Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊಂಕಣ ರೈಲ್ವೆ: ಮುಂಬೈ-ಮಂಗಳೂರು ಮಾರ್ಗದ...

ಕೊಂಕಣ ರೈಲ್ವೆ: ಮುಂಬೈ-ಮಂಗಳೂರು ಮಾರ್ಗದ ವಿದ್ಯುದ್ದೀಕರಣ ಪೂರ್ಣ

ವಾರ್ತಾಭಾರತಿವಾರ್ತಾಭಾರತಿ30 March 2022 7:31 PM IST
share
ಕೊಂಕಣ ರೈಲ್ವೆ: ಮುಂಬೈ-ಮಂಗಳೂರು ಮಾರ್ಗದ ವಿದ್ಯುದ್ದೀಕರಣ ಪೂರ್ಣ

ಉಡುಪಿ : ಕರಾವಳಿ ಕರ್ನಾಟಕದ ಪ್ರಮುಖ ರೈಲ್ವೆ ಯೋಜನೆಯಾದ ಕೊಂಕಣ ರೈಲು ಮಾರ್ಗ ಇದೀಗ ಶೇ.100ರಷ್ಟು ವಿದ್ಯುದ್ದೀಕರಣಗೊಂಡಿದ್ದು, ಶೀಘ್ರವೇ ಈ ಮಾರ್ಗದಲ್ಲಿ ಮುಂಬೈ (ರೋಹಾ) ಮತ್ತು ಮಂಗಳೂರು (ತೋಕೂರು) ನಡುವೆ ನಿಗಮದ ರೈಲು ಗಳು ವಿದ್ಯುಚ್ಛಕ್ತಿ ಮೂಲಕವೇ ಸಂಚರಿಸಲು ತೊಡಗಲಿವೆ.

ಈ ಮೂಲಕ ಪರಿಸರ ಸ್ನೇಹಿಯಾದ ಇಡೀ ಬ್ರಾಡ್‌ಗೇಜ್ ಮಾರ್ಗವನ್ನು ವಿದ್ಯುದ್ದೀಕರಣಗೊಳಿಸುವ ತಮ್ಮ ಮಿಷನ್‌ನ್ನು ಭಾರತೀಯ ರೈಲ್ವೆ ಸಾಕಾರಗೊಳಿಸಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ರೈಲುಗಳನ್ನು ವಿದ್ಯುಚ್ಛಕ್ತಿಯಲ್ಲಿ ನಡೆಸುವ ಮೂಲಕ ಶೂನ್ಯ ಇಂಗಾಲದ ಹೊರಸೂಸುವಿಕೆಯೊಂದಿಗೆ ಓಡಿಸುವ ತಮ್ಮ ಗುರಿಯನ್ನೂ ಸಾಧಿಸಿದಂತಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮುಂಬೈ ಸಮೀಪದ ರೋಹಾದಿಂದ ಮಂಗಳೂರು ಸಮೀಪದ ತೋಕೂರುವರೆಗಿನ 741ಕಿ.ಮೀ. ಉದ್ದದ ಕೊಂಕಣ ರೈಲ್ವೆ ಮಾರ್ಗವನ್ನು ವಿದ್ಯುದ್ದೀಕರಣಗೊಳಿಸುವ ಕಾಮಗಾರಿಗೆ 2015ರ ನವೆಂಬರ್ ತಿಂಗಳಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಈ ಕಾಮಗಾರಿಯನ್ನು ಇದೀಗ 1287 ಕೋಟಿ ರೂ.ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ.

ಇಡೀ ಕೊಂಕಣ ರೈಲ್ವೆ ಮಾರ್ಗದ ಸಿಆರ್‌ಎಸ್ ಪರಿಶೀಲನೆಯನ್ನು 2020ರ ಮಾರ್ಚ್ ತಿಂಗಳಿನಿಂದ ಒಟ್ಟು ಆರು ಹಂತಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಕೊನೆಯ ಹಂತದ ಪರೀಕ್ಷೆಯನ್ನು ಮಹಾರಾಷ್ಟ್ರದ ರತ್ನಗಿರಿ ಮತ್ತು ಗೋವಾದ ಥೀವಿಮ್ ವಿಭಾಗದ ನಡುವೆ ಕಳೆದ ಮಾ.24ರಂದು ನಡೆಸಲಾಗಿದ್ದು, ಇದಕ್ಕೆ ಮಾ.28ರಂದು ಅಧಿಕಾರ ಪತ್ರವನ್ನು ಪಡೆಯಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ವಿದ್ಯುದ್ದೀಕರಣ ಕಾಮಗಾರಿಯನ್ನು 2021ರ ಡಿಸೆಂಬರ್ ತಿಂಗಳಲ್ಲಿ ಮುಗಿಸಬೇಕಿತ್ತು. ಆದರೆ ಮಾರ್ಗ ಸಾಗುವ ಪಶ್ಚಿಮ ಘಟ್ಟದ ದುರ್ಗಮ ಪರಿಸರ, ಕೋವಿಡ್ ಸಾಂಕ್ರಾಮಿಕ ರೋಗ, ಬಿಡದೇ ಸುರಿಯುವ ಮಳೆ ಹಾಗೂ ಪ್ರವಾಹ ದಂಥ ಕಾರಣಗಳಿಂದ ವಿಳಂಬವಾಗಿತ್ತು. ಕೆಲವು ಸಂದರ್ಭದಲ್ಲಿ ಕಾಮಗಾರಿಯನ್ನು ನಡೆಸಲು ವಿಶೇಷ ವ್ಯವಸ್ಥೆಗಳನ್ನು ಮಾಡಬೇಕಾಗಿತ್ತು.

ಈ ಎಲ್ಲಾ ಸವಾಲುಗಳನ್ನು ಎದುರಿಸಿ ಯಶಸ್ವಿಯಾಗಿ ಪೂರ್ಣಗೊಳಿಸಿರುವ ಈ ಕಾಮಗಾರಿಯಿಂದ ನಿಗಮಕ್ಕೆ ಹಲವು ರೂಪದಲ್ಲಿ ಭಾರೀ ಲಾಭವಿದೆ. ಮೊದಲನೇಯದಾಗಿ ಇಂಧನದಿಂದಾಗಿಯೇ 150 ಕೋಟಿ ರೂ.ಗಳಿಗೂ ಅಧಿಕ ಉಳಿತಾಯ ವಾಗಲಿದೆ. ಪಶ್ಚಿಮ ಘಟ್ಟ ಪರಿಸರದ ಮಟ್ಟಿಗೆ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು, ವಿದ್ಯುದ್ದೀಕರಣದಿಂದಾಗಿ ಇಲ್ಲಿ ಮಾಲಿನ್ಯ ರಹಿತ ಸಂಚಾರ ಸಾಧ್ಯವಾಗಲಿದೆ. ಅಲ್ಲದೇ ಎಚ್‌ಎಸ್‌ಡಿ ತೈಲದ ಮೇಲಿನ ಅವಲಂಬನೆಯೂ ಇಳಿಯಲಿದೆ.

ತೋಕೂರಿನಿಂದ ಉಡುಪಿ ಜಿಲ್ಲೆಯ ಬಿಜೂರುವರೆಗಿನ 105 ಕಿ.ಮೀ. ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ 2021ರ ಮಾರ್ಚ್‌ನಲ್ಲಿ ಪೂರ್ಣಗೊಂಡಿತ್ತು. ಕೊನೆಯದಾಗಿ ರತ್ನಗಿರಿಯಿಂದ ಗೋವಾದ ಥಿವಿಮ್ ನಡುವಿನ 194ಕಿ.ಮೀ. ಮಾರ್ಗದ ವಿದ್ಯುದ್ದೀಕರಣ ಮಾ.24ಕ್ಕೆ ಮುಕ್ತಾಯಗೊಂಡು ಮಾ.28ರಂದು ಸಂಚಾರಕ್ಕೆಹಸಿರುನಿಶಾನೆ ದೊರಕಿತ್ತು.

ಕಾರವಾರದಿಂದ ಮಂಗಳೂರು ನಡುವೆ ಸಂಚರಿಸುವ ರೈಲು ಇದೀಗ ವಿದ್ಯುಚ್ಛಕ್ತಿ ಸಹಾಯದಿಂದಲೇ ಸಂಚರಿಸುತ್ತಿದೆ. ಈ ಮಾರ್ಗದಲ್ಲಿ ರೈಲುಗಳು ಗಂಟೆಗೆ 120ಕಿ.ಮೀ. ವೇಗದಲ್ಲಿ ಸಂಚರಿಸಲಿವೆ. ವಿದ್ಯುದ್ದೀಕರಣದಿಂದಾಗಿ ಶೀಘ್ರವೇ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಂದ ಇನ್ನು ಚುಕುಬುಕು ಸದ್ದು ಕೇಳಿಬರಲಾರದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X