ಟೋಲ್ ಗೇಟ್ ತೆರವಿಗೆ ಒತ್ತಾಯ; ಹೆಜಮಾಡಿಯಿಂದ ಸುರತ್ಕಲ್ ಟೋಲ್ ಗೇಟ್ ಪಾದಯಾತ್ರೆಗೆ ಚಾಲನೆ

ಪಡುಬಿದ್ರೆ : ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಹಾಗೂ ಹೆಜಮಾಡಿ ಟೋಲ್ನಲ್ಲಿ ಸ್ಥಳೀಯರಿಗೆ ಟೋಲ್ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿ ಮಂಗಳವಾರ ಸುರತ್ಕಲ್ ಟೋಲ್ ಗೇಟ್ ಚಲೋ ಪಾದಯಾತ್ರೆ ಹೆಜಮಾಡಿಯಿಂದ ಆರಂಭಗೊಂಡಿತು.
ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಗೇಟ್ ಸಮೀಪದಲ್ಲಿರುವ ಜೂನಿಯರ್ ಕಾಲೇಜು ಬಳಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಚಾಲನೆ ನೀಡಿದರು.
ಹೆಜಮಾಡಿ, ಮುಲ್ಕಿ, ಕೊಳ್ನಾಡು, ಹಳೆಯಂಗಡಿಮ ಮುಕ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ಗೆ ತಲುಪಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 50ಕ್ಕೂ ಅಧಿಕ ಸಮಾನ ಮನಸ್ಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಮೊಯ್ದಿನ್ ಬಾವ, ಬಿಲ್ಲವ ಮಹಾಮಂಡಳ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ನ್ಯಾಯವಾದಿ ದಿ ದಿನೇಶ್ ಹೆಗ್ಡೆ ಉಳೆಪಾಡಿ, ಹೋರಾಟ ಸಮಿತಿಯ ಮುನೀರ್ ಕಾಟಿಪಳ್ಳ, ಉಡುಪಿ ಜಿಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ರಮೇರ್ಶ ಕೆ. ಕೋಟ್ಯಾನ್ ಮತ್ತಿತರರು ಭಾಗವಹಿಸಿದ್ದಾರೆ.
ಜೈಲ್ ಭರೋ ಹೋರಾಟಕ್ಕೂ ಸಿದ್ಧ: ಟೋಲ್ಗೇಟಿನಲ್ಲಿ ಸಾರ್ವಜನಿಕರಿಂದ ಅನೈತಿಕವಾಗಿ ಸುಂಕ ವಸೂಲಿ ಮಾಡುತ್ತಿರುವುದುರಿಂದ ನಿತ್ಯ ಸಂಚರಿಸುವ ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಉಭಯ ಜಿಲ್ಲೆಗಳ ನಾಗರಿಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದು, ಈ ಹೋರಾಟದ ಮೂಲಕ ಸುರತ್ಕಲ್ ಟೋಲ್ ತೆರವುಗೊಳಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಜೈಲ್ ಭರೋ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಹೇಳಿದರು.






.jpeg)

.jpeg)

