''ಕಾಶ್ಮೀರ್ ಫೈಲ್ಸ್ ನೋಡಲು ಇರುವ ಆಸಕ್ತಿ ಕಚೇರಿಯ ಕೆಲಸದ ಫೈಲ್ಸ್ಗಳನ್ನು ನೋಡಲು ಇದ್ದಿದ್ದರೆ...''
ಪ್ರಿಯಾಂಕ್ ಖರ್ಗೆ ಆಕ್ರೋಶ

ಬೆಂಗಳೂರು: ''ಸಚಿವರು, ಮುಖ್ಯಮಂತ್ರಿಗಳಿಗೆ ಕಾಶ್ಮೀರ್ ಫೈಲ್ಸ್ ನೋಡಲು ಇರುವ ಆಸಕ್ತಿ ಕಚೇರಿಯ ಆಡಳಿತಾತ್ಮಕ ಫೈಲ್ಸ್ಗಳನ್ನು ನೋಡಲು ಇದ್ದಿದ್ದರೆ ಹೀಗಾಗುತ್ತಿರಲಿಲ್ಲ'' ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ''ಪಠ್ಯಪುಸ್ತಕ ಪ್ರಿಂಟ್ ಆಗ್ತಿಲ್ಲ, ರಸ್ತೆ ಗುಂಡಿ ಮುಚ್ಚಲಿಲ್ಲ, ನೆರೆ ಪರಿಹಾರದ ಮನೆಗಳಿಗೆ ಹಣ ಬಿಡುಗಡೆಯಾಗುತ್ತಿಲ್ಲ , ಸಿಎಂ ಕಚೇರಿಯಲ್ಲಿ ಕಡತಗಳ ವಿಲೇವಾರಿ ಆಗುತ್ತಿಲ್ಲ'' ಎಂದು ಕಿಡಿಗಾರಿದ್ದಾರೆ.
‘ರಾಜ್ಯ ಸರಕಾರ ಕಾಶ್ಮೀರಿ ಫೈಲ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ್ದು, ಕಳೆದ ವಾರ ಸ್ಪೀಕರ್ ಕಾಗೇರಿ ಅವರು ಎಲ್ಲ ಸಚಿವರು, ಶಾಸಕರಿಗೆ ಸಿನೆಮಾ ವೀಕ್ಷಣೆ ಮಾಡಲು ವಿಧಾಸನಭೆಯಲ್ಲಿ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಹಾಗೂ ಆಡಳಿತ ಪಕ್ಷದ ಶಾಸಕರು ಸಿನೆಮಾ ವೀಕ್ಷಣೆ ಮಾಡಿದ್ದರು.
ಇದನ್ನೂ ಓದಿ: 'ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ
◆ಪಠ್ಯಪುಸ್ತಕ ಪ್ರಿಂಟ್ ಆಗ್ತಿಲ್ಲ
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) March 22, 2022
◆ರಸ್ತೆ ಗುಂಡಿ ಮುಚ್ಚಲಿಲ್ಲ
◆ನೆರೆ ಪರಿಹಾರದ ಮನೆಗಳಿಗೆ ಹಣ ಬಿಡುಗಡೆಯಾಗುತ್ತಿಲ್ಲ
◆ಸಿಎಂ ಕಚೇರಿಯಲ್ಲಿ ಕಡತಗಳ ವಿಲೇವಾರಿ ಆಗುತ್ತಿಲ್ಲ
ಸಚಿವರು, ಮುಖ್ಯಮಂತ್ರಿಗಳಿಗೆ ಕಾಶ್ಮೀರ್ ಫೈಲ್ಸ್ ನೋಡಲು ಇರುವ ಆಸಕ್ತಿ ಕಚೇರಿಯಲ್ಲಿ ಆಡಳಿತಾತ್ಮಕ ಫೈಲ್ಸ್ಗಳನ್ನು ನೋಡಲು ಇದ್ದಿದ್ದರೆ ಹೀಗಾಗುತ್ತಿರಲಿಲ್ಲ.







