Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಲಾಲ್ ಆಹಾರ 'ಆರ್ಥಿಕ ಜಿಹಾದ್' ಎಂದ...

ಹಲಾಲ್ ಆಹಾರ 'ಆರ್ಥಿಕ ಜಿಹಾದ್' ಎಂದ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ30 March 2022 8:59 AM IST
share
ಹಲಾಲ್ ಆಹಾರ ಆರ್ಥಿಕ ಜಿಹಾದ್ ಎಂದ ಸಿ.ಟಿ.ರವಿ

ಬೆಂಗಳೂರು: ಕೆಲ ಬಲಪಂಥೀಯ ಸಂಘಟನೆಗಳು ಇದೀಗ ಹಲಾಲ್ ಮಾಂಸದ ನಿಷೇಧಕ್ಕೆ ಒತ್ತಾಯಿಸುತ್ತಿರುವ ನಡುವೆಯೇ, ಹಲಾಲ್ ಆಹಾರ "ಆರ್ಥಿಕ ಜಿಹಾದ್" ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದದ ಕಿಡಿ ಹೊತ್ತಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳು ಹಲಾಲ್ ಮಾಂಸವನ್ನು ಅದರಲ್ಲೂ ಮುಖ್ಯವಾಗಿ, ಹಿಂದೂ ಹೊಸ ವರ್ಷ ಆರಂಭದ ಸಂಕೇತವಾದ ಯುಗಾದಿ ಬಳಿಕ ಬಹಿಷ್ಕರಿಸಬೇಕು ಎಂದು ಕರೆ ನೀಡುವ ಸಂದೇಶಗಳು ವ್ಯಾಪಕವಾಗಿ ಹರಿದಾಡುತ್ತಿವೆ.

ಯುಗಾದಿಯ ಮರುದಿನ ಹಿಂದೂಗಳಲ್ಲಿ ಮಾಂಸಾಹಾರಿಗಳು ದೇವರಿಗೆ ಮಾಂಸ ನೈವೇದ್ಯ ಮಾಡುವ ಮೂಲಕ ಹೊಸ ವರ್ಷ ಆಚರಿಸುತ್ತಾರೆ. ಇದನ್ನು ನಿಲ್ಲಿಸುವಂತೆ ಬಲಪಂಥೀಯ ಸಂಘಟನೆಗಳು ಕರೆ ನೀಡುತ್ತಿವೆ. ದೇವಾಲಯಗಳಲ್ಲಿ ನಡೆಯುವ ಹಿಂದೂ ಧಾರ್ಮಿಕ ಜಾತ್ರೆಗಳ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ನಿಷೇಧಿಸಬೇಕು ಎಂಬ ಆಗ್ರಹದ ನಡುವೆಯೇ, ಮಾಂಸ ನಿಷೇಧದ ಕೂಗು ಕೇಳಿ ಬರುತ್ತಿದೆ.

"ಹಲಾಲ್ ಒಂದು ಆರ್ಥಿಕ ಜಿಹಾದ್. ಅಂದರೆ ಇದನ್ನು ಜಿಹಾದ್ ರೂಪದಲ್ಲಿ ಬಳಸಲಾಗುತ್ತದೆ. ಅಂದರೆ ಮುಸ್ಲಿಮರು ಇತರರ ಜತೆ ವಹಿವಾಟು ನಡೆಸಬಾರದು. ಹಲಾಲ್ ಮಾಂಸವನ್ನೇ ಬಳಸಬೇಕು ಎಂದು ಅವರು ಯೋಚಿಸುವುದಾದರೆ, ಅದನ್ನು ಬಳಸಬಾರದು ಎಂದು ಹೇಳುವುದರಲ್ಲಿ ತಪ್ಪೇನಿದೆ" ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ ಪ್ರಶ್ನಿಸಿದರು.

"ಅವರ ದೇವರಿಗೆ" ನೀಡುವ ಹಲಾಲ್ ಮಾಂಸ ಮುಸ್ಲಿಮರಿಗೆ ಪ್ರೀತಿ. ಆದರೆ ಹಿಂದೂಗಳಿಗೆ ಅದು ಕೆಲವರು ಬಿಟ್ಟ ಆಹಾರ. ಮುಸ್ಲಿಮರಿಂದ ಮಾತ್ರವೇ ಉತ್ಪನ್ನಗಳನ್ನು ಖರೀದಿಸಬೇಕು ಎಂದು ಮಾಡುವ ಸಲುವಾಗಿ ಯೋಜಿತವಾಗಿ ಹಲಾಲ್ ಮಾರಾಟ ಮಾಡಲಾಗುತ್ತಿದೆ. ಮುಸ್ಲಿಮರು ಹಿಂದೂಗಳಿಂದ ಮಾಂಸ ಖರೀದಿಸಲು ನಿರಾಕರಿಸುವುದಾದರೆ, ಹಿಂದೂಗಳು ತಮ್ಮಿಂದ ಖರೀದಿಸಬೇಕು ಎಂದು ಏಕೆ ಒತ್ತಾಯಿಸುತ್ತೀರಿ? ಇದನ್ನು ಕೇಳಲು ಜನರಿಗೆ ಯಾವ ಹಕ್ಕು ಇದೆ ಎಂದು ರವಿ ಕೇಳಿದರು.

ವ್ಯಾಪಾರ ಪದ್ಧತಿಗಳು ದ್ವಿಮುಖವಾಗಿರಬೇಕೇ ವಿನಃ ಏಕಮುಖವಾಗಿರಬಾರದು. ಮುಸ್ಲಿಮರು ಹಲಾಲ್ ಹೊರತುಪಡಿಸಿದ ಮಾಂಸ ತಿನ್ನಲು ಒಪ್ಪಿದರೆ, ಬಳಿಕ ಹಿಂದೂಗಳು ಕೂಡಾ ಹಲಾಲ್ ಮಾಂಸ ಬಳಸುತ್ತಾರೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X