Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೆದರಿಕೆ ಈಗಲೂ ಮುಗಿದಿಲ್ಲ: ಅಮೆರಿಕ...

ಬೆದರಿಕೆ ಈಗಲೂ ಮುಗಿದಿಲ್ಲ: ಅಮೆರಿಕ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ30 March 2022 11:37 PM IST
share
ಬೆದರಿಕೆ ಈಗಲೂ ಮುಗಿದಿಲ್ಲ: ಅಮೆರಿಕ ಎಚ್ಚರಿಕೆ

ಕೀವ್, ಮಾ.30: ಉಕ್ರೇನ್ ರಾಜಧಾನಿ ಕೀವ್ ಹಾಗೂ ಇತರ ಪ್ರದೇಶಗಳಲ್ಲಿ ಸೇನೆಯ ಕಾರ್ಯಾಚರಣೆಯನ್ನು ಕಡಿಮೆಗೊಳಿಸುವ ರಶ್ಯದ ವಾಗ್ದಾನದ ಬಗ್ಗೆ ಎಚ್ಚರಿಕೆಯ ಪ್ರತಿಕ್ರಿಯೆ ನೀಡಿರುವ ಪಾಶ್ಚಿಮಾತ್ಯ ದೇಶಗಳು, ಇದು ಉಕ್ರೇನ್ನ ಇತರ ಭಾಗಗಳಲ್ಲಿ ಸೇನಾ ಕಾರ್ಯಾಚರಣೆ ನಡೆಸುವ ಸೂಚನೆಯಾಗಿರಬಹುದು ಎಂದಿವೆ.

ಟರ್ಕಿಯ ರಾಜಧಾನಿ ಇಸ್ತಾನ್‌ಬುಲ್‌ನಲ್ಲಿ ರಶ್ಯ-ಉಕ್ರೇನ್ ನಿಯೋಗದ ಮಧ್ಯೆ ನಡೆದ ಸಂಧಾನ ಮಾತುಕತೆಯ ಬಳಿಕ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ರಶ್ಯದ ಸಹಾಯಕ ರಕ್ಷಣಾ ಸಚಿವ ಅಲೆಕ್ಸಾಂಡರ್ ಫೊಮಿನ್, ಪರಸ್ಪರ ವಿಶ್ವಾಸ ವೃದ್ಧಿಸಲು ಮತ್ತು ಮತ್ತಷ್ಟು ಮಾತುಕತೆಗೆ ಸೂಕ್ತ ವಾತಾವರಣ ನಿರ್ಮಿಸಲು ಹಾಗೂ ಈ ಮೂಲಕ ಒಪ್ಪಂದ ಸಾಧಿಸುವ ಅಂತಿಮ ಉದ್ದೇಶಕ್ಕೆ ಪೂರಕವಾಗಿ ಕೀವ್ ಹಾಗೂ ಚೆರ್ನಿಹಿವ್ನಲ್ಲಿ ಸೈನಿಕ ಕಾರ್ಯಾಚರಣೆಯನ್ನು ಕಡಿಮೆಗೊಳಿಸಲು ನಿರ್ಧರಿಸಲಾಗಿದೆ ಎಂದಿದ್ದರು. ಆದರೆ ಸಂಘರ್ಷ ತೀವ್ರಗೊಂಡಿರುವ ಇತರ ಪ್ರದೇಶಗಳಾದ ಮರಿಯುಪೋಲ್, ಸುಮಿ, ಖಾರ್ಕಿವ್, ಖೆರ್ಸಾನ್, ಮಿಕೊಲಯಿವ್ ಪ್ರಾಂತಗಳ ಬಗ್ಗೆ ಅವರು ಯಾವುದೇ ಉಲ್ಲೇಖ ಮಾಡಿಲ್ಲ.ಕೀವ್ ಹಾಗೂ ಸುತ್ತಮುತ್ತಲ ಪ್ರದೇಶದಿಂದ ಅತ್ಯಲ್ಪ ಪ್ರಮಾಣದಲ್ಲಿ ತುಕಡಿಯನ್ನು ಹಿಂದಕ್ಕೆ ಕರೆಸಿಕೊಳ್ಳಲು ಆರಂಭಿಸಿದೆ. ರಶ್ಯದ ಈ ನಡೆ ಯುದ್ಧದಿಂದ ಹಿಂದೆ ಸರಿಯುವ ಬದಲು, ಸ್ಥಾನ ಬದಲಾಯಿಸುವ ಪ್ರಕ್ರಿಯೆಯಾಗಿದೆ ಎಂದು ಅಮೆರಿಕದ ರಕ್ಷಣಾ ಇಲಾಖೆ ಬುಧವಾರ ಪ್ರತಿಕ್ರಿಯಿಸಿದೆ. ಬೆದರಿಕೆ ಇನ್ನೂ ಅಂತ್ಯಗೊಂಡಿಲ್ಲ. ಉಕ್ರೇನ್‌ನ ಇತರ ಭಾಗಗಳಲ್ಲಿ ಹೆಚ್ಚಿನ ಆಕ್ರಮಣ ವೀಕ್ಷಿಸಲು ನಾವೆಲ್ಲಾ ಸಿದ್ಧರಾಗಬೇಕಿದೆ. ಕೀವ್‌ಗೆ ಎದುರಾಗಿರುವ ಬೆದರಿಕೆ ಇನ್ನೂ ಮುಗಿದಿಲ್ಲ ಎಂದು ಪೆಂಟಗಾನ್ನ ವಕ್ತಾರ ಜಾನ್ ಕಿರ್ಬಿ ಹೇಳಿದ್ದಾರೆ.

ರಶ್ಯ ತನ್ನ ಆಕ್ರಮಣವನ್ನು ಉಕ್ರೇನ್‌ನ ಉತ್ತರಪ್ರಾಂತದ ಬದಲು ಪೂರ್ವದ ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ ಪ್ರಾಂತದತ್ತ ತಿರುಗಿಸಿರುವ ಲಕ್ಷಣವಿದೆ ಎಂದು ಬ್ರಿಟನ್ನ ರಕ್ಷಣಾ ಇಲಾಖೆ ಪ್ರತಿಕ್ರಿಯಿಸಿದೆ. ಡೊನೆಟ್ಸ್ಕ್ ಸ್ವಲ್ಪ ಭಾಗ ರಶ್ಯ ಬೆಂಬಲಿತ ಪ್ರತ್ಯೇಕತಾವಾದಿಗಳ ನಿಯಂತ್ರಣದಲ್ಲಿದೆ. ಡೊನೆಟ್ಸ್ಕ್ ಪ್ರಾಂತವನ್ನು ಪೂರ್ಣವಾಗಿ ಉಕ್ರೇನ್‌ನಿಂದ ಬೇರ್ಪಡಿಸುವುದು ರಶ್ಯದ ಯೋಜನೆಯಾಗಿದೆ ಎಂದು ಪಾಶ್ಚಿಮಾತ್ಯ ದೇಶಗಳು ಪ್ರತಿಪಾದಿಸುತ್ತಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ, ಉಕ್ರೇನಿಯನ್ನರು ಭೋಳೆ ಸ್ವಭಾವದವರಲ್ಲ. ಈ 34 ದಿನಗಳ ಆಕ್ರಮಣದಲ್ಲಿ ಮತ್ತು ಡೊನ್ಬಾಸ್ ಪ್ರಾಂತದಲ್ಲಿ ಕಳೆದ 8 ವರ್ಷಗಳಿಂದ ನಡೆಯುತ್ತಿರುವ ಯುದ್ಧದಲ್ಲಿ ಉಕ್ರೇನಿಯನ್ನರು ಫಲಿತಾಂಶದ ಮೇಲೆ ವಿಶ್ವಾಸ ಇಡಬೇಕು ಎಂಬ ಒಂದು ವಿಷಯವನ್ನು ಕಲಿತುಕೊಂಡಿದ್ದಾರೆ’ ಎಂದು ಹೇಳಿದ್ದಾರೆ.ಕೀವ್ ಹಾಗೂ ಇತರ ಕೆಲ ಪ್ರದೇಶದಲ್ಲಿ ಸೇನಾ ಚಟುವಟಿಕೆ ಕಡಿಮೆಗೊಳಿಸುವ ರಶ್ಯದ ಭರವಸೆ ಬಹುಷಃ ಸೈನಿಕರನ್ನು ವರ್ಗಾಯಿಸಲು ಮತ್ತು ಜಗತ್ತನ್ನು ದಾರಿತಪ್ಪಿಸುವ ಗುರಿ ಹೊಂದಿದೆ ಎಂದು ಉಕ್ರೇನ್ನ ರಕ್ಷಣಾ ಪಡೆಯ ಮುಖ್ಯಸ್ಥರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X