Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ವ್ಯಾಪಾರಕ್ಕೆ ಅಡ್ಡಿ;...

ಬೆಂಗಳೂರು: ವ್ಯಾಪಾರಕ್ಕೆ ಅಡ್ಡಿ; ಕೋಮುವಾದಿ ವಿಭಜನೆಯನ್ನು ತಿರಸ್ಕರಿಸುವಂತೆ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಕರೆ

ವಾರ್ತಾಭಾರತಿವಾರ್ತಾಭಾರತಿ25 March 2022 8:19 PM IST
share

ಬೆಂಗಳೂರು, ಮಾ.25: ಬೀದಿ ವ್ಯಾಪಾರಿಗಳ ನೆಪವೊಡ್ಡಿ ಕೋಮುವಾದಿ ವಿಷಬೀಜವನ್ನು ಬಿತ್ತಲು ಹೊರಟಿರುವ ಮತ್ತು ಸಮಾಜದ ವಿಭಜನೆಯನ್ನು ಮಾಡುವ ಎಲ್ಲಾ ಪ್ರಯತ್ನಗಳ ವಿರುದ್ಧ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘಟನೆ ಮತ್ತು ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟವು ಪ್ರತಿರೋಧವನ್ನು ವ್ಯಕ್ತಪಡಿಸುತ್ತದೆ. ಸಂಘ ಪರಿವಾರದ ದ್ವೇಷ ಹರಡುವ ಮತ್ತು ಕೋಮುವಾದ ಹಬ್ಬುವ ಎಲ್ಲಾ ಪ್ರಯತ್ನಗಳನ್ನು ತಿರಸ್ಕರಿಸುತ್ತೇವೆ ಎಂದು ಒಕ್ಕೂಟವು ಪ್ರಕಟನೆ ಹೊರಡಿಸಿದೆ.

ಕರ್ನಾಟಕ ಸರಕಾರದ ಮುಜರಾಯಿ ಇಲಾಖೆಯ ಅಡಿಯಲ್ಲಿರುವ ದೇವಸ್ಥಾನಗಳು ಆಯೋಜಿಸುವ ಜಾತ್ರೆ, ವಾರ್ಷಿಕೋತ್ಸವ ಮತ್ತು ಧಾರ್ಮಿಕ ಹಬ್ಬಗಳ ಸಮಯದಲ್ಲಿ ಹಿಂದುಯೇತರ ಸಮುದಾಯದ ವ್ಯಾಪಾರಿಗಳು ಅಂಗಡಿಗಳನ್ನು ಇಡದಂತೆ ಕಡಿವಾಣ ಹಾಕಬೇಕು ಎಂದು ವಿಶ್ವ ಹಿಂದೂ ಪರಿಷತ್ ಸಂಘದವರು ಹಲವಾರು ದೇವಸ್ಥಾನ ಆಡಳಿತ ಸಮಿತಿಗಳ ಮೇಲೆ ಒತ್ತಡವನ್ನು ಹೇರುತ್ತಿರುವುದು ಖಂಡನಾರ್ಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಬಿಜೆಪಿ ರಾಜ್ಯ ಸರಕಾರದ ಮಂತ್ರಿಗಳು ವ್ಯಾಪಾರ ನಿರ್ಬಂಧದ ಕುರಿತು ಹಲವಾರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಂಘ ಪರಿವಾರದ ಈ ಕೋಮುವಾದಿ ಬೇಡಿಕೆಗೆ ರಾಜ್ಯ ಸರಕಾರದ ಸಹಭಾಗಿತ್ವ ಇರುವುದು ಎದ್ದು ಕಾಣುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ಬೀದಿ ವ್ಯಾಪಾರಿಗಳ ಜೀವನೋಪಾಯದ ರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ-2014ರನ್ನು ಸಂಪೂರ್ಣವಾಗಿ ಜಾರಿಗೊಳಿಸುವಲ್ಲಿ ಮತ್ತು ಬೀದಿ ವ್ಯಾಪಾರಿಗಳ ಜೀವನೋಪಾಯವನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ತಿಳಿಸಿದೆ. 

ರಾಜ್ಯದಾದ್ಯಂತ ಬೀದಿ ವ್ಯಾಪಾರಿಗಳು ಸರಕಾರಿ ಅಧಿಕಾರಿಗಳಿಂದ ಮತ್ತು ಪೊಲೀಸರಿಂದ ದೈನಂದಿನ ಕಿರುಕುಳ, ಸುಲಿಗೆ, ಮತ್ತು ಹಿಂಸೆಯನ್ನು ಅನುಭವಿಸುತ್ತಾರೆ. ತಮ್ಮ ವ್ಯಾಪಾರದ ಸ್ಥಳದಿಂದ ಎತ್ತಂಗಡಿ ಆಗುವ ಬೆದರಿಕೆ ಮತ್ತು ತಮ್ಮ ಸರಕು-ಸಾಮಾನುಗಳಿಗೆ ಹಾನಿಯಾಗುವ ಭೀತಿಯಲ್ಲೇ ಜೀವನೋಪಾಯವನ್ನು ನಡೆಸುತ್ತಾರೆ. ಕೋವಿಡ್-19 ಸಾಂಕ್ರಾಮಿಕ ರೋಗವು ಬೀದಿ ವ್ಯಾಪಾರಿಗಳ ಜೀವನ ಮತ್ತು ಜೀವನೋಪಾಯವನ್ನು ಅಸ್ತವ್ಯಸ್ಥಗೊಳಿಸಿದ್ದು, ಅವರನ್ನು ತೀವ್ರತರ ಬಿಕ್ಕಟ್ಟಿನಲ್ಲಿ ಸಿಲುಕಿಸಿದೆ. ಈಗ ಈ ಬಲಪಂಥೀಯ ಸಂಘಟನೆಗಳು ಬೀದಿ ವ್ಯಾಪಾರಿಗಳನ್ನು ಮತ್ತು ಅವರ ಜೀವನೋಪಾಯವನ್ನು ಕೋಮುವಾದಿ ಧೋರಣೆಯ ಮೂಲಕ ಅತಂತ್ರಗೊಳಿಸುತ್ತಿದೆ ಎಂದು ಪ್ರಕಟನೆಯಲ್ಲಿ ಆರೋಪಿಸಲಾಗಿದೆ. 

ಕೆಲವು ತಿಂಗಳ ಹಿಂದೆ ಮಾತ್ರ ಈ ವಿವಾದವು ಉಧ್ಭವವಾಗಿದ್ದು, ಈಗ ಅದು ಸಂಪೂರ್ಣ ದಾಳಿಯಾಗಿ ಪರಿವರ್ತನೆಗೊಂಡಿದೆ. ಮಾರ್ಚ್ 2021ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ತಾಲೂಕಿನಲ್ಲಿ ಅಬ್ದುಲ್ ಹ್ಯಾರಿಸ್ ಎಂಬ ಮುಸಲ್ಮಾನ ಐಸ್ ಕ್ರೀಮ್ ವ್ಯಾಪಾರಿ ಒಬ್ಬರನ್ನು ಕೋಮುವಾದಿ ಗೂಂಡಾಗಳು ಥಳಿಸಿದರು. ಬೇರೆ ಧರ್ಮಕ್ಕೆ ಸೇರಿದ್ದ ಈ ಬೀದಿ ವ್ಯಾಪಾರಿಯು ದೇವಸ್ಥಾನದ ಆವರಣವನ್ನು ಅಪವಿತ್ರಗೊಳಿಸಿದರು ಎಂಬ ಸುಳ್ಳು ನೆಪವನ್ನು ಒಡ್ಡಿದ್ದರು. ಅಬ್ದುಲ್ ಹ್ಯಾರಿಸ್ ಅವರು ಅಂದು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ದರೋಡೆ ಮಾಡಿ, ಅವರ ಸಾಮಾನುಗಳನ್ನು ದ್ವಂಸ ಮಾಡಿದರು. ಹಾಗೆಯೇ, ಮುಸಲ್ಮಾನ ಸಮುದಾಯದ ಯಾವುದೇ ಬೀದಿ ವ್ಯಾಪಾರಿ ದೇವಸ್ಥಾನದ ಬಳಿ ಅಂಗಡಿಗಳನ್ನು ಹಾಕಬಾರದೆಂದು ಸಾಮೂಹಿಕ ಬೆದರಿಕೆಯನ್ನು ಒಡ್ಡಿದರು. ಮತ್ತೊಂದು ಘಟನೆಯಲ್ಲಿ, ಬೆಂಗಳೂರಿನ ವಿಜಯನಗರ ಮಾರುಕಟ್ಟೆಯಲ್ಲಿ ಕೋಮುವಾದಿ ಗೂಂಡಾಗಳು ಹಿಂದೂ ಮತ್ತು ಮುಸಲ್ಮಾನ ಬೀದಿ ವ್ಯಾಪಾರಿಗಳ ಅಂಗಡಿಗಳಿಗೆ ಭಾಗ್ವಾ ಕಟ್ಟಿ ಅಲ್ಲಿಯ ವ್ಯಾಪಾರಿಗಳ ಮಧ್ಯೆ ಕೋಮುವಾದಿ ಪ್ರೇರಿತ ಗಲಾಟೆಯನ್ನು ಎಬ್ಬಿಸಲು ಪ್ರಯತ್ನ ಪಟ್ಟರು. ವಿಜಯನಗರ ಮಾರುಕಟ್ಟೆಯ ಬೀದಿ ವ್ಯಾಪಾರಿಗಳು ಇದನ್ನು ತೀವ್ರವಾಗಿ ಪ್ರತಿರೋಧಿಸಿ, ಪೊಲೀಸರಲ್ಲಿ ದೂರು ನೀಡಿದರು. ಹಾಗೆಯೇ ಕಟ್ಟಿದ್ದ ಭಾಗ್ವಾಗಳನ್ನು ತೆಗೆದು ಹಾಕಿದರು ಎಂದು ಪ್ರಕಟನೆಯಲ್ಲಿ ಒಕ್ಕೂಟವು ನೆನಪಿಸಿಕೊಂಡಿದೆ.   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X