Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶ್ರೀಲಂಕಾ: ತೈಲ ದರ ದಾಖಲೆ ಮಟ್ಟಕ್ಕೆ...

ಶ್ರೀಲಂಕಾ: ತೈಲ ದರ ದಾಖಲೆ ಮಟ್ಟಕ್ಕೆ ಏರಿಕೆ; ಲೀಟರ್ ಪೆಟ್ರೋಲ್‌ಗೆ 303 ರೂ.

ವಾರ್ತಾಭಾರತಿವಾರ್ತಾಭಾರತಿ26 March 2022 10:19 PM IST
share
ಶ್ರೀಲಂಕಾ: ತೈಲ ದರ ದಾಖಲೆ ಮಟ್ಟಕ್ಕೆ ಏರಿಕೆ; ಲೀಟರ್ ಪೆಟ್ರೋಲ್‌ಗೆ 303 ರೂ.

ಕೊಲಂಬೊ, ಮಾ.26: ತೈಲವನ್ನು ಆಮದು ಮಾಡಿಕೊಳ್ಳಲು ವಿದೇಶಿ ವಿನಿಮಯದ ಕೊರತೆ ಎದುರಾಗಿರುವ ಶ್ರೀಲಂಕಾದಲ್ಲಿ ತೈಲ ದರದಲ್ಲಿ ಶನಿವಾರ ಮತ್ತೆ 20% ಏರಿಕೆಯಾಗಿದ್ದು ಇದೀಗ ದ್ವೀಪರಾಷ್ಟ್ರದಲ್ಲಿ 1 ಲೀಟರ್ ಪೆಟ್ರೋಲ್‌ನ ದರ 303 ರೂ.ಗೆ ತಲುಪಿದೆ ಎಂದು ವರದಿಯಾಗಿದೆ.

ಶ್ರೀಲಂಕಾದ ತೈಲ ಮಾರುಕಟ್ಟೆಯ ಮೂರನೇ ಒಂದು ಭಾಗದಷ್ಟು ತೈಲ ಪೂರೈಸುವ ಲಂಕಾ ಐಒಸಿ(ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಶ್ರೀಲಂಕಾ ಸಂಸ್ಥೆ) ಶನಿವಾರ 1 ಲೀಟರ್ ಪೆಟ್ರೋಲ್ ದರವನ್ನು 49 ರೂ. ಹೆಚ್ಚಿಸಿದ್ದು 303 ರೂ.ಗೆ ತಲುಪಿದೆ. ಕಳೆದ 15 ದಿನದಲ್ಲಿ 2ನೇ ಬಾರಿ ಬೆಲೆ ಏರಿಕೆ ಮಾಡಿದಂತಾಗಿದೆ. ದೇಶದ ಕರೆನ್ಸಿಯಾದ ರೂಪಾಯಿ ಈ ತಿಂಗಳಿನಲ್ಲಿ ಅಮೆರಿಕನ್ ಡಾಲರ್ ಹಾಗೂ ಇತರ ಪ್ರಮುಖ ಕರೆನ್ಸಿಗಳ ಎದುರು 30%ದಷ್ಟು ಅಪಮೌಲ್ಯಗೊಂಡಿರುವುದರಿಂದ ತೈಲ ದರ ಏರಿಕೆ ಅನಿವಾರ್ಯ ಎಂದು ಲಂಕಾ ಐಒಸಿ ಹೇಳಿದೆ. ಶ್ರೀಲಂಕಾದ ಸರಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಸಿಲೋನ್ ಪೆಟ್ರೋಲಿಯಂ ಕಾರ್ಪೊರೇಶನ್ ಕೂಡಾ ದರ ಏರಿಸಲು ನಿರ್ಧರಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 1948ರಲ್ಲಿ ಬ್ರಿಟಿಷರಿಂದ ಸ್ವತಂತ್ರಗೊಂಡ ಬಳಿಕದ ಅತ್ಯಂತ ತೀವ್ರ ಆರ್ಥಿಕ ಸಂಕಷ್ಟದ ಸುಳಿಗೆ ಶ್ರೀಲಂಕಾ ಸಿಲುಕಿದ್ದು ದೇಶದ ವಿದೇಶಿ ವಿನಿಮಯ ದಾಸ್ತಾನು ಕನಿಷ್ಟ ಮಟ್ಟಕ್ಕೆ ತಲುಪಿದೆ. ಇದರಿಂದ ಆಹಾರ, ತೈಲ, ಔಷಧ ಮುಂತಾದ ದೈನಂದಿನ ಅಗತ್ಯದ ವಸ್ತುಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳಲು ತೊಡಕಾಗಿದೆ.

ತೈಲ ಖರೀದಿಸಲು ಮಾರುದ್ದದ ಸರತಿ ಸಾಲಿನಲ್ಲಿ ನಿಂತಿದ್ದ 4 ಮಂದಿ ಕುಸಿದುಬಿದ್ದು ಮೃತಪಟ್ಟ ಘಟನೆ ಕಳೆದ ವಾರ ವರದಿಯಾಗಿದೆ. ಪ್ರವಾಸೋದ್ದಿಮೆಯನ್ನೇ ಪ್ರಮುಖ ಆದಾಯ ಮೂಲವನ್ನಾಗಿರಿಸಿಕೊಂಡಿರುವ ದ್ವೀಪರಾಷ್ಟ್ರದ ಅರ್ಥವ್ಯವಸ್ಥೆಯ ಮೇಲೆ ಕಳೆದ 2 ವರ್ಷದಿಂದ ಕೊರೋನ ಸಾಂಕ್ರಾಮಿಕ ಮಾರಕ ಆಘಾತ ನೀಡಿದೆ. ವಿದೇಶಿ ವಿನಿಮಯವನ್ನು ಉಳಿಸಿಕೊಳ್ಳುವ ಉದ್ದೇಶದಿಂದ 2020ರ ಮಾರ್ಚ್‌ನಲ್ಲಿ ಸರಕಾರ ಆಮದಿನ ಮೇಲೆ ನಿಷೇಧ ಹೇರಿತ್ತು.

ಇದರಿಂದ ದೈನಂದಿನ ಬಳಕೆಯ ವಸ್ತುಗಳ ಕೊರತೆ ಎದುರಾಗಿದ್ದು ಕಳೆದ ತಿಂಗಳು ಆಹಾರದ ದರ 25% ಹೆಚ್ಚಿದ್ದರೆ, ಒಟ್ಟು ಹಣದುಬ್ಬರದ ಪ್ರಮಾಣ 17.5%ಕ್ಕೆ ಏರಿಕೆಯಾಗಿದೆ. ಅಲ್ಲದೆ ವಿದ್ಯುತ್ ಉತ್ಪಾದನೆಗೆ ತೈಲದ ಕೊರತೆ ಎದುರಾಗಿರುವುದರಿಂದ ವಿದ್ಯುತ್ ಉತ್ಪಾದನೆ ಕುಸಿದಿದ್ದು ದೇಶದೆಲ್ಲೆಡೆ ದಿನಕ್ಕೆ 5 ಗಂಟೆ ವಿದ್ಯುತ್ ಕಡಿತಕ್ಕೆ ಸರಕಾರ ಆದೇಶಿಸಿದೆ. ಜೊತೆಗೆ, ಅಂತರಾಷ್ಟ್ರೀಯ ಸಾಲದ ಹೊರೆ ಹೆಚ್ಚಿರುವುದರಿಂದ ತುರ್ತು ಸಾಲಕ್ಕೆ ಅಂತರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)ಗೆ ಮನವಿ ಮಾಡಿರುವುದಾಗಿ ಸರಕಾರ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X