Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಯುವಕರಿಗೆ ಕೇಸರಿ ಶಾಲು ಹಾಕಿ...

ರಾಜ್ಯದಲ್ಲಿ ಯುವಕರಿಗೆ ಕೇಸರಿ ಶಾಲು ಹಾಕಿ ಗಲಭೆ ಮಾಡಿಸುವುದನ್ನು ಬಿಟ್ಟು ಉದ್ಯೋಗ ಕೊಡಿ: ಪ್ರಿಯಾಂಕ್ ಖರ್ಗೆ

''ರಾಜ್ಯ ಬಿಜೆಪಿಯವರು ಯುಪಿ ಮಾಡಲು ಹೊರಟಿದ್ದಾರೆ''

ವಾರ್ತಾಭಾರತಿವಾರ್ತಾಭಾರತಿ26 March 2022 4:56 PM IST
share
ರಾಜ್ಯದಲ್ಲಿ ಯುವಕರಿಗೆ ಕೇಸರಿ ಶಾಲು ಹಾಕಿ ಗಲಭೆ ಮಾಡಿಸುವುದನ್ನು ಬಿಟ್ಟು ಉದ್ಯೋಗ ಕೊಡಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು, ಮಾ. 26: ‘ರಾಜ್ಯದಲ್ಲಿನ ಯುವಕರಿಗೆ ಕೇಸರಿ ಶಾಲು ಹಾಕಿ ಗಲಭೆ ಮಾಡಿಸುವುದನ್ನು ಬಿಟ್ಟು ಅವರಿಗೆ ಉದ್ಯೋಗ ಕೊಡಬೇಕು. ಬಿಜೆಪಿ ಅವಧಿಯಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದ್ದು, ಏಳು ವರ್ಷಗಳಲ್ಲಿ ಅತ್ಯಂತ ಹೆಚ್ಚು ನಿರುದ್ಯೋಗ ಸೃಷ್ಟಿಯಾಗಿದೆ. ತರಬೇತಿ ಮತ್ತು ಉದ್ಯೋಗ ಇಲಾಖೆಯಲ್ಲಿ ಹೆಚ್ಚು ಹುದ್ದೆಗಳು ಖಾಲಿ ಇವೆ. 3,643 ಹುದ್ದೆಗಳು ಈ ಇಲಾಖೆಯಲ್ಲಿ ಖಾಲಿ ಉಳಿದಿದ್ದು, ಅವುಗಳನ್ನು ಭರ್ತಿ ಮಾಡಬೇಕು. ಉದ್ಯೋಗ ಕೊಡುವ ಇಲಾಖೆಯಲ್ಲೇ ಶೇ.50ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ' ಎಂದು ಮಾಜಿ ಸಚಿವ ಹಾಗೂ ಚಿತ್ತಾಪುರ ಕ್ಷೇತ್ರದ ಹಾಲಿ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 

ಶನಿವಾರ ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಂತಿ, ಸಾಮರಸ್ಯಕ್ಕೆ ಹೆಸರಾಗಿರುವ ಕರ್ನಾಟಕವನ್ನು ಉತ್ತರ ಪ್ರದೇಶವನ್ನಾಗಿ ಬಿಜೆಪಿ ಹೊರಟಿದೆ. ಹೀಗಾಗಿಯೇ ಹಿಂದೂ-ಮುಸ್ಲಿಮ್ ಸಮುದಾಯದ ನಡುವೆ ದ್ವೇಷ ಹಬ್ಬಿಸುವ ಕೆಲಸವನ್ನು ಬಿಜೆಪಿ ಅತ್ಯಂತ ವ್ಯವಸ್ಥಿತವಾಗಿ ಮಾಡುತ್ತಿದೆ'  ಎಂದು ಆರೋಪಿಸಿದ್ದಾರೆ.

‘ಉತ್ತರ ಪ್ರದೇಶದ ಕೆಲ ಬಿಜೆಪಿ ನಾಯಕರು ದ್ವೇಷ ಹರಡುವ ಕೆಲಸ ಮಾಡುತ್ತಿದ್ದಾರೆ. ಹಿಜಾಬ್, ಭಗವದ್ಗೀತೆ, ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಸೇರಿದಂತೆ ಇನ್ನಿತರ ವಿಚಾರಗಳ ಹಿನ್ನೆಲೆಯಲ್ಲಿ 2 ವರ್ಷಗಳಿಂದ ರಾಜ್ಯಕ್ಕೆ ಬಂಡವಾಳ ಹರಿದು ಬರುತ್ತಿಲ್ಲ. ಜಾತಿ-ಧರ್ಮದ ರಾಜಕಾರಣ ನಡೆದಿದೆ' ಎಂದು ದೂರಿದರು. 

‘ಉತ್ತರ ಪ್ರದೇಶದವರು ಕರ್ನಾಟಕದ ಮಾದರಿ ಬೇಕು ಎನ್ನುತ್ತಾರೆ. ಆದರೆ, ಇಲ್ಲಿನ ಬಿಜೆಪಿಯವರು ಯುಪಿ ಮಾಡಲು ಹೊರಟಿದ್ದಾರೆ. ಇದು ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸ. ರಾಜ್ಯದಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಕೆಲ ದೇವಸ್ಥಾನಗಳಲ್ಲಿ ನಿರ್ಬಂಧ ಸರಿಯಲ್ಲ. ಕೇಂದ್ರ ಸರಕಾರ ಇಸ್ಲಾಂ ರಾಷ್ಟ್ರಗಳ ಜತೆ ವ್ಯಾಪಾರ, ವ್ಯವಹಾರ ನಡೆಸುವುದಿಲ್ಲ ಎಂದು ಹೇಳಬೇಕು' ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.

‘ಪೆಟ್ರೋಲ್-ಡೀಸೆಲ್ ಆಮದು ಮಾಡಿಕೊಳ್ಳುತ್ತಿರುವುದು ಮುಸ್ಲಿಂ ರಾಷ್ಟ್ರಗಳಿಂದಲ್ಲವೇ? ಹಸಿವಿಗೆ ಯಾವ ಜಾತಿ-ಧರ್ಮವಿದೆ. ಜಾತಿ ಮತ್ತು ಧರ್ಮ ರಾಜಕಾರಣ ಎಂದಿಗೂ ಸರಿಯಲ್ಲ. ನಮ್ಮ ದೇಶದಿಂದ ಮುಸ್ಲಿಂ ರಾಷ್ಟ್ರಗಳಿಗೆ ಕೆಲಸಕ್ಕೆ ತೆರಳಿದ್ದಾರೆ. ಅವರನ್ನೆಲ್ಲ ಏಕೆ ಅಲ್ಲಿಗೆ ಕಳುಹಿಸಬೇಕು. ಅವರನ್ನು ಹಿಂದಕ್ಕೆ ಕರೆಸಿಕೊಳ್ಳಲಿ' ಎಂದು ಪ್ರಿಯಾಂಕ್ ಖರ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ನಮ್ಮ ದೇಶಕ್ಕೆ ರೇಶ್ಮೆ ಪರಿಚಯಿಸಿದವರು ಯಾರು? ಮೈಸೂರು ಹುಲಿ ಎಂದು ಖ್ಯಾತಿ ಪಡೆದಿರುವ ಟಿಪ್ಪು ಸುಲ್ತಾನ್, ಅವರು ಮುಸ್ಲಿಮ್ ಅದನ್ನು ಸುಡಲು ಸಾಧ್ಯವೇ? ಲಾಲ್‍ಬಾಗ್ ಮಾಡಿದ್ದು ಹೈದರಾಲಿ ಸುಡಲು ಆಗುತ್ತಾ? ಕಾಫಿ ಬಂದಿದ್ದು ಬಾಬಾಬುಡಾನ್‍ರಿಂದ. ಅರೇಬಿಯಾದಿಂದ ಸ್ಮಗಲ್ ಮಾಡಿಕೊಂಡು ಬಂದಿದ್ದು ಕಾಫಿ. ಇದರಿಂದ ಎಷ್ಟೊ ಜನರಿಗೆ ಉದ್ಯೋಗ ಸಿಕ್ಕಿದೆ. ಆದರೆ, ಬಿಜೆಪಿಯವರು ಯುವಕರನ್ನು ಗೋರಕ್ಷಕರಾಗಿ ಮಾಡುತ್ತಿದ್ದಾರೆ. ಕೇಸರಿ ಶಾಲು ಹಾಕಿ ಗೋರಕ್ಷಣೆ ಮಾಡಿದರೆ ಉದ್ಯೋಗ ಸೃಷ್ಟಿಯೇ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದರು.

ಕೃಷಿ ಉತ್ಪನ್ನಗಳು 5,585 ಮಿಲಿಯನ್ ಮೊತ್ತದಲ್ಲಿ ರಫ್ತು ಮಾಡಲಾಗುತ್ತಿದೆ. ಮುಸ್ಲಿಂ ರಾಷ್ಟ್ರಗಳಿಗೆ ರಪ್ತು ನಿಷೇಧಿಸಲಿ, ಆಮದು ನಿಷೇಧಿಸಲಿ, ಇದೆಲ್ಲ ಮಾಡಲಿಕ್ಕಾಗುತ್ತದೆಯೇ ಸರಕಾರಕ್ಕೆ? 1.12 ಕೋಟಿ ನಮ್ಮ ದೇಶದ ಜನರು ಇಸ್ಲಾಮಿಕ್ ದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ. 7.5 ಲಕ್ಷಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಇಸ್ಲಾಮಿಕ್ ದೇಶಗಳಲ್ಲಿ ಶಿಕ್ಷಣ ಕಲಿಯುತ್ತಿದ್ದಾರೆ ಎಂದು ವಿವರಣೆ ನೀಡಿದರು.

‘ಬಜೆಟ್‍ನಲ್ಲಿ ಯೋಜನೆಗಳ ಅನುಷ್ಠಾನ ಬಗ್ಗೆ ಸ್ಪಷ್ಟತೆ ಇಲ್ಲ. ಘೋಷಣೆಗಳು ಬಹಳ ಇವೆ. ಶಿಕ್ಷಣ, ಉದ್ಯೋಗ, ಸಬಲೀಕರಣಕ್ಕೆ ಯಾವುದೇ ನಿಲುವು ತೆಗೆದುಕೊಂಡಿಲ್ಲ. ಯೋಜನೆಗಳ ಜಾರಿಗೆ ಸರಿಯಾದ ನೀಲಿನಕ್ಷೆ ನೀಡಿಲ್ಲ. ಡಬಲ್ ಎಂಜಿನ್ ಸರಕಾರದಲ್ಲಿ ಜನರಿಗೆ ಡಬಲ್ ದೋಖಾ ಆಗುತ್ತಿದೆ. 2019-20ರಲ್ಲಿ 49 ಸಾವಿರ ಪುರುಷರು, 33 ಸಾವಿರ ಮಹಿಳೆಯರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X