತರುತ್ತಾರೆ. ಆಸ್ಟ್ರೇಲಿಯಾದ ಜೊತೆಗೆ ಫ್ರೀ ಟ್ರೇಡ್ ಅಗ್ರಿಮೆಂಟ್ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಅದು ನಡೆದರೆ, ನಮ್ಮ ಹೈನುಗಾರರು ನಾಶವಾಗುತ್ತದೆ ಎಂದು ಅವರು ಹೇಳಿದರು.

ಮೂರು ಕೃಷಿ ಕಾನೂನುಗಳನ್ನು ಹಿಂಪಡೆದದ್ದು ಒಳ್ಳೆಯದೆ. ಆದರೆ ಇಂತಹ ಹಲವು ಕಾನೂನು, ಕಾಯ್ದೆಗಳನ್ನು ಹಿಂಪಡೆಯುವಂತೆ ಮಾಡುವ ಸವಾಲು ನಮ್ಮ ಮುಂದಿದೆ. ಸರಕಾರ ಕನಿಷ್ಠ ಬೆಂಬಲ ಬೆಲೆ ಕುರಿತು ಸಮಿತಿಯನ್ನು ರಚಿಸಿದೆ. ಈ ಸಮಿತಿಗಳಿಂದ ಏನೂ ಆಗುವುದಿಲ್ಲ ಎಂದು ತಿಳಿದಿದೆ. ಈ ನಿಟ್ಟಿನಲ್ಲಿ ಕನಿಷ್ಠ ಬೆಂಬಲ ಬೆಲೆ ಸಿಕ್ಕಿಲ್ಲ ಆದರೂ, ಒಂದು ಸಾಧನೆಯನ್ನು ಮಾಡಿದ್ದೇವೆ. ದೇಶಾದ್ಯಂತ ರೈತರು, ರೈತ ನಾಯಕರು, ಪತ್ರಕರ್ತರು ಸೇರಿದಂತೆ ರಾಜಕಾರಣಿಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‍ಪಿ)ಯನ್ನು  ಪರಿಚಯಿಸಿದ್ದೇವೆ ಎಂದು ವಿಶ್ಲೇಷಿಸಿದರು. 

ಈಗ ರೈತರಿಗೆ ಸಿಗಬೇಕಾದ ಹಕ್ಕಿನ ಬಗ್ಗೆ ತಿಳಿದಿದ್ದು, ಎಂಎಸ್‍ಪಿ ಸಿಗಲು ಹೋರಾಡಬೇಕು. ಎಂಎಸ್‍ಪಿ ಇತ್ತು, ಎಂಎಸ್‍ಪಿ ಇದೆ ಮತ್ತು ಇರುತ್ತದೆ ಎಂದು ಪ್ರಧಾನಿ ಹೇಳುತ್ತಾರೆ. ಆದರೆ ಅದನ್ನು ಏಕೆ ಕೊಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಅಸ್ತಿತ್ವದಲ್ಲಿರುವ ಎಂಎಸ್‍ಪಿ ಅನ್ನು ಕೊಡಿಸಿ ಎಂದು ನಾವು ಕೇಳಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದು ತಿಳಿಸಿದರು.

ಈ ರೈತ ಹೋರಾಟದ ಹಾಗೆ ರೈತರು ಒಗ್ಗಟ್ಟಾದುದನ್ನು ನಾನು ಈ ಹಿಂದೆಂದೂ ನೋಡಿರಲಿಲ್ಲ. ಆದರೆ ಈ ಹೋರಾಟ ರೈತರ ಶಕ್ತಿ ಏನು ಎನ್ನುವುದನ್ನು ತೋರಿಸಿದೆ. ಮೋದಿಯಿಂದ ಹಿಡಿದು ಬೊಮ್ಮಾಯಿಯವರೆಗೆ ಎಲ್ಲಾ ಸಿಎಂಗಳಿಗೂ, ಎಲ್ಲಾ ರಾಜಕಾರಣಿಗಳಿಗೂ ರೈತರ ಜೊತೆ ಆಟವಾಡಬೇಡಿ ಎಂದು ಹೇಳಿದ ಅವರು, ರಾಜಕೀಯದ ಜೊತೆ ಆಟವಾಡುವುದೆಂದರೆ ಬೆಂಕಿಯ ಜೊತೆ ಆಟವಾಡಿದಂತೆ.  ನಾವು ಈ ಬಗ್ಗೆ ಎಚ್ಚರದಿಂದಿರಬೇಕು. ದೊಡ್ಡ ಉದ್ದೇಶಗಳಿಗಾಗಿ ಈ ಶಕ್ತಿಯನ್ನು ನಾವು ಉಪಯೋಗಿಸಬೇಕಾಗಿದೆ ಎಂದು ಕಿವಿಮಾತು ಹೇಳಿದರು.

ಇದೇ ವೇಳೆ ಸಂಯುಕ್ತ ಹೋರಾಟ- ಕರ್ನಾಟಕದ ಮುಖಂಡ ಬಡಗಲಪುರ ನಾಗೇಂದ್ರ, ಕವಿತಾ ಕುರಗಂಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

► ಬಿಜೆಪಿಯಿಂದ ದೇಶವನ್ನು ರಕ್ಷಿಸಬೇಕಿದೆ 

2024ರ ವೇಳೆಗೆ ಈ ದೇಶದ ಎಲ್ಲಾ ರಾಜಕೀಯ ಪಕ್ಷಗಳು ರೈತರ ವಿಷಯಗಳ ಮುನ್ನೆಲೆಗೆ ತಂದು ಸ್ಪರ್ಧಿಸಬೇಕು ಎಂದು ನಾನು ಬಯಸುತ್ತೇನೆ. ಆಗ ರೈತರ ಹೋರಾಟದ ನಿಜವಾದ ಗೆಲುವಾಗಿರುತ್ತದೆ. ಏಕೆಂದರೆ ಇಂದು ನಮ್ಮ ದೇಶ ಪ್ರಜಾಪ್ರಭುತ್ವ, ಜಾತ್ಯತೀತತೆ ಅಪಾಯದಲ್ಲಿದೆ. ಈ ದೇಶವನ್ನು ರಕ್ಷಿಸುವ ಜವಾಬ್ದಾರಿ ರೈತರ ಮೇಲಿದೆ. ಈ ದೇಶವನ್ನು ನಾಶ ಮಾಡಲು ಹೊರಟಿರುವ ಆರೆಸ್ಸೆಸ್, ಬಿಜೆಪಿ ಶಕ್ತಿಗಳಿಂದ ಈ ದೇಶವನ್ನು ರಕ್ಷಿಸುವುದು ರೈತ ಹೋರಾಟದ ರಾಜಕೀಯದ ಮುಖ್ಯ ಗುರಿಯಾಗಬೇಕಾಗಿದೆ.

-ಯೋಗೇಂದ್ರ ಯಾದವ್, ಮುಖಂಡ, ಸಂಯುಕ್ತ ಹೋರಾಟ ಕಿಸಾನ್ ಮೋರ್ಚಾ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X