ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ
ಉಡುಪಿ : ಕನ್ನಡ ಪುಸ್ತಕ ಪ್ರಾಧಿಕಾರ ಇದೇ ಎ.೮ರಿಂದ ೧೩ರ ವರೆಗೆ ಧಾರವಾಡ ಕರ್ನಾಟಕ ಕಾಲೇಜು ಆವರಣದಲ್ಲಿ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳವನ್ನು ಏರ್ಪಡಿಸಿದೆ. ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಕನ್ನಡ ಪ್ರಕಾಶಕರು ಹಾಗೂ ಮಾರಾಟಗಾರರಿಂದ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಎ.೬ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ದೂ.ಸಂಖ್ಯೆ: ೦೮೦-೨೨೪೮೪೫೧೬/೨೨೧೦೭೭೦೪ ಅಥವಾ ಪ್ರಾಧಿಕಾರದ ವೆಬ್ಸೈಟ್ - www.kannadapustakapradhikara.com- ಅಥವಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಯನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





