Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯದ...

ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯದ ಕೊರತೆ: ಮುಖ್ಯ ಚುನಾವಣಾ ಆಯುಕ್ತ

ವಾರ್ತಾಭಾರತಿವಾರ್ತಾಭಾರತಿ26 March 2022 8:11 PM IST
share
ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯದ ಕೊರತೆ: ಮುಖ್ಯ ಚುನಾವಣಾ ಆಯುಕ್ತ

ಹೊಸದಿಲ್ಲಿ, ಮಾ.26: ಸಂಸತ್ತಿನಲ್ಲಿ ಮಹಿಳೆಯರ ಪ್ರಾತಿನಿಧ್ಯದ ಕೊರತೆಯ ಬಗ್ಗೆ ಶನಿವಾರ ಇಲ್ಲಿ ಬೇಸರ ವ್ಯಕ್ತಪಡಿಸಿದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುಶೀಲಚಂದ್ರ ಅವರು,ಆದಾಗ್ಯೂ ಇತ್ತೀಚಿನ ವರ್ಷಗಳಲ್ಲಿ ಮಹಿಳಾ ಮತದಾರರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಬೆಟ್ಟು ಮಾಡಿದರು.

ಸಂಸತ್ತಿನಲ್ಲಿ ಕಲಾಪಗಳಿಗೆ ವ್ಯತ್ಯಯಗಳ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ ಅವರು ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದರು.

ಸಂಸದ ರತ್ನ ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸುಶೀಲಚಂದ್ರ,ಪ್ರಥಮ ಲೋಕಸಭೆಯು 15 ಮಹಿಳಾ ಸಂಸದರನ್ನು ಹೊಂದಿದ್ದರೆ 17ನೇ ಲೋಕಸಭೆಯು 78 ಮಹಿಳಾ ಸಂಸದರನ್ನು ಹೊಂದಿದೆ. ಆದರೆ ಈ ವಿಷಯದಲ್ಲಿ ಬೆಳವಣಿಗೆ ಮಾತ್ರ ಈಗಲೂ ಮಂದಗತಿಯಲ್ಲಿದೆ ಎಂದರು.

ಸಂವಿಧಾನವು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಖಾತರಿಪಡಿಸಿದೆ ಎಂದು ಬೆಟ್ಟು ಮಾಡಿದ ಅವರು, ತಳಮಟ್ಟದಲ್ಲಿ ಹಲವಾರು ಮಹಿಳಾ ನಾಯಕಿಯರು ತಮ್ಮ ನಾಯಕತ್ವ ಗುಣಗಳನ್ನು ಪ್ರದರ್ಶಿಸಿದ್ದಾರೆ ಮತ್ತು ತಮ್ಮ ಸಮುದಾಯಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ತಂದಿದ್ದಾರೆ ಎಂದರು.

ಸಂಸದೀಯ ಕಲಾಪಗಳಿಗೆ ವ್ಯತ್ಯಯಗಳ ಕುರಿತಂತೆ ಅವರು, ವಾದಗಳು, ಚರ್ಚೆಗಳು ಮತ್ತು ಭಾಷಣಗಳು ಸದೃಢ ಸಂಸತ್ತಿನ ಮಾನದಂಡಗಳಾಗಿವೆ,ಆದರೆ ಪದೇ ಪದೇ ವ್ಯತ್ಯಯಗಳು, ಸಭಾತ್ಯಾಗಗಳು ಮತ್ತು ಉಪವಾಸ ಮುಷ್ಕರಗಳಲ್ಲ. ಈ ಎಲ್ಲ ವರ್ಷಗಳಲ್ಲಿ ಕಲಾಪಗಳಿಗೆ ವ್ಯತ್ಯಯಗಳಿಂದಾಗಿ ಸಮಯ ನಷ್ಟದ ಪ್ರಮಾಣದಲ್ಲಿ ನಾಟಕೀಯ ಏರಿಕೆ ಕಂಡು ಬಂದಿದೆ,ಕೆಲವು ಅಧಿವೇಶನಗಳು ಯಾವುದೇ ಕಲಾಪ ನಡೆಸದೆ ವ್ಯರ್ಥಗೊಂಡಿವೆ ಮತ್ತು ಇವು ಸದೃಢ ಸಂಸದೀಯ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು.

ಸಂಸತ್ ಕಲಾಪಗಳಲ್ಲಿ ಪಾಲ್ಗೊಳ್ಳುವಿಕೆ,ಪ್ರಶ್ನೆವೇಳೆ ಮತ್ತು ಶೂನ್ಯವೇಳೆಯಲ್ಲಿ ಮಹತ್ವದ ವಿಷಯಗಳನ್ನೆತ್ತುವುದು ಇವೆಲ್ಲ ಸ್ಥಾಪಿತ ಸಂಸದೀಯ ಪರಿಪಾಠಗಳಾಗಿವೆ. ನಾಟಕೀಯ ವಿದ್ಯಮಾನಗಳು ಅಥವಾ ಘೋಷಣೆಗಳನ್ನು ಕೂಗುವುದು ಅಥವಾ ಸದನದ ಬಾವಿಗೆ ನುಗ್ಗುವ ಮೂಲಕ ಈ ಅಮೂಲ್ಯ ಅವಕಾಶವನ್ನು ವ್ಯರ್ಥಗೊಳಿಸಬಾರದು ಎಂದು ಅವರು ಹೇಳಿದರು.

ಸಂಸದೀಯ ಸ್ಥಾಯಿ ಸಮಿತಿಗಳ ಸಭೆಗಳಲ್ಲಿ ಹಾಜರಾತಿ ಕ್ಷೀಣಿಸುತ್ತಿರುವುದು ಕಳವಳದ ವಿಷಯವಾಗಿದೆ. ಸಂಸದರು ಉತ್ಸಾಹದಿಂದ ಮತ್ತು ನಿಷ್ಪಕ್ಷ ರೀತಿಯಲ್ಲಿ ಸಭೆಗಳಲ್ಲಿ ಭಾಗಿಯಾಗಬೇಕು ಎಂದರು.

ಚುನಾವಣೆಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಕುರಿತಂತೆ ಇತ್ತೀಚಿನ ಪಂಚರಾಜ್ಯ ಚುನಾವಣೆಗಳ ದತ್ತಾಂಶಗಳನ್ನು ಹಂಚಿಕೊಂಡ ಸುಶೀಲಚಂದ್ರ,ಗೋವಾ,ಉತ್ತರಾಖಂಡ,ಮಣಿಪುರ ಮತ್ತು ಉತ್ತರ ಪ್ರದೇಶಗಳಲ್ಲಿ ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತಗಳನ್ನು ಚಲಾಯಿಸಿದ್ದಾರೆ ಮತ್ತು ಪಂಜಾಬಿನಲ್ಲಿ ಪುರುಷ ಮತ್ತು ಮಹಿಳಾ ಮತದಾರರ ಸಂಖ್ಯೆ ಸುಮಾರಾಗಿ ಸಮಾನವಾಗಿತ್ತು. ಎಲ್ಲ ಐದು ರಾಜ್ಯಗಳಲ್ಲಿ ಲಿಂಗಾನುಪಾತವು ಏರಿಕೆಯಾಗಿದ್ದು, ಉ.ಪ್ರದೇಶವೊಂದರಲ್ಲಿಯೇ ಅದು 29 ಅಂಶಗಳಷ್ಟು ಏರಿಕೆಯಾಗಿದೆ ಎಂದರು. 1951ರಲ್ಲಿ ಮೊದಲ ಲೋಕಸಭಾ ಚುನಾವಣೆ ನಡೆದಾಗ ದೇಶದಲ್ಲಿ 17.3 ಕೋ.ಮತದಾರರಿದ್ದರು ಮತ್ತು ಶೇ.45.6ರಷ್ಟು ಮತದಾನವಾಗಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ ಸುಮಾರು 91.2 ಕೋ.ಮತದಾರರಿದ್ದು,ಶೇ.66.4ರಷ್ಟು ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿತ್ತು ಎಂದು ತಿಳಿಸಿದ ಅವರು,ಇಂದು ದೇಶದಲ್ಲಿ 95.3 ಕೋ.ಗೂ ಅಧಿಕ ಮತದಾರರಿದ್ದು,ಇವರಲ್ಲಿ 49.04 ಕೋ.ಪುರುಷರು ಮತ್ತು 46.09 ಕೋ.ಮಹಿಳೆಯರು ಸೇರಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X