Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರ್ನಾಟಕದ ಹಳೆಯ ಸಿನೆಮಾಗಳ ಡಿಜಿಟಲೀಕರಣ;...

ಕರ್ನಾಟಕದ ಹಳೆಯ ಸಿನೆಮಾಗಳ ಡಿಜಿಟಲೀಕರಣ; ಸರಕಾರಕ್ಕೆ ಅನುದಾನಕ್ಕೆ ಪ್ರಸ್ತಾವ: ಅಶೋಕ್ ಕಶ್ಯಪ್

ವಾರ್ತಾಭಾರತಿವಾರ್ತಾಭಾರತಿ23 March 2022 7:16 PM IST
share
ಕರ್ನಾಟಕದ ಹಳೆಯ ಸಿನೆಮಾಗಳ ಡಿಜಿಟಲೀಕರಣ; ಸರಕಾರಕ್ಕೆ ಅನುದಾನಕ್ಕೆ ಪ್ರಸ್ತಾವ: ಅಶೋಕ್ ಕಶ್ಯಪ್

ಉಡುಪಿ : ಪೂನಾದಲ್ಲಿರುವ ನ್ಯಾಶನಲ್ ಫಿಲ್ಮ್ ಆರ್ಕೈವ್ ಆಫ್ ಇಂಡಿಯಾ ಮಾದರಿಯಲ್ಲಿ ಕರ್ನಾಟಕದ ಎಲ್ಲ ಹಳೆಯ ಸಿನೆಮಾಗಳನ್ನು ಡಿಜಿಟಲೀಕರಣ ಮಾಡಿ ಸಂಗ್ರಹಿಸಿ ಇಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದ್ದು, ಅದಕ್ಕಾಗಿ ರಾಜ್ಯ ಸರಕಾರದಕ್ಕೆ ಎಂಟು ಕೋಟಿ ರೂ. ಪ್ರಸ್ತಾವ ಕಳುಹಿಸಲಾಗಿದೆ ಎಂದು ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯ ಹಾಗೂ ಚಲನಚಿತ್ರ ನಿರ್ದೇಶಕ ಅಶೋಕ್ ಕಶ್ಯಪ್ ತಿಳಿಸಿದ್ದಾರೆ.

ಮಣಿಪಾಲದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಕಾಡೆಮಿಯ ತಂಡವೊಂದು ಪೂನಾಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಅಧ್ಯಯನ ಮಾಡಿ ಬಂದಿದೆ. ಕರ್ನಾಟಕದ ಮೂಕಿ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ, ಪ್ರಾದೇಶಿಕ ಸೇರಿದಂತೆ ಎಲ್ಲ ಹಳೆಯ ಸಿನೆಮಾಗಳನ್ನು ಒಂದೇ ಕಡೆಗಳಲ್ಲಿ ಸುರಕ್ಷಿತವಾಗಿ ಕಾಪಾಡುವ ನಿಟ್ಟಿನಲ್ಲಿ ಸ್ಕ್ಯಾನರ್, ಕೋಲ್ಡ್ ವೊಲ್ಟ್, ಡಿಜಿಟೈಸ್, ಕಲರೈಸ್ ಯಂತ್ರಗಳನ್ನು ಖರೀದಿಸಬೇಕಾಗಿದೆ. ಮೊದಲ ಆದ್ಯತೆ ಯಲ್ಲಿ ಈ ಕಾರ್ಯವನ್ನು ಮಾಡಲಾಗುವುದು ಮುಂದಿನ ಜನಾಂಗ ಸಿನೆಮಾ ಕುರಿತು ಅಧ್ಯಯನ ನಡೆಸಲು ಬಹಳಷ್ಟು ಅನುಕೂಲವಾಗುತ್ತದೆ ಎಂದರು.

ವಿಫುಲ ಉದ್ಯೋಗವಕಾಶ

ಭಾರತದ ಚಲನಚಿತ್ರ ಉದ್ಯಮದಲ್ಲಿ ವಿಫುಲ ಉದ್ಯೋಗವಕಾಶಗಳಿದ್ದು, ಪ್ರತಿ ವರ್ಷ ೧೦೦೦೦ರಿಂದ ೨೦೦೦೦ದ ವರೆಗೆ ಚಲನಚಿತ್ರ ಕ್ಷೇತ್ರದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳ ಅವಶ್ಯಕತೆ ಇದೆ. ಆದುದರಿಂದ ಚಲನಚಿತ್ರಕ್ಕೆ ಸಂಬಂಧಿಸಿ ಹೆಚ್ಚು ಹೆಚ್ಚು ಸಂಸ್ಥೆಗಳು ಸ್ಥಾಪನೆಯಾಗಬೇಕಾಗಿವೆ ಎಂದು ಅಶೋಕ್ ಕಶ್ಯಪ್ ಹೇಳಿದರು.

ಹಾಲಿವುಡ್ ಸಿನೆಮಾಗಳ ವಿಎಫ್‌ಎಕ್ಸ್, ಆ್ಯನಿಮೆಟೆಡ್, ಸಿನೆಮಾ ಗ್ರಾಫಿಕ್ಸ್, ಫೋಟೋ ರಿಯಲಿಸ್ಟಿಕ್ಸ್‌ಗಳನ್ನು ಭಾರತದಲ್ಲಿ ಮಾಡಲಾಗುತ್ತದೆ. ಆದುದರಿಂದ ಇದರಲ್ಲಿ ಪರಿಣಿತರಿಗೆ ಹೆಚ್ಚಿನ ಬೇಡಿಕೆಗಳು ಕೂಡ ಇವೆ. ಇದಕ್ಕೆ ಬೇಕಾದ ಮಾನವ ಸಂಪನ್ಮೂಲಗಳನ್ನು ನೂರಾರು ವಿವಿ ಸ್ಥಾಪಿಸಿದರೂ ನೀಡಲು ಸಾಧ್ಯ ವಿಲ್ಲ.  ಈ ಸಂಬಂಧ ಬೆಂಗಳೂರಿನಲ್ಲಿರುವ ಮೂರು ಕಂಪೆನಿಯಲ್ಲಿ  ೧೦೦೦೦ ಕೆಲಸ ಮಾಡುತ್ತಿದ್ದಾರೆ. ಆ ನಿಟ್ಟಿನಲ್ಲಿ ಫಿಲ್ಮ್ ಸ್ಕೂಲ್‌ಗಳು, ಸಿನೆಮಾಗೆ ಸಂಬಂಧಿ  ಇನ್‌ಸ್ಟಿಟ್ಯೂಟ್‌ಗಳು ಬರಬೇಕಾಗಿವೆ ಎಂದರು.

ಮೈಸೂರಿನಲ್ಲಿ ಫಿಲ್ಮ್ ಸಿಟಿ

ಮೈಸೂರಿನಲ್ಲಿ ಸಿನಿ ವಿಶ್ವವಿದ್ಯಾಲಯವನ್ನು ಒಳಗೊಂಡ ಪಿಲ್ಮ್ ಸಿಟಿ ಸ್ಥಾಪಿಸುವ ಯೋಜನೆ ನಮ್ಮ ಮುಂದೆ ಇದೆ. ಸಿನೆಮಾಗಳಿಗೆ ಸಂಬಂಧಿಸಿದ ವರ್ಕ್ ಲೋಡ್ ನಮ್ಮಲ್ಲಿ ಜಾಸ್ತಿ ಆಗುತ್ತಿದೆ. ಹೊಸ ರಾಜ್ಯ ಮಾತ್ರವಲ್ಲ ಹೊರ ದೇಶಗಳಿಂದ ಕೆಲಸ ಗಳು ಬರುತ್ತಿವೆ. ಅದಕ್ಕಾಗಿ ನಮಗೆ ವಿವಿಯ ಅಗತ್ಯವಿದೆ. ಕಲಿಯಲು ಸಾಕಷ್ಟು ಮಂದಿ ಆಸಕ್ತರು ಇದ್ದಾರೆ. ಈ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.  

ಸರಕಾರದಿಂದ ಕನ್ನಡದಲ್ಲೂ ಕೂಡ ಓಟಿಟಿ ಆರಂಭಿಸುವ ಅಗತ್ಯವಿದೆ. ಚಲನ ಚಿತ್ರ ಇಂಡಸ್ಟ್ರಿಯ ಪರಿಣಿತರು ಈ ಬಗ್ಗೆ ಸರಕಾರದ ಜೊತೆ ಮಾತುಕತೆ ನಡೆಸ ಬೇಕು. ಓಟಿಟಿ ಮೂಲಕ ಆದಾಯ, ಮನರಂಜನೆ, ಶಿಕ್ಷಣವನ್ನು ಕೊಡಲು ಸಾಧ್ಯವಾಗುತ್ತದೆ. ಅಕಾಡೆಮಿ ಕೂಡ ಈ ಕುರಿತು ಮುಂದಿನ ದಿನಗಳಲ್ಲಿ ಚಿಂತನೆ ಮಾಡಲಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X