ಕಲ್ಲಡ್ಕ ಪ್ರಭಾಕರ ಭಟ್ ಬಂಧನ, ಈಶ್ವರಪ್ಪರ ರಾಜೀನಾಮೆ ಯಾವಾಗ: ಸಿಎಂಗೆ ಕಾಂಗ್ರೆಸ್ ಪ್ರಶ್ನೆ
''ಸಿನೆಮಾ ನೋಡುವುದು, ಸಿನೆಮಾ ಮಾಡುವುದು ಬಿಜೆಪಿ ಸರ್ಕಾರದ ಸಾಧನೆಗಳು''

ಬೆಂಗಳೂರು: 'ದೇಶ ವಿರೋಧಿಗಳನ್ನು ಸಹಿಸುವುದಿಲ್ಲ ಎಂದು ಹೇಳಿಕೆ ಕೊಟ್ಟು ವೀರಾವೇಶ ಮೆರೆದಿದ್ದೀರಿ, ಸಂತೋಷ. ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ ಯಾವಾಗ ಬಂಧಿಸುತ್ತೀರಿ? ಆತನನ್ನು ಜೈಲಿಗಟ್ಟಿ ನಿಮ್ಮ ಹೇಳಿಕೆಗೆ ಬದ್ಧತೆ ತೋರಿಸಿ. ಹಾಗೆಯೇ ಈಶ್ವರಪ್ಪರ ರಾಜೀನಾಮೆ ಯಾವಾಗ ಪಡೆಯುವಿರಿ?' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ''ಬಿಜೆಪಿ ಸರ್ಕಾರದ ಸಾಧನೆಗಳು, ಸಿನೆಮಾ ಪ್ರಚಾರ ಮಾಡುವುದು, ಸಿನೆಮಾ ನೋಡುವುದು, ಸಿನೆಮಾ ಮಾಡುವುದು! ಕೃಷಿ ಇಲಾಖೆಯಲ್ಲಿ ಜ್ವಲಂತ ಸಮಸ್ಯೆಗಳಿವೆ, ರೈತರ ಸಂಕಷ್ಟ ಹಲವಾರಿವೆ, ರಸಗೊಬ್ಬರ ಅಭಾವವಿದೆ. ಆದರೆ ಕೃಷಿ ಸಚಿವರು ನಟನೆಯಲ್ಲಿ ಬ್ಯುಸಿಯಾಗಿದ್ದಾರೆ!'' ಎಂದು ಟೀಕಿಸಿದೆ.
'ರೈತರಿಗೂ ನಿಮ್ಮ ಕಾಲ್ಶೀಟ್ ಬೇಕಿತ್ತು, ಯಾವಾಗ ಕೊಡುವಿರಿ?' ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಗೆ ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಮಾನ್ಯ @BSBommai ಅವರೇ, ದೇಶ ವಿರೋಧಿಗಳನ್ನು ಸಹಿಸುವುದಿಲ್ಲ ಎಂದು ಹೇಳಿಕೆ ಕೊಟ್ಟು ವೀರಾವೇಶ ಮೆರೆದಿದ್ದೀರಿ, ಸಂತೋಷ.
— Karnataka Congress (@INCKarnataka) March 22, 2022
ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ಟನನ್ನು ಯಾವಾಗ ಬಂಧಿಸುತ್ತೀರಿ?
ಆತನನ್ನು ಜೈಲಿಗಟ್ಟಿ ನಿಮ್ಮ ಹೇಳಿಕೆಗೆ ಬದ್ಧತೆ ತೋರಿಸಿ.
ಹಾಗೆಯೇ ಈಶ್ವರಪ್ಪರ ರಾಜೀನಾಮೆ ಯಾವಾಗ ಪಡೆಯುವಿರಿ?







