Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ...

ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರಥಮ ವೈದ್ಯಕೀಯ ಸ್ನಾತಕೋತ್ತರ ಪದವಿ ತರಗತಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ26 March 2022 12:02 PM IST
share
ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರಥಮ ವೈದ್ಯಕೀಯ ಸ್ನಾತಕೋತ್ತರ ಪದವಿ ತರಗತಿ ಉದ್ಘಾಟನೆ

ಕೊಣಾಜೆ: ಸ್ನಾತಕೋತ್ತರ ವಿದ್ಯಾರ್ಥಿಗಳು ಆಸ್ಪತ್ರೆಗಳ ಬೆನ್ನೆಲುಬು ಇದ್ದಂತೆ, ಯುದ್ಧದಲ್ಲಿ ಚಕ್ರವರ್ತಿಯ ಸ್ಥಾನದಂತೆ ಕೆಲಸ ಮಾಡಬೇಕಾದ ಅವರ ಹಿಂದೆ ಹಿರಿಯ, ಕಿರಿಯ ವೈದ್ಯ ಸಮೂಹವಿರುತ್ತದೆ. ರೋಗಿಗಳಲ್ಲಿರುವ ಸೋಂಕನ್ನು ಪತ್ತೆಹಚ್ಚುವ ಕುಶಲತೆಯನ್ನು ಬೆಳೆಸುವ ಜೊತೆಗೆ ಅವರ ಜೊತೆಗೆ ಹಾಗೂ ರೋಗಿಯ ಸಂಬಂಧಿಕರ ಜೊತೆಗೆ ಬಾಂಧವ್ಯ, ಸಹಾನುಭೂತಿ, ಸಂವಹನ, ಸಂಭಾಷಣೆ ಕೌಶಲ್ಯವನ್ನು ಬೆಳೆಸುವುದರಿಂದ ಬಹಳಷ್ಟು ಉಪಯೋಗವಿದೆ ಎಂದು ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಕೆ. ರಮೇಶ್ ಹೇಳಿದರು.

ಅವರು ಶುಕ್ರವಾರ ನಾಟೆಕಲ್ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ  ಪ್ರಥಮ ವೈದ್ಯಕೀಯ ಸ್ನಾತಕೋತ್ತರ ಪದವಿ ತರಗತಿಯನ್ನು ಉದ್ಘಾಟಿಸಿ  ಮಾತನಾಡಿದರು.

ಎಂಬಿಬಿಎಸ್ ಪದವಿಯ ಅವಧಿ ಕಡಿತ ಹಾಗೂ ಸ್ನಾತಕೋತ್ತರ ವಿಭಾಗವನ್ನು ಎಂಬಿಬಿಎಸ್ ಜೊತೆಗೆ ವಿಲೀನಗೊಳಿಸುವ ಪ್ರಸ್ತಾಪನೆಗಳಿದ್ದು, ಈ ಕುರಿತು  ಸಂಬಂಧಪಟ್ಟ ಇಲಾಖೆಗಳು ಹಾಗೂ ತಜ್ಞರ ಜೊತೆಗೆ ಚರ್ಚಿಸುವ ವೇದಿಕೆಯನ್ನು  ಮುಂದಿನ ದಿನಗಳಲ್ಲಿ ನಡೆಸುವ ಚಿಂತನೆಯನ್ನು  ನಡೆಸಲಿದೆ ಎಂದು ಹೇಳಿದರು.

ವೈದ್ಯ ತರಬೇತಿ ಅವಧಿಯಲ್ಲಿ ಗ್ರಾಮೀಣ ಭಾಗಗಳಲ್ಲಿ ಕಡ್ಡಾಯ ಸೇವೆ ನಡೆಸುವಂತೆ ಕೇಂದ್ರ ಸರಕಾರ ಕರಾರು ಪತ್ರದಲ್ಲಿ ಉಲ್ಲೇಖ ಮಾಡಿದ್ದು, ಅದನ್ನು ನ್ಯಾಯಾಲಯದಲ್ಲಿ ಇದೊಂದು ಬೇರೆ ಕ್ಷೇತ್ರಗಳಲ್ಲಿರದ ಗುಲಾಮಗಿರಿ ಎಂದು ಪ್ರಶ್ನಿಸಿದ ಹಿನ್ನೆಲೆಯಲ್ಲಿ  ಹಿಂಪಡೆಯಲಾಗಿತ್ತು. ಆದರೂ ಗ್ರಾಮೀಣ ಭಾಗಗಳಲ್ಲಿ ವೈದ್ಯರ ಕೊರತೆ ಇರುವುದನ್ನು ಮುಂದಿಟ್ಟು ಸರಕಾರ ಸ್ವ ಇಚ್ಛೆಯಿಂದ ಹೋಗಲು ಇಚ್ಛಿಸುವವರು ಸೇವೆ ನೀಡುವಂತೆ ಸೂಚಿಸಿತ್ತು. ಅದರ ಆಧಾರದಡಿ  ರಾಜೀವ್ ಗಾಂಧಿ ವಿ.ವಿ  ದೇಶದ ಉತ್ತರ ಭಾಗಗಳಲ್ಲಿ ವೈದ್ಯರ ಕೊರತೆ ಇರುವುದರಿಂದ  ಕರ್ನಾಟಕ ಸೇರಿದಂತೆ ದಕ್ಷಿಣ ಭಾಗದ  ವೈದ್ಯಕೀಯ ಸ್ನಾತಕೋತ್ತರ  ವಿದ್ಯಾರ್ಥಿಗಳನ್ನು ಆ ಭಾಗದ ಸಂಸ್ಕೃತಿಯನ್ನು ಅರಿಯುವುದರ ಜೊತೆಗೆ ಸೇವೆಯನ್ನು ನೀಡಲು ಕಳುಹಿಸಲು ಮಾರ್ಗಸೂಚಿಯನ್ನು ನೀಡಿದೆ ಎಂದರು.

ಕಣ್ಣೂರು ಹಾಗೂ ಕಲ್ಲಿಕೋಟೆ ವಿವಿಯ ವಿಶ್ರಾಂತ ಕುಲಪತಿ, ಕಣಚೂರು ಸಮೂಹ ಸಂಸ್ಥೆ ಸಲಹಾ ಸಮಿತಿ ಮುಖ್ಯಸ್ಥ  ಡಾ. ಅಬ್ದುಲ್ ರಹಿಮಾನ್ ಮಾತನಾಡಿ, ವೈದ್ಯಕೀಯ ಸ್ನಾತಕೋತ್ತರ ವಿಭಾಗದಲ್ಲಿ ಗುಣಮಟ್ಟದ ಶಿಕ್ಷಣವನ್ನು ಕಾಯ್ದುಕೊಳ್ಳಲು ಸಂಶೋಧನೆ ಸಹಕಾರಿ. ಈ ನಿಟ್ಟಿನಲ್ಲಿ  ಸಂಸ್ಥೆ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.

ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಂಡ್ ರಿಸರ್ಚ್ ಸೆಂಟರ್ ನ ಚೇರ್ ಮೆನ್ ಯು.ಕೆ. ಮೋನು,  ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ

ಸೆನೆಟ್ ಸದಸ್ಯ  ಡಾ. ಯು.ಟಿ. ಇಫ್ತಿಕರ್ ಅಲಿ,  ಕಣಚೂರು ನಿರ್ದೇಶಕ ಅಬ್ದುಲ್ ರಹಿಮಾನ್, ಝೌರಾ ಬಾನು, ಸಾಹಿದಾ ರಹಿಮಾನ್ , ವೈದ್ಯಕೀಯ ಅಧೀಕ್ಷಕ ಡಾ. ಹರೀಶ್ ಶೆಟ್ಟಿ , ಡಾ. ಕಿರಣ್ , ಮುಖ್ಯ ಆಡಳಿತಾಧಿಕಾರಿ ಡಾ. ರೋಹನ್ ಮೋನಿಸ್  ಉಪಸ್ಥಿತರಿದ್ದರು

ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಡೀನ್ ಡಾ. ಎಚ್. ಎಸ್. ವಿರೂಪಾಕ್ಷ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಮೆಡಿಸಿನ್ ವಿಭಾಗ ಮುಖ್ಯಸ್ಥ ಡಾ. ಬಿ. ದೇವದಾಸ್ ರೈ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X