Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಶಾನ್ಯ ಭಾರತ: ಹಲವಾರು ಸ್ಥಳಗಳಿಂದ...

ಈಶಾನ್ಯ ಭಾರತ: ಹಲವಾರು ಸ್ಥಳಗಳಿಂದ ವಿವಾದಾತ್ಮಕ ಅಫ್‌ಸ್ಪಾ ಕಾಯ್ದೆ ಹಿಂದೆಗೆತ

ವಾರ್ತಾಭಾರತಿವಾರ್ತಾಭಾರತಿ31 March 2022 8:40 PM IST
share
ಈಶಾನ್ಯ ಭಾರತ: ಹಲವಾರು ಸ್ಥಳಗಳಿಂದ ವಿವಾದಾತ್ಮಕ ಅಫ್‌ಸ್ಪಾ ಕಾಯ್ದೆ ಹಿಂದೆಗೆತ

ಹೊಸದಿಲ್ಲಿ,ಮಾ.31: ಈಶಾನ್ಯ ರಾಜ್ಯಗಳ ಜನರ ಬೇಡಿಕೆಯಂತೆ ದಶಕಗಳ ಬಳಿಕ ನಾಗಾಲ್ಯಾಂಡ್,ಅಸ್ಸಾಂ ಮತ್ತು ಮಣಿಪುರಗಳಲ್ಲಿ ವಿವಾದಾತ್ಮಕ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ (ಅಫ್‌ಸ್ಪಾ) ಯಡಿಯ ಪ್ರದೇಶಗಳನ್ನು ಕಡಿಮೆಗೊಳಿಸಲಾಗಿದೆ ಎಂದು ಗೃಹಸಚಿವ ಅಮಿತ್ ಶಾ ಅವರು ಗುರುವಾರ ಪ್ರಕಟಿಸಿದ್ದಾರೆ.

ಅಸ್ಸಾಮಿನ 23 ಜಿಲ್ಲೆಗಳಿಂದ ಸಂಪೂರ್ಣವಾಗಿ ಮತ್ತು ಒಂದು ಜಿಲ್ಲೆಯಿಂದ ಭಾಗಶಃ,ಮಣಿಪುರದ ಆರು ಜಿಲ್ಲೆಗಳ 15 ಪೊಲೀಸ್ ಠಾಣೆಗಳು ಮತ್ತು ನಾಗಾಲ್ಯಾಂಡ್‌ನ ಏಳು ಜಿಲ್ಲೆಗಳ 15 ಪೊಲೀಸ್ ಠಾಣೆಗಳ ವ್ಯಾಪ್ತಿಯಿಂದ ಅಫ್‌ಸ್ಪಾವನ್ನು ಹಿಂದೆಗೆದುಕೊಳ್ಳಲಾಗಿದೆ.

ಈ ಕ್ರಮದ ಹೆಗ್ಗಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ ಶಾ,ಈಶಾನ್ಯ ಭಾರತದಲ್ಲಿ ಬಂಡಾಯವನ್ನು ಅಂತ್ಯಗೊಳಿಸಲು ಮತ್ತು ಶಾಶ್ವತ ಶಾಂತಿಯನ್ನು ಮರಳಿ ತರಲು ನಡೆಸಲಾದ ನಿರಂತರ ಪ್ರಯತ್ನಗಳು ಮತ್ತು ಹಲವಾರು ಒಪ್ಪಂದಗಳಿಂದಾಗಿ ಭದ್ರತಾ ಸ್ಥಿತಿಯು ಉತ್ತಮಗೊಂಡಿರುವುದು ಹಾಗೂ ಅಭಿವೃದ್ಧಿ ಕಾರ್ಯಗಳು ವೇಗ ಪಡೆದುಕೊಂಡಿರುವುದು ಇದನ್ನು ಸಾಧ್ಯವಾಗಿಸಿವೆ ಎಂದು ಹೇಳಿದರು.

ಪ್ರದೇಶದ ಜನರನ್ನು ಅಭಿನಂದಿಸಿದ ಶಾ ಹಿಂದಿನ ಸರಕಾರಗಳ ವಿರುದ್ಧ ವಾಗ್ದಾಳಿಯನ್ನೂ ನಡೆಸಿದರು. ದಶಕಗಳ ಕಾಲ ಈಶಾನ್ಯ ಭಾರತವನ್ನು ನಿರ್ಲಕ್ಷಿಸಲಾಗಿತ್ತು ಮತ್ತು ಈಗ ಅದು ಶಾಂತಿ,ಸಮೃದ್ಧಿ ಮತ್ತು ಅಭೂತಪೂರ್ವ ಬೆಳವಣಿಗೆಯ ಹೊಸ ಯುಗಕ್ಕೆ ಸಾಕ್ಷಿಯಾಗುತ್ತಿದೆ ಎಂದರು.
‌
ಈ ಮೂರು ಬಂಡಾಯ ಪೀಡಿತ ರಾಜ್ಯಗಳಿಂದ ಅಫ್‌ಸ್ಪಾವನ್ನು ಸಂಪೂರ್ಣವಾಗಿ ಹಿಂದೆಗೆದುಕೊಳ್ಳಲಾಗಿಲ್ಲ ಮತ್ತು ಕೆಲವು ಪ್ರದೇಶಗಳಲ್ಲಿ ಅದು ಮುಂದುವರಿಯುತ್ತದೆ ಎಂದು ಗೃಹಸಚಿವಾಲಯದ ವಕ್ತಾರರನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ.

ಯಾವುದೇ ಪ್ರದೇಶದಲ್ಲಿ ಕಾರ್ಯಾಚರಣೆಗಳನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನೂ ಬಂಧಿಸಲು ಅಫ್‌ಸ್ಪಾ ಭದ್ರತಾ ಪಡೆಗಳಿಗೆ ಅಧಿಕಾರ ನೀಡುತ್ತದೆ. ಯಾವುದೇ ಕಾರ್ಯಚರಣೆಯಲ್ಲಿ ತಪ್ಪುಗಳು ನಡೆದರೂ ಅದು ಭದ್ರತಾ ಪಡೆಗಳಿಗೆ ಕಾನೂನು ಕ್ರಮಗಳ ವಿರುದ್ಧ ರಕ್ಷಣೆಯನ್ನು ನೀಡುತ್ತದೆ. ‘ಪ್ರಕ್ಷುಬ್ಧ’ ಎಂದು ಸರಕಾರವು ಪರಿಗಣಿಸಿದ ಪ್ರದೇಶಗಳಲ್ಲಿ ಬಂಡಾಯವನ್ನು ಎದುರಿಸಲು ಭದ್ರತಾ ಪಡೆಗಳಿಗೆ ನೆರವಾಗಲು ಈ ಕಾಯ್ದೆಯನ್ನು ತರಲಾಗಿತ್ತು.

ಮಾನವ ಹಕ್ಕುಗಳ ಉಲ್ಲಂಘನೆಯ ಹಲವಾರು ಘಟನೆಗಳು ವರದಿಯಾಗಿದ್ದ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರರು ಕಾಯ್ದೆಯನ್ನು ಹಿಂದೆಗೆದುಕೊಳ್ಳುವಂತೆ ದಶಕಗಳಿಂದಲೂ ಆಗ್ರಹಿಸುತ್ತಿದ್ದರು. ಕಾಯ್ದೆಯಡಿ ಅಧಿಕಾರಿಗಳನ್ನು ನಾಗರಿಕ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸುವಂತಿಲ್ಲ ಮತ್ತು ಸೇನೆಯ ಆಂತರಿಕ ಪ್ರಕ್ರಿಯೆಗಳು ಅಪಾರದರ್ಶಕವಾಗಿವೆ,ಹೀಗಾಗಿ ಕಾಯ್ದೆಯು ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ಮತ್ತು ಕ್ರಿಮಿನಲ್ ಕೃತ್ಯಗಳಲ್ಲಿ ಭಾಗಿಯಾಗುವ ಅಧಿಕಾರಿಗಳಿಗೆ ಅಫ್‌ಸ್ಪಾ ರಕ್ಷಣೆಯನ್ನು ನೀಡುತ್ತದೆ ಎನ್ನುವುದು ಕಾಯ್ದೆಯ ಟೀಕಾಕಾರರ ವಾದವಾಗಿದೆ. ಕಾಯ್ದೆಯಡಿ ಸ್ಥಳೀಯ ಪೊಲೀಸರು ನಾಗರಿಕ ನ್ಯಾಯಾಲಯಗಳಲ್ಲಿ ಸೇನೆ ಅಥವಾ ಅರೆ ಮಿಲಿಟರಿ ಪಡೆಗಳ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಲು ಕೇಂದ್ರ ಸರಕಾರದ ಪೂರ್ವಾನುಮತಿಯನ್ನು ಪಡೆಯುವುದು ಅಗತ್ಯವಾಗಿದೆ.

 ಕಳೆದ ವರ್ಷದ ಡಿ.4ರಂದು ನಾಗಾಲ್ಯಾಂಡ್‌ನ ಮೊನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಬಂಡಾಯ ನಿಗ್ರಹ ಕಾರ್ಯಾಚರಣೆಯಲ್ಲಿ 14 ನಾಗರಿಕರನ್ನು ಬಂಡುಕೋರರು ಎಂದು ತಪ್ಪಾಗಿ ಗ್ರಹಿಸಿ ಗುಂಡು ಹಾರಿಸಿ ಅವರನ್ನು ಹತ್ಯೆಗೈದಿದ್ದ ಘಟನೆ ಮತ್ತು ಇದಕ್ಕೆ ಪ್ರತೀಕಾರವಾಗಿ ಭುಗಿಲೆದ್ದಿದ್ದ ಹಿಂಸಾಚಾರದ ಬಳಿಕ ಅಫ್‌ಸ್ಪಾವನ್ನು ಹಿಂದೆಗೆದುಕೊಳ್ಳಬೇಕೆಂಬ ದಶಕಗಳ ಬೇಡಿಕೆ ಹೆಚ್ಚಿನ ಒತ್ತನ್ನು ಪಡೆದುಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X