Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಬರಮತಿ ಆಶ್ರಮದ ಪುನರ್ ಅಭಿವೃದ್ಧಿಯನ್ನು...

ಸಾಬರಮತಿ ಆಶ್ರಮದ ಪುನರ್ ಅಭಿವೃದ್ಧಿಯನ್ನು ಪ್ರಶ್ನಿಸಿ ಗಾಂಧೀಜಿ ಮರಿಮೊಮ್ಮಗನಿಂದ ಸುಪ್ರೀಂ ಕೋರ್ಟ್ ಗೆ ಅರ್ಜಿ

ವಾರ್ತಾಭಾರತಿವಾರ್ತಾಭಾರತಿ27 March 2022 3:14 PM IST
share
ಸಾಬರಮತಿ ಆಶ್ರಮದ ಪುನರ್ ಅಭಿವೃದ್ಧಿಯನ್ನು ಪ್ರಶ್ನಿಸಿ ಗಾಂಧೀಜಿ ಮರಿಮೊಮ್ಮಗನಿಂದ ಸುಪ್ರೀಂ ಕೋರ್ಟ್ ಗೆ ಅರ್ಜಿ

ಹೊಸದಿಲ್ಲಿ,ಮಾ.27: ಅಹ್ಮದಾಬಾದ್ ನ ಸಾಬರಮತಿ ಆಶ್ರಮವನ್ನು ಪುನರ್ ಅಭಿವೃದ್ಧಿಗೊಳಿಸಲು ಗುಜರಾತ್ ಸರಕಾರದ ನಿರ್ಧಾರದ ವಿರುದ್ಧ ತಾನು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಗುಜರಾತ್ ಉಚ್ಚ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಹಾತ್ಮಾ ಗಾಂಧಿಯವರ ಮರಿಮೊಮ್ಮಗ ತುಷಾರ ಗಾಂಧಿಯವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಎ.1ರಂದು ಕೈಗೆತ್ತಿಕೊಳ್ಳಲಿದೆ.

ಪುನರ್ ಅಭಿವೃದ್ಧಿ ಯೋಜನೆಯು ಸಾಬರಮತಿ ಆಶ್ರಮದ ಭೌತಿಕ ಸ್ವರೂಪವನ್ನು ಬದಲಿಸುತ್ತದೆ ಮತ್ತು ಗಾಂಧೀಜಿಯವರ ಸಿದ್ಧಾಂತವನ್ನು ಸಾಕಾರಗೊಳಿಸಿರುವ ಅದರ ಪ್ರಾಚೀನ ಸರಳತೆಯ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡುತ್ತದೆ ಎಂದು ಅರ್ಜಿಯಲ್ಲಿ ತಿಳಿಸಿರುವ ತುಷಾರ ಗಾಂಧಿ, ಪುನರ್ ಅಭಿವೃದ್ಧಿಯ ಸ್ವರೂಪ ಮತ್ತು ಯೋಜನೆಯ ಪರಿಕಲ್ಪನೆ ಹಾಗೂ ಅನುಷ್ಠಾನದಲ್ಲಿ ಸರಕಾರಿ ಅಧಿಕಾರಿಗಳ ಅತಿಯಾದ ಪಾಲ್ಗೊಳ್ಳುವಿಕೆಯಿಂದ ಆಶ್ರಮವು ಗಾಂಧಿ ತತ್ತ್ವಗಳನ್ನು ಕಳೆದುಕೊಳ್ಳಬಹುದು ಎಂದು ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಮುಖ್ಯ ಆಶ್ರಮವಿರುವ ಒಂದು ಎಕರೆ ವಿಸ್ತೀರ್ಣದಲ್ಲಿಯ ಮೂರು ಪ್ರಮುಖ ಆಕರ್ಷಣೆಗಳಿಗೆ ತಾನು ಕೈ ಹಚ್ಚುವುದಿಲ್ಲ ಎಂದು ಗುಜರಾತ್ ಸರಕಾರವು ನೀಡಿರುವ ಭರವಸೆಯನ್ನು ಉಚ್ಚ ನ್ಯಾಯಾಲಯವು ತನ್ನ ಆದೇಶದಲ್ಲಿ ಬೆಟ್ಟು ಮಾಡಿತ್ತು.

ಭೂಮಿಯ ಮಹತ್ವವು ಒಂದು ಎಕರೆಯಲ್ಲಿಯ ಆಶ್ರಮಕ್ಕೆ ಮಾತ್ರ ಸೀಮಿತವಾಗಿಲ್ಲ, ಸಾಬರಮತಿ ದಂಡೆಯಲ್ಲಿನ 100 ಎಕರೆಗೂ ಅಧಿಕ ಆಸ್ತಿಯು ಮಹತ್ವದ್ದಾಗಿದೆ. ಈ ಭೂಮಿಯು ಪ್ರೇರಣೆಯ ಮೂಲವಾಗಿದೆ ಮತ್ತು ಗಾಂಧೀಜಿಯವರ ಜೀವನ ಅಭಿಯಾನದ ಸ್ಮಾರಕವಾಗಿದೆ. ಇದು ಮಾತ್ರವಲ್ಲ, ಗಾಂಧಿಯವರ ಕಾಲದಲ್ಲಿ ಸಾಬರಮತಿ ಆಶ್ರಮದಲ್ಲಿ ವಾಸವಿದ್ದ ಕುಟುಂಬಗಳ ಸಂತತಿಗಳಿಗೂ ಇಲ್ಲಿಯ ಇಡೀ ಭೂಪ್ರದೇಶವು ಆಶ್ರಯವನ್ನು ಒದಗಿಸಿದೆ.

ಪುನರ್ ಅಭಿವೃದ್ಧಿ ಯೋಜನೆಯು ಈಗಾಗಲೇ ಈ ಕುಟುಂಬಗಳನ್ನು ಅವರ ಮನೆಗಳಿಂದ ತೆರವುಗೊಳಿಸಿದೆ. ಇದು ಸಾಬರಮತಿ ಆಶ್ರಮ ಮತ್ತು ಅದಕ್ಕೆ ಹೊಂದಿಕೊಂಡಿರುವ ಭೂಮಿಯನ್ನು ಹರಿಜನ ಸೇವಕ ಸಂಘಕ್ಕೆ ಹಸ್ತಾಂತರದ ವೇಳೆ ನೀಡಲಾಗಿದ್ದ ಲಿಖಿತ ಸೂಚನೆಗಳಿಗೆ ವಿರುದ್ಧವಾಗಿದೆ ಎದು ತುಷಾರ ಗಾಂಧಿ ಅರ್ಜಿಯಲ್ಲಿ ವಾದಿಸಿದ್ದಾರೆ.

1,200 ಕೋ.ರೂ.ವೆಚ್ಚದ ಗಾಂಧಿ ಆಶ್ರಮ ಸ್ಮಾರಕ ಮತ್ತು ಪರಿಸರ ಅಭಿವೃದ್ಧಿ ಯೋಜನೆಯನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ಜಂಟಿಯಾಗಿ ಕೈಗೆತ್ತಿಕೊಂಡಿವೆ. ಮಹಾತ್ಮಾ ಗಾಂಧಿ 1917ರಿಂದ 1930ರವರೆಗೆ ಸಾಬರಮತಿ ಆಶ್ರಮದಲ್ಲಿ ವಾಸವಾಗಿದ್ದರು.

ಪಾರಂಪರಿಕ ಕಟ್ಟಡಗಳನ್ನು ಒಟ್ಟುಗೂಡಿಸುವ ಮತ್ತು ಪರಿಸರ ಮರುಸ್ಥಾಪನೆಯ ಮೂಲಕ ಈಗಿರುವ ಐದು ಎಕರೆಗಳಿಂದ 55 ಎಕರೆ ಪ್ರದೇಶದಲ್ಲಿ ಯೋಜನೆಯು ಅನುಷ್ಠಾನಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X