Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಸಭೆ ಚುನಾವಣೆ: ಶಿಗ್ಗಾಂವಿ...

ವಿಧಾನಸಭೆ ಚುನಾವಣೆ: ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ; ಸಿಎಂ ಬೊಮ್ಮಾಯಿ

''ಬಿಜೆಪಿಗೆ ಪೂರ್ಣ ಬಹುಮತ ದೊರೆಯುವ ವಿಶ್ವಾಸವಿದೆ''

ವಾರ್ತಾಭಾರತಿವಾರ್ತಾಭಾರತಿ26 March 2022 7:19 PM IST
share
ವಿಧಾನಸಭೆ ಚುನಾವಣೆ: ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ; ಸಿಎಂ ಬೊಮ್ಮಾಯಿ

ಹಾವೇರಿ, ಮಾ. 26:  ‘ಮೂರು ಬಾರಿ ಶಿಗ್ಗಾಂವಿ ಕ್ಷೇತ್ರದ ಜನ ಗೆಲುವು ನೀಡಿದ್ದಾರೆ. ಈ ಬಾರಿಯೂ ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

‘ಮುಂಬರಲಿರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಸಂಪೂರ್ಣ ಬಹುಮತದಿಂದ ಜನರ ಆಶೀರ್ವಾದದೊಂದಿಗೆ ಆಡಳಿತ ಚುಕ್ಕಾಣಿಯನ್ನು ಹಿಡಿಯಲು ಯಶಸ್ವಿಯಾಗುತ್ತೇವೆ ಎಂಬ ಸಂಪೂರ್ಣ ವಿಶ್ವಾಸವಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದ್ದಾರೆ.

ಶನಿವಾರಜಿಲ್ಲೆಯ ಸವಣೂರಿನ ಹೆಸ್ಕಾಂ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಉತ್ತರಪ್ರದೇಶದ ಚುನಾವಣೆಯ ನಂತರ ಯೋಗಿ ಆದಿತ್ಯನಾಥ 2ನೆ ಬಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡಿದ್ದೇನೆ. ಚುನಾವಣೆಯ ನಂತರ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಇಡೀ ದೇಶದಲ್ಲಿ ಹೊಸ ರಾಜಕೀಯ ಸಂಚಲನ ಪ್ರಾರಂಭವಾಗಿದೆ ಎಂದರು.

‘ಉತ್ತರಾಖಂಡ್, ಮಣಿಪುರ, ಗೋವಾ ಮತ್ತು ಉತ್ತರ ಪ್ರದೇಶ ಗೆಲುವು 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿಯನ್ನು ಸ್ಪಷ್ಟವಾಗಿದೆ. ಕರ್ನಾಟಕದಲ್ಲಿಯೂ ದೊಡ್ಡ ಪ್ರಮಾಣ ಬೆಂಬಲ ವ್ಯಕ್ತವಾಗುತ್ತಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.

ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧೆ: 2023ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿಯವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಸಾಧ್ಯತೆ ಇದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,

ತೀರ್ಪಿನ ಪಾಲನೆ ಆಗಬೇಕು: ಬಹಳ ವರ್ಷಗಳಿಂದ ಶಾಲೆಗಳಲ್ಲಿ ಶಾಲಾ ಸಮವಸ್ತ್ರ ನಿಯಮವನ್ನು ಪಾಲಿಸಲಾಗುತ್ತಿದೆ. ಕೆಲವು ಶಕ್ತಿಗಳ ಪ್ರಚೋದನೆಯಿಂದ ಹೈಕೋರ್ಟ್ ತೀರ್ಪಿನ ನಂತರವೂ ಗೊಂದಲವೆದ್ದಿದೆ. ಆದಾಗ್ಯೂ ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲಾಗಿದೆ. ತೀರ್ಪಿನ ಪಾಲನೆ ಆಗಬೇಕು, ಪ್ರಚೋದನೆ ಮಾಡಬಾರದು ಎಂಬುದು ಜನಾಭಿಪ್ರಾಯ. ಈ ದೇಶದ ಕಾನೂನನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.

ಶಾಂತಿ-ಸೌಹಾರ್ದತೆಯಿಂದ ಸಮಸ್ಯೆಗೆ ಪರಿಹಾರ: ದೇವಸ್ಥಾನದ ಬಳಿ ಅನ್ಯಧರ್ಮದವರ ವ್ಯಾಪಾರ ವಿವಾದದ ಬಗ್ಗೆ 2002ರಲ್ಲಿ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಸ್ಪಷ್ಟ ಆದೇಶವಿದೆ. ಈ ಕಾನೂನು ಹೊಸದಾಗಿ ಆಗಿರುವುದಲ್ಲ. ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಪ್ರದೇಶದಲ್ಲಿ ಕಾಂಟ್ರಾಕ್ಟ್ ಸಬ್ ಲೀಸ್ ಆಗಿರುತ್ತದೆ. ಎಲ್ಲ ಜನರೂ ಶಾಂತಿ, ಸೌಹಾರ್ದತೆಯಿಂದ ಕುಳಿತು ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೆಣ್ಣುಮಕ್ಕಳ ಶಿರವಸ್ತ್ರದ ಬಗ್ಗೆ ಮಾಡಿದ ವಿವಾದಿತ ಹೇಳಿಕೆ ಬಗ್ಗೆ ಅವರನ್ನೇ ಕೇಳಬೇಕು. ಆದರೆ, ಶಾಲಾ ಸಮವಸ್ತ್ರದ ನೀತಿಯ ಬಗ್ಗೆ ಹೈಕೋರ್ಟ್ ಸ್ಪಷ್ಟ ಆದೇಶವಿದೆ. ಈ ನಿಟ್ಟಿನಲ್ಲಿ ಪುನಃ ಪ್ರಚೋದನೆ ಕೊಡುವಂತಹ ಕೆಲಸ ಆಗಬಾರದು ಎಂದು ಬಸವರಾಜ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X