Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಲಿತ ದಿನೇಶ್ ನಾಯ್ಕ್ ಕೊಲೆ ಪ್ರಕರಣ;...

ದಲಿತ ದಿನೇಶ್ ನಾಯ್ಕ್ ಕೊಲೆ ಪ್ರಕರಣ; ಪರಿಹಾರ ಧನ ಹೆಚ್ಚಿಸಲು ಪುಷ್ಪಾ ಅಮರನಾಥ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 March 2022 10:55 PM IST
share

ಮಂಗಳೂರು : ಬೆಳ್ತಂಗಡಿ ತಾಲೂಕಿನ ಉಜಿರೆಯ ಕಾಂಗ್ರೆಸ್ ಕಾರ್ಯಕರ್ತ, ದಲಿತ ವ್ಯಕ್ತಿ ದಿನೇಶ್ ನಾಯ್ಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಕ್ಕೆ ಸರಕಾರ 8 ಲಕ್ಷ ರು. ಪರಿಹಾರ ನೀಡಲು ನಿರ್ಧರಿಸಿದೆ. ಇದು ತಾರತಮ್ಯದಿಂದ ಕೂಡಿದ್ದು, ಸರಕಾರ ಆ ಮೊತ್ತವನ್ನು 25 ಲಕ್ಷ ರೂ.ಗೆ ಏರಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಆಗ್ರಹಿಸಿದ್ದಾರೆ.

ದಿನೇಶ್ ನಾಯ್ಕ್‌ರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಅವರು ಬಳಿಕ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪರಿಹಾರ ಧನ ಏರಿಸದಿದ್ದರೆ ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ. ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷ ಕುಟುಂಬಕ್ಕೆ 25 ಲಕ್ಷ ರೂ.. ಪರಿಹಾರ ಘೋಷಿಸಲಾಗಿದೆ. ಆದರೆ ಉಜಿರೆಯ ದಿನೇಶ್ ಕುಟುಂಬಕ್ಕೆ ತಾರತಮ್ಯ ಮಾಡಿದ್ದಾರೆ. ಸಾವಿನಲ್ಲೂ ತಾರತಮ್ಯವಿದೆಯಾ? ದಲಿತರ ಸಾವು ಸಾವಲ್ವಾ?ಎಂದು ಪ್ರಶ್ನಿಸಿದರಲ್ಲದೆ ಬಿಜೆಪಿ ಸರಕಾರ ದಲಿತ ವಿರೋಧಿ ನಡೆ ತೋರಿಸುತ್ತಿದೆ ಎಂದು ಆರೋಪಿಸಿದರು.

ದಿನೇಶ್‌ರ ಪತ್ನಿ, ತಾಯಿ, ಇಬ್ಬರು ಮಕ್ಕಳ ಭವಿಷ್ಯ ಅತಂತ್ರವಾಗಿದೆ. ಬಿಜೆಪಿ ಹಾಗೂ ಆರ್‌ಟಿಐ ಕಾರ್ಯಕರ್ತನಾಗಿದ್ದ ವಿನಾಯಕ ಬಾಳಿಗ ಕೊಲೆ ನಡೆದು 6 ವರ್ಷ ಕಳೆದರೂ ಕೂಡ ಅವರ ಕುಟುಂಬಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ. 70 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಈ ದೇಶಕ್ಕೆ ಏನೂ ಮಾಡಿಲ್ಲ ಎನ್ನುವ ಬಿಜೆಪಿ ಬಾಳಿಗ ಕೊಲೆ ನಡೆದು 6 ವರ್ಷವಾದರೂ ಅವರ ಕುಟುಂಬಕ್ಕೆ ಯಾಕೆ ನ್ಯಾಯ ಕೊಡಿಸಿಲ್ಲ? ಈವರೆಗೆ ಯಾವ ಬಿಜೆಪಿ ಮುಖಂಡರೂ ಬಾಳಿಗ ಮನೆಗೆ ಯಾಕೆ ಹೋಗಿಲ್ಲ? ಈ ಪ್ರಕರಣವನ್ನು ಕೂಡಲೇ ಎಸ್‌ಐಟಿಗೆ ವಹಿಸಬೇಕು ಎಂದು ಆಗ್ರಹಿಸಿದರು.

ಮಂಗಳೂರು ಫೈಲ್ಸ್ ನೋಡಿ: ಬಿಜೆಪಿ ಮುಖಂಡರು ಈಗ ‘ಕಾಶ್ಮೀರ್ ಫೈಲ್ಸ್’ ನೋಡುತ್ತಿದ್ದಾರೆ. ದಿನೇಶ್ ನಾಯ್ಕ್, ವಿನಾಯಕ ಬಾಳಿಗರಂಥ ಕೊಲೆಗಳು ನಡೆದ ‘ಮಂಗಳೂರು ಫೈಲ್ಸ್’ ನೋಡಲಿ. ಮಂಗಳೂರು ಫೈಲ್ಸ್‌ನ್ನು ವೀಕ್ಷಣೆ ಮಾಡಿದರೆ ಕರಾಳ ದರ್ಶನವಾಗಲಿದೆ ಎಂದು ಪುಷ್ಪಾ ಅಮರನಾಥ್ ಹೇಳಿದರು.

ಮಹಿಳೆಯರಿಗೆ ಟಿಕೆಟ್ ಕೇಳ್ತೀವಿ: ಉತ್ತರ ಪ್ರದೇಶ ಚುನಾವಣೆಯಲ್ಲಿ ಶೇ.40ರಷ್ಟು ಮಹಿಳೆಯರಿಗೆ ಸ್ಪರ್ಧೆಗೆ ಅವಕಾಶ ನೀಡಿ ಪ್ರಿಯಾಂಕಾ ಗಾಂಧಿ ಆದರ್ಶ ಮೆರೆದಿದ್ದಾರೆ. ರಾಜ್ಯದಲ್ಲೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿ ಮಹಿಳಾ ಮೀಸಲಾತಿ ಕೇಳುತ್ತೇವೆ. ಗೆಲ್ಲುವ ಅವಕಾಶ ಇರುವ ಮಹಿಳೆಯರಿಗೆ ಟಿಕೆಟ್ ಕೊಡಿ ಎಂದು ಕೇಳಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕಿಯರಾದ ಅಪ್ಪಿ, ಚಂದ್ರಕಲಾ, ಶೈಲಜಾ ಅಮರನಾಥ್, ಚಂದ್ರಿಕಾ ಸುರೇಶ್, ನಮಿತಾ, ಮಂದರಾ, ಶಶಿಕಲಾ, ಮಂಜುಳಾ ನಾಯಕ್, ಚಂದ್ರಿಕಾ ರೈ, ಸುರೇಖಾ ಚಂದ್ರಹಾಸ್ ಉಪಸ್ಥಿತರಿದ್ದರು.

‘ನಾನು ಹೆಣ್ಣು ಹೋರಾಡಬಲ್ಲೆ’ ವೀಡಿಯೋ ಸ್ಪರ್ಧೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನಿಂದ ಮಹಿಳೆಯರ ಸಾಧನೆಯನ್ನು ಗುರುತಿಸುವ ದೃಷ್ಟಿಯಿಂದ ವೀಡಿಯೊ ಸ್ಪರ್ಧೆ ಆಯೋಜಿಸಲಾಗಿದ್ದು, ಮಹಿಳೆಯರು ತಮ್ಮ ಸಾಧನೆಯ ಹಾದಿಯ ಕುರಿತು 3 ನಿಮಿಷಗಳ ವೀಡಿಯೊ ಮಾಡಿ ಕಳುಹಿಸಬೇಕು. ಮಾ.8ರಂದು ಸ್ಪರ್ಧೆ ಆರಂಭಗೊಂಡಿದ್ದು, ಎ.8ರಂದು ಕೊನೇ ದಿನಾಂಕವಾಗಿದೆ. ಎ.14ರಂದು ರಾಜ್ಯಮಟ್ಟದ ವಿಜೇತರನ್ನು ಘೋಷಿಸಲಾಗುವುದು. ನಂತರ ರಾಷ್ಟ್ರ ಮಟ್ಟದ ಸ್ಪರ್ಧೆಯಿದೆ. 18 ವರ್ಷದೊಳಗಿನ ಹಾಗೂ 18 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ಪುಷ್ಪಾ ಅಮರನಾಥ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X