Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ ಸೆಂಟ್ರಲ್ ಬ್ಯಾಂಕ್ ಗವರ್ನರ್...

ರಶ್ಯ ಸೆಂಟ್ರಲ್ ಬ್ಯಾಂಕ್ ಗವರ್ನರ್ ರಾಜೀನಾಮೆ ಪ್ರಸ್ತಾವಕ್ಕೆ ಪುಟಿನ್ ನಕಾರ

ವಾರ್ತಾಭಾರತಿವಾರ್ತಾಭಾರತಿ24 March 2022 9:07 PM IST
share
ರಶ್ಯ ಸೆಂಟ್ರಲ್ ಬ್ಯಾಂಕ್ ಗವರ್ನರ್ ರಾಜೀನಾಮೆ ಪ್ರಸ್ತಾವಕ್ಕೆ ಪುಟಿನ್ ನಕಾರ

ಮಾಸ್ಕೊ, ಮಾ.24: ಉಕ್ರೇನ್ ಮೇಲೆ ಆಕ್ರಮಣ ನಡೆಸುವಂತೆ ರಶ್ಯ ಅಧ್ಯಕ್ಷ ಪುಟಿನ್ ಆದೇಶಿಸಿದ ಬಳಿಕ ಅಲ್ಲಿನ ಸೆಂಟ್ರಲ್ ಬ್ಯಾಂಕ್ ಗವರ್ನರ್ ಪದತ್ಯಾಗದ ಪ್ರಸ್ತಾವ ಮುಂದಿರಿಸಿದ್ದರು. ಆದರೆ ಅದನ್ನು ಪುಟಿನ್ ತಿರಸ್ಕರಿಸಿದ್ದರು ಎಂದು ಮೂಲಗಳು ಹೇಳಿವೆ.

ಸೆಂಟ್ರಲ್ ಬ್ಯಾಂಕ್ ಗವರ್ನರ್ ಎಲ್ವಿರಾ ನಬ್ಯುಲಿನಾ ಅವರನ್ನು ಕಳೆದ ವಾರ ಮತ್ತೊಂದು ಅವಧಿಗೆ(5 ವರ್ಷ ಅವಧಿ) ಹುದ್ದೆಯಲ್ಲಿ ಮುಂದುವರಿಸಿ ಪುಟಿನ್ ಆದೇಶ ಜಾರಿಗೊಳಿಸಿದ್ದಾರೆ. ಯುದ್ಧದ ಹಿನ್ನೆಲೆಯಲ್ಲಿ ರಶ್ಯದ ವಿರುದ್ಧ ಜಾರಿಗೊಂಡಿರುವ ನಿರ್ಬಂಧದಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ಸೂಕ್ತವಾಗಿ ನಿರ್ವಹಿಸುವ ಹೆಚ್ಚುವರಿ ಜವಾಬ್ದಾರಿ ಈಗ ನಬ್ಯುಲಿನಾ ಮೇಲಿದೆ. 9 ವರ್ಷದಿಂದ ಗವರ್ನರ್ ಹುದ್ದೆಯಲ್ಲಿರುವ ಅವರು ಈ ಸೂಕ್ಷ್ಮ ಪರಿಸ್ಥಿತಿಯಲ್ಲಿ ನಿರ್ಗಮಿಸುವುದು ದ್ರೋಹ ಬಗೆದಂತಾಗುತ್ತದೆ ಎಂದು ಸರಕಾರದ ಕೆಲವು ಅಧಿಕಾರಿಗಳು ಪ್ರತಿಕ್ರಿಯಿಸಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

 ದೀರ್ಘಾವಧಿಯಿಂದ ರಶ್ಯದ ಪ್ರಮುಖ ಆರ್ಥಿಕ ಸುಧಾರಕರಾಗಿ ಪುಟಿನ್ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಅನಾಟೊಲಿ ಚುಬಾಯಸ್ ಕಳೆದ ವಾರ ಉಕ್ರೇನ್ ಮೇಲಿನ ರಶ್ಯದ ಆಕ್ರಮಣವನ್ನು ಖಂಡಿಸಿ ಹುದ್ದೆಗೆ ರಾಜೀನಾಮೆ ನೀಡಿ ದೇಶ ತೊರೆದು ಹೋಗಿದ್ದಾರೆ. ಈ ಮಧ್ಯೆ ಬ್ಯಾಂಕ್ ಬಡ್ಡಿದರವನ್ನು ದುಪ್ಪಟ್ಟಿಗೂ ಹೆಚ್ಚಿನ ಮಟ್ಟಕ್ಕೆ ಏರಿಸಿರುವ ಸೆಂಟ್ರಲ್ ಬ್ಯಾಂಕ್, ಬಂಡವಾಳ ಹಿಂದೆಗೆತದ ಮೇಲೆ ನಿಷೇಧ ಹೇರುವ ಮೂಲಕ ಅರ್ಥವ್ಯವಸ್ಥೆಯ ಮೇಲಿನ ಆಘಾತವನ್ನು ಕಡಿಮೆಗೊಳಿಸಲು ಪ್ರಯತ್ನಿಸಿದೆ. ಅಮೆರಿಕ, ಯುರೋಪಿಯನ್ ಯೂನಿಯನ್ ಸಹಿತ ಅಂತರಾಷ್ಟ್ರೀಯ ನಿರ್ಬಂಧದಿಂದಾಗಿ ರಶ್ಯದ ಕರೆನ್ಸಿ ರೂಬಲ್ಸ್ ತೀವ್ರ ಅಪಮೌಲ್ಯಗೊಂಡಿದೆ. ಸದ್ಯದ ಮಟ್ಟಿಗೆ ಜನತೆ ಆಘಾತದ ಸರಮಾಲೆಗೆ ಸಿದ್ಧರಾಗಬೇಕಿದೆ ಎಂದು ರಶ್ಯ ಸೆಂಟ್ರಲ್ ಬ್ಯಾಂಕ್ ಮಾಜಿ ಅಧಿಕಾರಿ ಒಲೆಗ್ ವ್ಯೆಜಿನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X