Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚೆಕ್ ಬೌನ್ಸ್ ಪ್ರಕರಣದಲ್ಲಿ ಮಧ್ಯಂತರ...

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಧ್ಯಂತರ ಪರಿಹಾರ ಪಾವತಿ ಕಡ್ಡಾಯವಲ್ಲ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ23 March 2022 6:33 PM IST
share
ಚೆಕ್ ಬೌನ್ಸ್ ಪ್ರಕರಣದಲ್ಲಿ ಮಧ್ಯಂತರ ಪರಿಹಾರ ಪಾವತಿ ಕಡ್ಡಾಯವಲ್ಲ: ಹೈಕೋರ್ಟ್

ಬೆಂಗಳೂರು, ಮಾ.23: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಮಧ್ಯಂತರ ಪರಿಹಾರ ಪಾವತಿಗೆ ಆದೇಶಿಸುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. 

ಚೆಕ್ ಬೌನ್ಸ್ ಪ್ರಕರಣದಲ್ಲಿ ಸಾಲ ಪಡೆದ ಮೊತ್ತದ ಪೈಕಿ ಶೇ.20ರಷ್ಟು ಹಣವನ್ನು ಮಧ್ಯಂತರ ಪರಿಹಾರವಾಗಿ ಪಾವತಿಸಲು ತಮಗೆ ಸೂಚಿಸಿ ಯಲಬುರ್ಗಾ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಕೊಪ್ಪಳದ ಕುಷ್ಟಗಿ ನಿವಾಸಿ ವಿಜಯಾ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ಹೈಕೋರ್ಟ್ ತನ್ನ ತೀರ್ಪಿನಲ್ಲಿ ಚೆಕ್ ಬೌನ್ಸ್ ಪ್ರಕರಣದಲ್ಲಿ ದೂರುದಾರರಿಗೆ(ಸಾಲ ನೀಡಿದವರು) ಮಧ್ಯಂತರ ಪರಿಹಾರ ಪಾವತಿಸುವಂತೆ ಆರೋಪಿಗೆ(ಸಾಲ ಪಡೆದವರು) ಆದೇಶಿಸುವ ವಿವೇಚನಾಧಿಕಾರವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಹೊಂದಿದೆ. ಆದರೆ, ಮಧ್ಯಂತರ ಪರಿಹಾರ ಪಾವತಿಗೆ ಆದೇಶಿಸುವುದು ಕಡ್ಡಾಯವೇನಲ್ಲ. ಒಂದೊಮ್ಮೆ ಮಧ್ಯಂತರ ಪರಿಹಾರ ಪಾವತಿಗೆ ಆದೇಶಿಸಲು ಮುಂದಾದರೆ, ಅದಕ್ಕೆ ಸೂಕ್ತ ಕಾರಣಗಳನ್ನು ಆದೇಶದಲ್ಲಿ ಉಲ್ಲೇಖಿಸಬೇಕಾಗುತ್ತದೆ ಎಂದು ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ.

ಪ್ರಕರಣದಲ್ಲಿ ಆರೋಪಿ ತಾನು ದೋಷಿ ಎಂದು ಒಪ್ಪಿಕೊಂಡಿಲ್ಲ. ಮತ್ತೊಂದೆಡೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ಆರೋಪಿಯನ್ನು ಸಾಲ ಮರು ಪಾವತಿಗೆ ಹೊಣೆಗಾರರನ್ನಾಗಿ ಮಾಡಿಲ್ಲ. ಹೀಗಿದ್ದೂ ದೂರುದಾರ ಶೇಖರಪ್ಪ ಅವರಿಂದ ಪಡೆದ ಎರಡು ಕೋಟಿ ರೂ. ಸಾಲದಲ್ಲಿ ಶೇ.20ರಷ್ಟು ಹಣವನ್ನು ಮಧ್ಯಂತರ ಪರಿಹಾರವಾಗಿ ಪಾವತಿ ಮಾಡಬೇಕು ಎಂದು ಆರೋಪಿತರಿಗೆ ಜೆಎಂಎಫ್‍ಸಿ ಕೋರ್ಟ್ ಆದೇಶಿಸಲು ಸಕಾರಣಗಳನ್ನು ಉಲ್ಲೇಖಿಸಿಲ್ಲ. ಹೀಗಾಗಿ, ಈ ಆದೇಶ ನ್ಯಾಯಸಮ್ಮತವಾಗಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಪ್ರಕರಣವೇನು: 2020ರ ಡಿಸೆಂಬರ್‍ನಲ್ಲಿ ವ್ಯಾಪಾರ ನಿಮಿತ್ತ ವಿಜಯಾ ಎಂಬುವರು ಶೇಖರಪ್ಪ ಎಂಬುವರಿಂದ ಎರಡು ಕೋಟಿ ರೂಪಾಯಿ ನಗದನ್ನು ಸಾಲವಾಗಿ ಪಡೆದಿದ್ದು, ಭದ್ರತಾ ಖಾತರಿಯಾಗಿ ಎರಡು ಚೆಕ್ ನೀಡಿದ್ದರು ಎನ್ನಲಾಗಿದೆ. ಆದರೆ, ನಿಗದಿತ ಅವಧಿಯಲ್ಲಿ ಹಣ ನೀಡದಿದ್ದಾಗ ಶೇಖರಪ್ಪ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಯಲಬುರ್ಗಾ ಜೆಎಂಎಫ್‍ಸಿ ನ್ಯಾಯಾಲಯವು 2021ರ ಜೂ.1ರಂದು ಸಾಲದ ಹಣದ ಪೈಕಿ ಶೇ.20ರಷ್ಟು ಅಂದರೆ 40ಲಕ್ಷ ರೂ.ಗಳನ್ನು ಮಧ್ಯಂತರ ಪರಿಹಾರವಾಗಿ ಪಾವತಿಸಲು ವಿಜಯಾ ಎಂಬುವರಿಗೆ ಆದೇಶಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X