Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೃಪ್ತಿಕರವಲ್ಲ, ಆದರೆ ಅನಿರೀಕ್ಷಿತವಲ್ಲ:...

ತೃಪ್ತಿಕರವಲ್ಲ, ಆದರೆ ಅನಿರೀಕ್ಷಿತವಲ್ಲ: ಉಕ್ರೇನ್ ಕುರಿತ ಭಾರತದ ನಿಲುವಿಗೆ ಅಮೆರಿಕದ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ26 March 2022 10:42 PM IST
share
ತೃಪ್ತಿಕರವಲ್ಲ, ಆದರೆ ಅನಿರೀಕ್ಷಿತವಲ್ಲ: ಉಕ್ರೇನ್ ಕುರಿತ ಭಾರತದ ನಿಲುವಿಗೆ ಅಮೆರಿಕದ ಪ್ರತಿಕ್ರಿಯೆ

ವಾಷಿಂಗ್ಟನ್, ಮಾ.26: ಉಕ್ರೇನ್‌ನಲ್ಲಿನ ಬಿಕ್ಕಟ್ಟಿನ ವಿಷಯದಲ್ಲಿ ವಿಶ್ವಸಂಸ್ಥೆಯಲ್ಲಿ ಭಾರತ ತಳೆದಿರುವ ನಿಲುವು ತೃಪ್ತಿಕರವಾಗಿಲ್ಲ. ಆದರೆ ರಶ್ಯದ ಜತೆಗಿನ ಆ ದೇಶದ ಐತಿಹಾಸಿಕ ಸಂಬಂಧವನ್ನು ಗಮನಿಸಿದರೆ ಅನಿರೀಕ್ಷಿತವಲ್ಲ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

ರಶ್ಯದೊಂದಿಗಿನ ನಿಕಟ ಬಾಂಧವ್ಯಕ್ಕೆ ಪರ್ಯಾಯ ಕ್ರಮಗಳನ್ನು ಭಾರತ ಕಂಡುಕೊಳ್ಳುವ ಅಗತ್ಯವಿದೆ ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ಸಮಿತಿಯ ಇಂಡೊ-ಪೆಸಿಫಿಕ್ ವಿಭಾಗದ ನಿರ್ದೇಶಕಿ ಮಿರಾ ರ್ಯಾಪ್ ಹೂಪರ್ ಹೇಳಿದ್ದಾರೆ. ವಾಷಿಂಗ್ಟನ್‌ನ ಸ್ಕೂಲ್ ಆಫ್ ಅಡ್ವಾನ್ಸ್‌ಡ್ ಇಂಟರ್‌ನ್ಯಾಷನಲ್ ಸ್ಟಡೀಸ್ ಆಯೋಜಿಸಿದ್ದ ಆನ್‌ಲೈನ್ ವಿಚಾರಸಂಕಿರಣದಲ್ಲಿ ಅವರು ಉಪನ್ಯಾಸ ನೀಡಿದರು. ಚೀನಾದೊಂದಿಗಿನ ಸಂಬಂಧ ಹದಗೆಟ್ಟ ಕಾರಣಕ್ಕೆ ಭಾರತವು ರಶ್ಯಕ್ಕೆ ಇನ್ನಷ್ಟು ನಿಕಟವಾಯಿತು. ಆದರೆ ರಕ್ಷಣಾ ಕ್ಷೇತ್ರದಲ್ಲಿ ರಶ್ಯಾದ ಮೇಲಿನ ಅವಲಂಬನೆಯ ಬಗ್ಗೆ ಭಾರತ ಆಳವಾಗಿ ಚಿಂತನೆ ನಡೆಸುವುದು ಒಳಿತು ಎಂದವರು ಹೇಳಿದ್ದಾರೆ.

ಭಾರತದ ಜತೆಗಿನ ಸಂಬಂಧವನ್ನು ಇನ್ನಷ್ಟು ನಿಕಟವಾಗಿಸುವುದು, ಅದಕ್ಕಾಗಿ ಅವರಿಗೆ ಆಯ್ಕೆಗಳನ್ನು ನೀಡುವುದು ಮತ್ತು ಕಾರ್ಯತಂತ್ರದ ಸ್ವಾಯತ್ತೆಯನ್ನು ನಿರಂತರ ಮುಂದುವರಿಸುವ ಬಗ್ಗೆ ನಮ್ಮ ದೃಷ್ಟಿಕೋನ ಇರಬೇಕು ಎಂದು ಭಾವಿಸುವುದಾಗಿ ಹೂಪರ್ ಹೇಳಿದರು. ಅಮೆರಿಕ ಹಾಗೂ ಅದರ ಮಿತ್ರದೇಶಗಳು ತಮ್ಮ ಪೂರೈಕೆ ಸರಪಳಿಯ ಬಗ್ಗೆ ಗಮನ ಹರಿಸುವ ಅಗತ್ಯವಿದೆ ಮತ್ತು ರಶ್ಯದ ರಕ್ಷಣಾ ಸಾಮಾಗ್ರಿಗಳ ಪೂರೈಕೆಯ ವ್ಯವಸ್ಥೆಗೆ ಬದಲಿ ವ್ಯವಸ್ಥೆ ಕಂಡುಕೊಳ್ಳಲು ಇತರ ದೇಶಗಳಿಗೆ ಯಾವ ರೀತಿ ನೆರವಾಗಬಹುದು ಎಂದು ಯೋಜನೆ ರೂಪಿಸಬೇಕಿದೆ. ರಶ್ಯದಿಂದ ಪಡೆಯುತ್ತಿರುವ ಶಸ್ತ್ರಾಸ್ತ್ರ ಅಥವಾ ಕಂಪ್ಯೂಟರ್ ಚಿಪ್‌ಗಳಿಗೆ ಪರ್ಯಾಯ ವ್ಯವಸ್ಥೆ ಕಂಡುಹಿಡಿದರೆ ಹಲವು ದೇಶಗಳು ರಶ್ಯದ ಮೇಲಿನ ಅವಲಂಬನೆಯಿಂದ ಹೊರಬರಲು ಸಾಧ್ಯವಿದೆ ಎಂದು ಕೂಪರ್ ಹೇಳಿದ್ದಾರೆ.

ಉಕ್ರೇನ್ ವಿರುದ್ಧದ ರಶ್ಯದ ಆಕ್ರಮಣವನ್ನು ಖಂಡಿಸುವಲ್ಲಿ ಕ್ವಾಡ್ ಸಂಘಟನೆಯ ಇತರ ಸದಸ್ಯ ದೇಶಗಳಿಗೆ ಹೋಲಿಸಿದರೆ ಭಾರತ ಸ್ವಲ್ಪ ನಡುಗುತ್ತಿದೆ ಎಂದು ಅಮೆರಿಕದ ಅಧ್ಯಕ್ಷ ಬೈಡನ್ ಕಳೆದ ವಾರ ಹೇಳಿಕೆ ನೀಡಿದ್ದರು. ಕ್ವಾಡ್‌ನ ಇತರ ಸದಸ್ಯರಾದ ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ರಶ್ಯದ ವಿರುದ್ಧ ನಿರ್ಬಂಧ ಹೇರಿರುವುದನ್ನು ಅವರು ಉಲ್ಲೇಖಿಸಿದ್ದರು. ಇತ್ತೀಚಿನ ದಿನಗಳಲ್ಲಿ ಭಾರತವು ಅಮೆರಿಕದೊಂದಿಗೆ ನಿಕಟ ಸಂಪರ್ಕ ಬೆಳೆಸಿಕೊಂಡಿದೆ ಮತ್ತು ಚೀನಾದ ಪ್ರಾಬಲ್ಯವನ್ನು ನಿಯಂತ್ರಿಸುವ ಉದ್ದೇಶದ ಕ್ವಾಡ್ ಸಂಘಟನೆಯ ಪ್ರಮುಖ ಸದಸ್ಯನಾಗಿದೆ. ಆದರೆ, ರಕ್ಷಣಾ ಪಡೆಗಳಿಗೆ ಅಗತ್ಯವಿರುವ ಪ್ರಮುಖ ಶಸ್ತ್ರಾಸ್ತ್ರ ಸಹಿತ ಹಲವು ಪ್ರಮುಖ ಕ್ಷೇತ್ರಗಳಲ್ಲಿ ರಶ್ಯದ ಜತೆ ನಿಕಟ ಸಂಪರ್ಕ ಮುಂದುವರಿಸಿದೆ. ಉಕ್ರೇನ್ ಮೇಲಿನ ರಶ್ಯದ ಆಕ್ರಮಣವನ್ನು ಖಂಡಿಸುವ ನಿರ್ಣಯದ ಬಗ್ಗೆ ವಿಶ್ವಸಂಸ್ಥೆ ಹಾಗೂ ವಿಶ್ವಸಂಸ್ಥೆಯ ಭದ್ರತಾ ಸಮಿತಿ ಸಭೆಯಲ್ಲಿ ನಡೆದ ಮತದಾನದಿಂದ ಭಾರತ ದೂರ ಉಳಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X