Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರ್ಸಂಟೇಜ್ ಕೊಡುವುದನ್ನು ನಿಲ್ಲಿಸಿದರೆ...

ಪರ್ಸಂಟೇಜ್ ಕೊಡುವುದನ್ನು ನಿಲ್ಲಿಸಿದರೆ ಕಮಿಷನ್ ಪ್ರಕರಣಗಳೂ ನಿಲ್ಲುತ್ತವೆ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ28 March 2022 11:24 PM IST
share
ಪರ್ಸಂಟೇಜ್ ಕೊಡುವುದನ್ನು ನಿಲ್ಲಿಸಿದರೆ ಕಮಿಷನ್ ಪ್ರಕರಣಗಳೂ ನಿಲ್ಲುತ್ತವೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಮಾ.28: ಗುತ್ತಿಗೆದಾರರು ಮೊದಲು ಪರ್ಸಂಟೇಜ್ ಕೊಡುವುದನ್ನು ನಿಲ್ಲಿಸಿದರೆ ಇಂಥ ಕಮಿಷನ್ ಪ್ರಕರಣಗಳು ನಿಲ್ಲುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯ ಗುತ್ತಿಗೆದಾರೊಬ್ಬರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ವಿಚಾರದ ಬಗ್ಗೆ ಅವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು.

ರಾಜ್ಯ ಸರಕಾರದಲ್ಲಿ ಇತ್ತೀಚಿನ ದಿನಗಳಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಪ್ರಚಾರಕ್ಕೆ ಬಂದಿರುವುದೇ ಕಮಿಷನ್ ವಿಚಾರ. ಈಗ ಹೊರಗೆ ಬರುತ್ತಿರುವ ವಿಷಯಗಳ ಬಗ್ಗೆ ಅಚ್ಚರಿ ಏನೂ ಇಲ್ಲ. ಇದು ಒಂದು ರೀತಿಯ ದಿನನಿತ್ಯದ ಕೆಲಸ ಆಗಿಹೋಗಿದೆ. ಹಿಂದೆ ಸಣ್ಣಪುಟ್ಟ ಮಟ್ಟದಲ್ಲಿ ಇಂಥದ್ದೆಲ್ಲ ನಡೆದುಕೊಂಡು ಹೋಗುತ್ತಿತ್ತು. ಈಗ ಸ್ವಲ್ಪ ದೊಡ್ಡ ಪ್ರಮಾಣಕ್ಕೆ ಏರಿಕೆ ಆಗಿದೆ. ಏಕೆಂದರೆ, ಬಜೆಟ್ ಗಾತ್ರ ಹೆಚ್ಚಾದಂತೆ ಕಮಿಷನ್ ಗಾತ್ರ ಕೂಡ ಹೆಚ್ಚಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಗುತ್ತಿಗೆ ಕೆಲಸ ಮಾಡುವವರು ಇಂಥ ಕೆಲಸಗಳಿಗೆ ಪ್ರೋತ್ಸಾಹ ಕೊಡದನ್ನು ನಿಲ್ಲಸಬೇಕು. ಹಣ, ಕಮಿಷನ್ ಕೊಡುವುದಿಲ್ಲ ಎಂದು ಕಠಿಣ ನಿರ್ಧಾರ ಮಾಡಬೇಕು. ಗುತ್ತಿಗೆದಾರರು ಮೊದಲು ಬಿಗಿಯಾಗಿ ಇದ್ದರೆ ಈ ಸಮಸ್ಯೆಗಳು ಏಕೆ ಬರುತ್ತವೆ ಎಂದು ಅವರು ಹೇಳಿದರು.

ನಾಳೆಯಿಂದ ಸದನದಲ್ಲಿ ಚುನಾವಣಾ ಸುಧಾರಣೆ ಬಗ್ಗೆ  ಚರ್ಚೆ ಮಾಡುತ್ತಿದ್ದಾರೆ. ಎರಡು ದಿನ ಏನು ಚರ್ಚೆ ಮಾಡುತ್ತಾರೋ ನೋಡೋಣ. ಕಮಿಷನ್ ವಿಷಯದ ಚುನಾವಣೆಯಲ್ಲಿ ಬದಲಾವಣೆ ತರುವ ಬಗ್ಗೆ ಏನು ಚರ್ಚೆ ಮಾಡುತ್ತಾರೆ. ಕಮಿಷನ್ ವಿಚಾರ ಎನ್ನುವುದು ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ದೊಡ್ಡ ಚರ್ಚೆ ಏಕೆ? ನಮ್ಮ ಜನರು ಕೂಡ ಈ ಬಗ್ಗೆ ತಲೆ ಕೆಡಿಸಿಕೊಲ್ಲುವುದಿಲ್ಲ. ಜನರಿಗೆಲ್ಲ ಇದು ಗೊತ್ತಿರುವ ವಿಚಾರವೇ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಈ ಬಗ್ಗೆ ಚರ್ಚೆ ಮಾಡಲು ನನಗೆ ಆಸಕ್ತಿ ಇಲ್ಲ. ಜನರು ಈ  ಬಗ್ಗೆ ಮೊದಲ ತಿಳಿದುಕೊಳ್ಳಬೇಕು. ಈಗಲಾದರೂ ಗುತ್ತಿಗೆದಾರರು ಎಲ್ಲರೂ ಸೇರಿ ಕಮಿಷನ್ ಕೊಡಬಾರದು ಎನ್ನುವ ನಿರ್ಧಾರ ಮಾಡಿ. ಲಂಚ ಕೇಳಿದರೆ ಕೆಲಸವನ್ನೆ ಮಾಡಬೇಡಿ, ನಿಲ್ಲಸಿ. ಅದರಿಂದ ಏನೂ ಆಗಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಯಾರು ಇದ್ದೀರಿ, ಅವರು ಈ ಕೆಲಸ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು.

40 ಪಸರ್ಂಟೇಜ್ ಅಂತ ಎಲ್ಲರೂ ಹೇಳುತ್ತಾರೆ. ಆದರೆ, ನೀವು ಮೊದಲು ನಾವು ಯಾವುದೇ ಕೆಲಸ ಮಾಡಲ್ಲ, ಕಮಿಷನ್ ಕೊಡಲ್ಲ ಎಂದು ಸರಕಾರಕ್ಕೆ ಎಚ್ಚರಿಕೆ ಕೊಡಿ. ಆಗ ಎಲ್ಲವೂ ಸರಿ ಹೋಗುತ್ತದೆ. ನೀವೇ ಪ್ರೋತ್ಸಾಹ ನೀಡಿದರೆ ಇದು ಹೀಗೆ ಇರುತ್ತದೆ. ಅದು ಬಿಟ್ಟು ಬರೀ ಚರ್ಚೆ ಮಾಡಿದರೆ ಪ್ರಯೋಜನ ಇಲ್ಲ ಎಂದು ಅವರು ಗುತ್ತಿಗೆದಾರರಿಗೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X