Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಿಸ್ಕಾ: ಭೀಕರ ಕಾಳ್ಗಿಚ್ಚು ಶಮನಕ್ಕೆ...

ಸರಿಸ್ಕಾ: ಭೀಕರ ಕಾಳ್ಗಿಚ್ಚು ಶಮನಕ್ಕೆ ವಾಯುಪಡೆಗೆ ಬುಲಾವ್

ವಾರ್ತಾಭಾರತಿವಾರ್ತಾಭಾರತಿ30 March 2022 7:12 AM IST
share
ಸರಿಸ್ಕಾ: ಭೀಕರ ಕಾಳ್ಗಿಚ್ಚು ಶಮನಕ್ಕೆ ವಾಯುಪಡೆಗೆ ಬುಲಾವ್

ಜೈಪುರ/ ಅಲ್ವಾರ್: ರಾಜಸ್ಥಾನದ ಸರಿಸ್ಕಾ ಹುಲಿ ಧಾಮ ವ್ಯಾಪ್ತಿಯ ಐದು ಚದರ ಕಿಲೋಮೀಟರ್ ಬೆಟ್ಟ ಪ್ರದೇಶದಲ್ಲಿ ಭೀಕರ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು, ಇದರ ಶಮನಕ್ಕೆ ಭಾರತೀಯ ವಾಯುಪಡೆಯ ನೆರವು ಕೋರಲಾಗಿದೆ.

ಬೆಂಕಿ ನಂದಿಸುವ ಪ್ರಯತ್ನದಲ್ಲಿ ಸಹಕರಿಸಲು ವಾಯುಪಡೆಯ ಎರಡು ಹೆಲಿಕಾಪ್ಟರ್ ಗಳನ್ನು ಕಳುಹಿಸಲು ಅಧಿಕಾರಿಗಳು ಕೋರಿದ್ದಾರೆ. ವನ್ಯಧಾಮದಲ್ಲಿ ಈಗಾಗಲೇ 600-700 ಹೆಕ್ಟೇರ್ ಅರಣ್ಯ ಕಾಳ್ಗಿಚ್ಚಿಗೆ ಆಹುತಿಯಾಗಿದ್ದು, ಬಲವಾದ ಗಾಳಿ ಮತ್ತು ಬಿಸಿಲಿನ ಝಳ, ಕಾಳ್ಗಿಚ್ಚು ಶಮನಕ್ಕೆ ಅಡ್ಡಿಯಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿ ರವಿವಾರ ಕಾಳ್ಗಿಚ್ಚು ಶಮನಗೊಳಿಸಿರುವುದಾಗಿ ಹೇಳಿದ್ದರು. ಆದರೆ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಮತ್ತಷ್ಟು ವ್ಯಾಪಕ ಪ್ರದೇಶಕ್ಕೆ ವ್ಯಾಪಿಸಿದೆ. ಎರಡು ಮರಿಗಳೊಂದಿಗೆ ಹೆಣ್ಣು ಹುಲಿ ಇರುವ ಭೂಪ್ರದೇಶದ ವ್ಯಾಪ್ತಿಗೂ ಸೋಮವಾರ ಸಂಜೆ ವೇಳೆಗೆ ಬೆಂಕಿ ಹರಡಿದೆ. ಹುಲಿ ಹಾಗೂ ಮರಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಹೆಚ್ಚುತ್ತಿರುವ ಬೆಂಕಿಯ ಕೆನ್ನಾಲಿಗೆಯನ್ನು ತಡೆಯಲು ಅಗ್ನಿಶಾಮಕ ಸಿಬ್ಬಂದಿ ಫೈರ್‍ಬ್ರೇಕ್ ಮತ್ತು ಇತರ ವಿಧಾನಗಳ ಮೂಲಕ ಹರಸಾಹಸ ಮಾಡುತ್ತಿದ್ದಾರೆ. ಅಲ್ವಾರ್ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿರುವ ಭಾರತೀಯ ವಾಯುಪಡೆ, ಎರಡು ಎಂಐ-17 ವಿ5 ಹೆಲಿಕಾಪ್ಟರ್ ಗಳನ್ನು 'ಬಂಬಿ ಬಕೆಟ್' ಕಾರ್ಯಾಚರನೆಗೆ ಕಳುಹಿಸಿಕೊಟ್ಟಿದೆ. ಈ ಕಾರ್ಯಾಚರಣೆಯಡಿ ನದಿ ಅಥವಾ ಸರೋವರದಿಂದ ನೀರನ್ನು ಮೊಗೆಯುವ ಹೆಲಿಕಾಪ್ಟರ್‍ಗಳು, ಕೇಬಲ್‍ಗೆ ಅಳವಡಿಸಿದ ಬಕೆಟ್‍ಗಳ ಮೂಲಕ ಬೆಂಕಿ ಹರಡುತ್ತಿರುವ ಪ್ರದೇಶಕ್ಕೆ ಸುರಿಯತ್ತವೆ.

ಹೆಲಿಕಾಪ್ಟರ್ ಗಳು 20 ಬಾರಿ ಇಂಥ ಕಾರ್ಯಾಚರಣೆ ನಡೆಸಿದ್ದು, 60 ಸಾವಿರ ಲೀಟರ್ ನೀರನ್ನು ಕಾಳ್ಗಿಚ್ಚು ಹರಡಿರುವ ಅರಣ್ಯದಲ್ಲಿ ಸುರಿದಿವೆ ಎಂದು ಅರಣ್ಯ ಇಲಾಖೆ ಹೇಳಿದೆ. ಬೆಟ್ಟ ಪ್ರದೇಶದಲ್ಲಿ ಬೆಂಕಿಯನ್ನು ನಂದಿಸಲಾಗಿದ್ದು, ಸುಮಾರು 200 ಮಂದಿ ಅರಣ್ಯ ಸಿಬ್ಬಂದಿ ಮತ್ತು ಪ್ರಕೃತಿ ಗೈಡ್‍ಗಳು, ಗ್ರಾಮಸ್ಥರು ಬೆಂಕಿ ನಂದಿಸಲು ಅವಿರತವಾಗಿ ಶ್ರಮಿಸುತ್ತಿದ್ದಾರೆ ಎಂದು ಸರಿಸ್ಕಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರ್.ಎನ್.ಮೀನಾ ಹೇಳಿದ್ದಾರೆ.

ಬೆಂಕಿ ಇದೀಗ ಸಂಪೂರ್ಣ ನಿಯಂತ್ರಣದಲ್ಲಿದ್ದು, ಬುಧವಾರ ವೇಳೆಗೆ ಸಂಪೂರ್ಣ ಶಮನಗೊಳ್ಳುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X