Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ಲಾಮೋಫೋಬಿಯಾ ತಡೆಗೆ ಮುಸ್ಲಿಂ ದೇಶಗಳು...

ಇಸ್ಲಾಮೋಫೋಬಿಯಾ ತಡೆಗೆ ಮುಸ್ಲಿಂ ದೇಶಗಳು ಏನನ್ನೂ ಮಾಡಲಿಲ್ಲ: ಪಾಕ್ ಪ್ರಧಾನಿ ಇಮ್ರಾನ್ ಖಾನ್

ವಾರ್ತಾಭಾರತಿವಾರ್ತಾಭಾರತಿ22 March 2022 8:20 PM IST
share
ಇಸ್ಲಾಮೋಫೋಬಿಯಾ ತಡೆಗೆ ಮುಸ್ಲಿಂ ದೇಶಗಳು ಏನನ್ನೂ ಮಾಡಲಿಲ್ಲ: ಪಾಕ್ ಪ್ರಧಾನಿ ಇಮ್ರಾನ್ ಖಾನ್

 ಇಸ್ಲಮಾಬಾದ್, ಮಾ.22: 9/11ರ ಭಯೋತ್ಪಾದಕ ದಾಳಿಯ ಬಳಿಕ ಇಸ್ಲಾಮೋಫೋಬಿಯಾ ಬೆಳೆಯಿತು ಮತ್ತು ಅನಿಯಂತ್ರಿತವಾಗಿ ಹೋಯಿತು. ಇಸ್ಲಾಂ ಧರ್ಮವನ್ನು ಭಯೋತ್ಪಾದನೆಯೊಂದಿಗೆ ಸಮೀಕರಿಸಿದ ತಪ್ಪು ನಿರೂಪಣೆಯನ್ನು ಪರಿಶೀಲಿಸಲು ಮುಸ್ಲಿಂ ರಾಷ್ಟ್ರಗಳು ಏನನ್ನೂ ಮಾಡಲಿಲ್ಲ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಮಂಗಳವಾರ ಹೇಳಿದ್ದಾರೆ.

ಇಸ್ಲಾಮಾಬಾದಿನಲ್ಲಿ ನಡೆದ ಇಸ್ಲಾಮಿಕ್ ಸಹಕಾರ ಸಂಘಟನೆ(ಒಐಸಿ)ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇಸ್ಲಾಂ ವಿಧಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ ಮತ್ತು ನಂಬಿಕೆಗೆ ಭಯೋತ್ಪಾದನೆಯೊಂದಿಗೆ ಸಂಬಂಧವಿಲ್ಲ ಎಂದರು.

 ನನ್ನ ಜೀವನದ ಬಹಳಷ್ಟು ಅವಧಿಯನ್ನು ಇಂಗ್ಲೆಂಡಿನಲ್ಲಿ ಕಳೆದಿದ್ದೇನೆ. ಓರ್ವ ಅಂತರಾಷ್ಟ್ರೀಯ ಕ್ರೀಡಾಳುವಾಗಿ ಜಗತ್ತಿನಾದ್ಯಂತ ಪ್ರಯಾಣ ಮಾಡಿದ್ದೇನೆ. ಪಾಶ್ಚಿಮಾತ್ಯ ನಾಗರಿಕತೆಯನ್ನು ಬಹುತೇಕ ಜನರಿಗಿಂತ ಚೆನ್ನಾಗಿ ಅರ್ಥಮಾಡಿಕೊಂಡಿದ್ದೇನೆ. 9/11ರ ಬಳಿಕ ಇಸ್ಲಾಮೊಫೋಬಿಯಾ ಬೆಳೆಯುತ್ತಿರುವುದನ್ನು ಕಂಡಿದ್ದೇನೆ. ಈ ತಪ್ಪು ನಿರೂಪಣೆಯನ್ನು ತಡೆಯಲು ಮುಸ್ಲಿಂ ದೇಶಗಳು ಏನೂ ಕ್ರಮ ಕೈಗೊಳ್ಳದ ಕಾರಣ ಇದು ಬೆಳೆದಿದೆ ಎಂದು ಹೇಳಲು ವಿಷಾದವಾಗುತ್ತದೆ. ಯಾವುದೇ ಧರ್ಮಕ್ಕೂ ಭಯೋತ್ಪಾದನೆಗೂ ಸಂಬಂಧ ಇರಲು ಹೇಗೆ ಸಾಧ್ಯ? ಇಸ್ಲಾಂ ಅನ್ನು ಭಯೋತ್ಪಾದನೆಯೊಂದಿಗೆ ಹೇಗೆ ಸಮೀಕರಿಸಲಾಯಿತು? ಮತ್ತು ಸಮೀಕರಿಸಿದ ಮೇಲೆ ಸೌಮ್ಯವಾದಿಗಳು ಹಾಗೂ ತೀವ್ರವಾದಿ ಮುಸ್ಲಿಮರ ನಡುವಿನ ವ್ಯತ್ಯಾಸವನ್ನು ಅವರು(ಪಾಶ್ಚಿಮಾತ್ಯರು) ಹೇಗೆ ಅರ್ಥ ಮಾಡಿಕೊಳ್ಳುತ್ತಾರೆ? ಆದ್ದರಿಂದಲೇ ಈ ವ್ಯಕ್ತಿ ಸೀದಾ ಮಸೀದಿಗೆ ನುಗ್ಗಿ ಎಲ್ಲರ ಮೇಲೂ ಗುಂಡು ಹಾರಿಸುತ್ತಾನೆ ಎಂದು 2019ರಲ್ಲಿ ನ್ಯೂಝಿಲ್ಯಾಂಡ್‌ನ ಕ್ರೈಸ್ಟ್ ಚರ್ಚ್ ಮಸೀದಿಯಲ್ಲಿ ನಡೆದಿದ್ದ ಗುಂಡಿನ ದಾಳಿಯನ್ನು ಉಲ್ಲೇಖಿಸಿ ಇಮ್ರಾನ್ ಹೇಳಿದರು.

ದುರದೃಷ್ಟವಶಾತ್, ಏನು ನಡೆಯಬೇಕಿತ್ತೊ ಅದು ನಡೆಯಲಿಲ್ಲ. ಮುಸ್ಲಿಂ ದೇಶಗಳ ಮುಖ್ಯಸ್ಥರು ಈ ಬಗ್ಗೆ ಒಂದು ನಿಲುವು ತಳೆಯಬೇಕಿತ್ತು ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ಒಐಸಿಯ ವಿದೇಶ ವ್ಯವಹಾರ ಸಚಿವರ 48ನೇ ಅಧಿವೇಶನ ಮಂಗಳವಾರದಿಂದ ಇಸ್ಲಮಾಬಾದ್‌ನಲ್ಲಿ ಆರಂಭವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X