Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಶೂದ್ರ-ದಲಿತ, ಬ್ರಾಹ್ಮಣೇತರ ಚಳವಳಿಗಳ...

ಶೂದ್ರ-ದಲಿತ, ಬ್ರಾಹ್ಮಣೇತರ ಚಳವಳಿಗಳ ಸಂಕ್ಷಿಪ್ತ ಇತಿಹಾಸವನ್ನು ಕಟ್ಟಿಕೊಡುವ ಕೃತಿ

ಡಾ. ಸಿದ್ದನಗೌಡ ಪಾಟೀಲಡಾ. ಸಿದ್ದನಗೌಡ ಪಾಟೀಲ22 March 2022 11:51 AM IST
share
ಶೂದ್ರ-ದಲಿತ, ಬ್ರಾಹ್ಮಣೇತರ ಚಳವಳಿಗಳ ಸಂಕ್ಷಿಪ್ತ ಇತಿಹಾಸವನ್ನು ಕಟ್ಟಿಕೊಡುವ ಕೃತಿ

ಡಾ. ಟಿ. ಆರ್. ಚಂದ್ರಶೇಖರ ಕನ್ನಡ ವಿಶ್ವವಿದ್ಯಾನಿಲಯ ಹಂಪಿಯ ಅಭಿವೃದ್ಧಿ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ 1996ರಿಂದ ಕಾರ್ಯನಿರ್ವಹಿಸಿ 2013ರಲ್ಲಿ ನಿವೃತ್ತರಾಗಿದ್ದಾರೆ. ಅಭಿವೃದ್ಧಿ, ವಿಕೇಂದ್ರೀಕರಣ, ಮಾನವ ಅಭಿವೃದ್ಧಿ, ಲಿಂಗ ಸಂಬಂಧಗಳು, ವಚನ ಸಂಸ್ಕೃತಿ ಇವರ ಅಧ್ಯಯನ ಕ್ಷೇತ್ರಗಳು. ವಾಸ್ತವವಾದಿ, ಜನಕೇಂದ್ರಿತ ದೃಷ್ಟಿಕೋನದಿಂದ ವಿಷಯ, ವಿದ್ಯಮಾನಗಳನ್ನು ವಿಶ್ಲೇಷಿಸುವ ಡಾ. ಟಿ. ಆರ್. ಚಂದ್ರಶೇಖರ ಅವರು ನಮ್ಮ ನಾಡಿನ, ಪ್ರಮುಖ ಲೇಖಕ, ಚಿಂತಕರಲ್ಲೊಬ್ಬರು.

‘ಪ್ರಸ್ತುತ ಭಾರತದಲ್ಲಿ ಮೀಸಲಾತಿ ಇತಿಹಾಸ ಮತ್ತು ಮಿಲ್ಲರ್ ಸಮಿತಿ ವರದಿ: ಒಂದು ಅಧ್ಯಯನ’ ಎಂಬ ಕೃತಿಯನ್ನು ಕನ್ನಡ ಓದುಗರ ಕೈಗಿತ್ತಿದ್ದಾರೆ. ಮೀಸಲಾತಿ ಮತ್ತು ಸಂವಿಧಾನ ಕುರಿತೇ ಪ್ರಶ್ನೆಗಳೇಳುತ್ತಿರುವ ಇಂದಿನ ಸಂದರ್ಭದಲ್ಲಿ ಪ್ರಕಟವಾಗುತ್ತಿರುವ ಈ ಕೃತಿ, ಮೀಸಲಾತಿಯ ಅವಶ್ಯಕತೆ, ಅನುಷ್ಠಾನಗೊಂಡ ಸಂದರ್ಭ, ಅದಕ್ಕಾಗಿ ನಡೆದ ಚಳವಳಿಗಳನ್ನು ಮಾನವ ಸಮಾಜದ ವಿಕಾಸದ ಹಿನ್ನೆಲೆಯಿಂದ ಗ್ರಹಿಸಿ ರಚಿಸಲ್ಪಟ್ಟಿದೆ. ಲೇಖಕರು ಸ್ವಾತಂತ್ರ್ಯ ಪೂರ್ವದಿಂದ ಚಾತುರ್ವರ್ಣ ವ್ಯವಸ್ಥೆಯ ಪರಿಣಾಮದಿಂದ ಹೊರತಳ್ಳಲ್ಪಟ್ಟ ಜನಸಮೂಹದ ಸಂಕಟ ಸಂಘರ್ಷಗಳನ್ನು ದಾಖಲಿಸುತ್ತಲೇ, ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಸಂದರ್ಭದಲ್ಲಿ ಜಾತಿಕಾರಣದಿಂದ ಅವಕಾಶ ನಿರಾಕರಿಸಲ್ಪಟ್ಟ ಜನರಿಗಾಗಿ ರೂಪಗೊಂಡ ‘ಮಿಲ್ಲರ್ ಸಮಿತಿ’ ರಚನೆಯ ಸಂದರ್ಭ ಮತ್ತು ಪರಿಣಾಮಗಳ ಕುರಿತು ಬರೆದಿದ್ದಾರೆ.

ಈ ಕೃತಿ ಕೇವಲ ಮೀಸಲಾತಿ ಕುರಿತ ಮಾಹಿತಿಗಳಲ್ಲದೇ ಸ್ವಾಭಿಮಾನ ಮತ್ತು ಸ್ವಾವಲಂಬನೆಗಾಗಿ ನಡೆದ ಶೂದ್ರ-ದಲಿತ, ಬ್ರಾಹ್ಮಣೇತರ ಚಳವಳಿಗಳ ಸಂಕ್ಷಿಪ್ತ ಇತಿಹಾಸವನ್ನು ಕಟ್ಟಿಕೊಡುತ್ತದೆ. ಶತಮಾನದ ಹಿಂದೆಯೇ ಹಲವಾರು ವಿರೋಧಗಳನ್ನು ಎದುರಿಸಿ ಜಾರಿಗೆ ಬಂದ ಮಿಲ್ಲರ್ ಸಮಿತಿಯ ಶಿಫಾರಸುಗಳ ಜಾರಿಯ ಹೆಚ್ಚಿನ ಫಲಾನುಭವಿಗಳು ದಲಿತರಿಗಿಂತ ಹೆಚ್ಚಾಗಿ ಶೂದ್ರರು ಎಂಬುದು ಗಮನಾರ್ಹ, ಸಮಾಜೋ-ರಾಜಕೀಯ ಅಧ್ಯಯನಕ್ಕೆ ಸೂಕ್ತ ಆಕರವಾಗಿರುವ ಈ ಕೃತಿ ಹೆಚ್ಚು ಜನರಿಗೆ ತಲುಪಲೆಂದು ಆಶಿಸುವೆ.

(ಬೆನ್ನುಡಿಯಿಂದ)

share
ಡಾ. ಸಿದ್ದನಗೌಡ ಪಾಟೀಲ
ಡಾ. ಸಿದ್ದನಗೌಡ ಪಾಟೀಲ
Next Story
X