Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅಪಾಯ ಆಹ್ವಾನಿಸುತ್ತಿರುವ ಹಳೆಯಂಗಡಿ...

ಅಪಾಯ ಆಹ್ವಾನಿಸುತ್ತಿರುವ ಹಳೆಯಂಗಡಿ ಪೇಟೆ: ನಾಗರಿಕರ ಆತಂಕ, ಸೂಕ್ತ ಕ್ರಮಕ್ಕೆ ಆಗ್ರಹ

► ವಾಹನಗಳ ಮುಕ್ತ ಸಂಚಾರಕ್ಕೆ ಹೆದ್ದಾರಿಯಲ್ಲಿ ಅಡಚಣೆ ► ಹೆದ್ದಾರಿ ದಾಟಲು ಪರದಾಡುವ ವಿದ್ಯಾರ್ಥಿಗಳು, ಸಾರ್ವಜನಿಕರು

ರಹ್ಮಾನ್ ಹಳೆಯಂಗಡಿರಹ್ಮಾನ್ ಹಳೆಯಂಗಡಿ30 March 2022 11:51 AM IST
share
ಅಪಾಯ ಆಹ್ವಾನಿಸುತ್ತಿರುವ ಹಳೆಯಂಗಡಿ ಪೇಟೆ: ನಾಗರಿಕರ ಆತಂಕ, ಸೂಕ್ತ ಕ್ರಮಕ್ಕೆ ಆಗ್ರಹ

ಹಳೆಯಂಗಡಿ, ಮಾ.29: ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗಿರುವ ಹಳೆಯಂಗಡಿ ಪೇಟೆ ಇತ್ತೀಚಿನ ದಿನಗಳಲ್ಲಿ ಅಪಘಾತಗಳನ್ನು ಆಹ್ವಾನಿಸುವ ಕೇಂದ್ರವಾಗಿ ಮಾರ್ಪಡುತ್ತಿದೆ.

ಇಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಒಂದು ಬದಿಯಿಂದ ಕಿನ್ನಿಗೋಳಿ-ಕಟೀಲು ಸೇರಿದಂತೆ ಮೂಡುಬಿದಿರೆ ಕಡೆಗೆ ಹೋಗುವ ಕಡಿದಾದ ಮಾರ್ಗವಿದ್ದು, ಇನ್ನೊಂದು ಬದಿಯಿಂದ ಹಳೆಯಂಗಡಿ ಪೇಟೆಗೆ ಸಂಚರಿಸುವ ಮಾರ್ಗವಿದೆ.

ರಾಷ್ಟ್ರೀಯ ಹೆದ್ದಾರಿಯ ವಾಹನ ದಟ್ಟಣೆಯಿಂದಾಗಿ ಕಟೀಲು, ಕಿನ್ನಿಗೋಳಿ ಕಡೆ ಮತ್ತು ಹಳೆಯಂಗಡಿ ಪೇಟೆಗೆ ತೆರಳುವ ವಾಹನ ಸವಾರರು ಮತ್ತು ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿಯನ್ನು ದಾಟಲು ಹರಸಾಹಸವನ್ನೇ ಮಾಡಬೇಕಾಗಿದೆ ಎಂದು ಸವಾರರು ಅಸಹಾಯಕತೆ ವ್ಯಕ್ತಪಡಿಸುತ್ತಾರೆ.

ಅಲ್ಲದೆ ಈ ಭಾಗದಲ್ಲಿ ಪ್ರಾರ್ಥಮಿಕ, ಪದವಿ ಶಾಲೆಗಳಿದ್ದು, ವಿದ್ಯಾರ್ಥಿಗಳು ಹೆದರಿಕೊಂಡೇ ರಸ್ತೆ ದಾಟಬೇಕಾದ ಸ್ಥಿತಿಯಿದೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಪೇಟೆಯಲ್ಲಿ ಸಂಚರಿಸುವುದು ಅಸಾಧ್ಯವಾಗಿರುವ ಇಂತಹ ಪರಿಸ್ಥಿತಿಯಲ್ಲಿ ಪೊಲೀಸ್ ಇಲಾಖೆಯಾಗಲೀ, ಹಳೆಯಂಗಡಿ ಗ್ರಾಪಂ ಆಗಲಿ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸಕ್ಕೆ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

 ಪೊಲೀಸ್ ಇಲಾಖೆ ರಾಷ್ಟ್ರೀಯ ಹೆದ್ದಾರಿಗೆ ಬ್ಯಾರಿಕೇಡ್‌ಗಳನ್ನು ಹಾಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ವೇಗಕ್ಕೆ ಕಡಿವಾಣ ಹಾಕಿದೆಯಾದರೂ, ಕನಿಷ್ಠ ಓರ್ವ ಪೊಲೀಸ್ ಸಿಬ್ಬಂದಿಯನ್ನು ನೇಮಿಸಿ ಸಾರ್ವಜನಿಕರು ಸುಸೂತ್ರವಾಗಿ ರಸ್ತೆ ದಾಟುವಂತಾಗಲು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕರು ಪೊಲೀಸ್ ಇಲಾಖೆಯ ನಿರ್ಲಕ್ಷತನಕ್ಕೆ ಅಸಮಾಧಾನ ವ್ಯಕ್ತಡಿಸಿದ್ದಾರೆ.

ಖಾಸಗಿ ಬಸ್‌ಗಳಿಂದ ಸಂಚಾರಕ್ಕೆ ಅಡ್ಡಿ: ಮಂಗಳೂರಿನಿಂದ ಕಿನ್ನಿಗೋಳಿ ಕಟೀಲು ಭಾಗಕ್ಕೆ ಸಂಚರಿಸುವ ಬಸ್‌ಗಳಿಗಾಗಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಬೃಹತ್ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಿದ್ದರೂ ಬಸ್‌ಗಳು ಕಿನ್ನಿಗೋಳಿ ಕಟೀಲಿಗೆ ತಿರುವು ಪಡೆಯುವ ಕಡಿದಾದ ರಸ್ತೆಯಲ್ಲಿ ಹೆದ್ದಾರಿಗೆ ತಾಗಿಕೊಂಡಂತೆ ನಿಲ್ಲಿಸುತ್ತಿದ್ದು, ವಾಹನಗಳು ಮತ್ತು ಪಾದಚಾರಿಗಳಿಗೆ ಸಮಸ್ಯೆ ಉಂಟು ಮಾಡುತ್ತಿದೆ. ಈ ಬಗ್ಗೆ ಟ್ರಾಫಿಕ್ ಪೊಲೀಸರಿಗೆ ಮಾಹಿತಿ ನೀಡಿ ಸಮಸ್ಯೆ ಪರಿಹಾರಕ್ಕೆ ವಿನಂತಿಸಿಕೊಂಡರೆ, ಎರಡು ಮೂರು ದಿನ ಸಂಚಾರದಟ್ಟಣೆ ನಿಭಾಯಿಸಲು ಪೊಲೀಸರನ್ನು ನಿಯೋಜಿಸಲಾಗುತ್ತದೆ. ಆ ಬಳಿಕ ಪೊಲೀಸರು ನಾಪತ್ತೆಯಾಗುತ್ತಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.

ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಸುಸಜ್ಜಿತವಾದ ಬಸ್‌ಬೇ ಇದ್ದರೂ ಕೂಡ ಕಿನ್ನಿಗೋಳಿ ಕಡೆಗೆ ತೆರಳುವ ಬಸ್‌ಗಳು ಪಕ್ಷಿಕೆರೆ ತೆರಳುವ ಕಿರಿದಾದ ರಸ್ತೆಯಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸುವುದರಿಂದ ಹಿಂದಿನಿಂದ ಬರುವ ವಾಹನಗಳು ಅನಿವಾರ್ಯವಾಗಿ ರಾಷ್ಟ್ರೀಯ ಹೆದ್ದಾರಿಯ ಮಧ್ಯದಲ್ಲಿ ನಿಲ್ಲಿಸಿ ಕೆಲಕಾಲ ಹೆದ್ದಾರಿ ವಾಹನ ಸಂಚಾರಕ್ಕೆ ತಡೆಯಾಗು ವುದರ ಜೊತೆಗೆ ಸಾರ್ವಜನಿಕರು ರಸ್ತೆ ದಾಟುವುದಕ್ಕೆ ಪರದಾಡಬೇಕಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ ಅದ್ದಿ ಬೊಳ್ಳೂರು ಆರೋಪಿಸಿದ್ದಾರೆ.

ಮುಂದಿನ ದಿನಗಳಲ್ಲಾದರೂ ಪೊಲೀಸ್ ಇಲಾಖೆ, ಹೆದ್ದಾರಿ ಪ್ರಾಧಿಕಾರ ಸುಗಮ ವಾಹನ ಸಂಚಾರಕ್ಕೆ ಮತ್ತು ಪಾದಚಾರಿಗಳು ರಸ್ತೆದಾಟಲು ಸಹಕಾರಿಯಾಗುವಂತೆ ಸೂಕ್ತಕ್ರಮ ಕೈಗೊಳ್ಳ ಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

ಹಳೆಯಂಗಡಿ ಪೇಟೆಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಸಧ್ಯ ರಾ.ಹೆ.ಗೆ ಬ್ಯಾರಿಕೇಟ್‌ಗಳನ್ನು ಅಳವಡಿಸಿ ವಾಹನಗಳ ವೇಗವನ್ನು ಕಡಿಮೆ ಮಾಡಿ ಕಳುಹಿಸುವ ಕೆಲಸ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆಯಲ್ಲಿ ಸಮಸ್ಯೆಯನ್ನು ಮನದಟ್ಟು ಮಾಡಿಸಿ ಸೂಕ್ತ ಕ್ರಮವಹಿಸಲಾಗುವುದು.

 ನಾಗರಾಜ್, ಎಸಿಪಿ ಟ್ರಾಫಿಕ್ ವಿಭಾಗ

ಈ ಬಗ್ಗೆ ಸಾರ್ವಜನಿಕರಿಂದ ಯಾವುದೇ ದೂರುಗಳು ಬಂದಿಲ್ಲ. ಗ್ರಾಪಂನ ಮುಂದಿನ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಪಂಚಾಯತ್ ವತಿಯಿಂದ ಕೈಗೊಳ್ಳಬಹುದಾದ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು.

 ಪೂರ್ಣಿಮಾ, ಹಳೆಯಂಗಡಿ ಗ್ರಾಪಂ ಅಧ್ಯಕ್ಷೆ

share
ರಹ್ಮಾನ್ ಹಳೆಯಂಗಡಿ
ರಹ್ಮಾನ್ ಹಳೆಯಂಗಡಿ
Next Story
X